"ಮಂತ್ರಿಗಿರಿಗಷ್ಟೇ ಈ ಉಪಚುನಾವಣೆ" ಎಂದು ಬಿಜೆಪಿ ಜರಿದ ಡಿ ಕೆ ಸುರೇಶ್
ರಾಮನಗರ, ನವೆಂಬರ್ 30: "ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮಂತ್ರಿಗಿರಿಗಾಗಿ ಅಷ್ಟೇ" ಎಂದು ಚುನಾವಣೆ ವಿರುದ್ಧ ರಾಮನಗರದಲ್ಲಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
"ಬಿಜೆಪಿ ನಾಲ್ಕು ತಿಂಗಳಿಂದ ನಡೆಸುತ್ತಿರುವ ಆಡಳಿತ ಜನರಿಗೆ ಸಮಾಧಾನ ತಂದಿಲ್ಲ. ನೆರೆ, ಬರ ಹಾಗೂ ಆರ್ಥಿಕ ವ್ಯವಸ್ಥೆ ಕುಸಿದು ಈಗಿನ ಯುವಕರು ಬಹಳ ಸಂಕಷ್ಟದಲ್ಲಿದ್ದಾರೆ. ರೈತರ ಕಷ್ಟ ಸುಖಗಳಿಗೂ ಬಿಜೆಪಿಯವರು ಸ್ಪಂದಿಸುತ್ತಿಲ್ಲ" ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.
"ಉಪ ಚುನಾವಾಣೆ ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಚುನಾವಣೆಯಲ್ಲ. ಮಂತ್ರಿಗಿರಿಗೆ ಆಸೆಪಟ್ಟು ಮಾತೃ ಪಕ್ಷಕ್ಕೆ ದ್ರೋಹ ಮಾಡಿ ಮಂತ್ರಿಯಾಗ್ತೀವಿ ಎಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರೆಲ್ಲರನ್ನು ತಿರಸ್ಕಾರ ಮಾಡಬೇಕು ಅಂತ ಎಲ್ಲಾ ಕ್ಷೇತ್ರದ ಮತದಾರರಲ್ಲಿ ಮೂಲಕ ಮನವಿ ಮಾಡುತ್ತೇನೆ" ಎಂದರು.

ಇನ್ನು ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಬಿಜೆಪಿ ಸರ್ಕಾರ ಚಿಕ್ಕಬಳ್ಳಾಪುರ ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಸಮಯದಲ್ಲೇ ಮೆಡಿಕಲ್ ಕಾಲೇಜು ಕನಕಪುರಕ್ಕೆ ಮಂಜೂರಾಗಿತ್ತು. ಕೇಂದ್ರ ಸರ್ಕಾರಕ್ಕೆ ಹಣಕಾಸಿನ ನೆರವಿಗೆ ಕಳುಹಿಸಿದರು.
ಈಗ ಚಿಕ್ಕಬಳ್ಳಾಪುರಕ್ಕೆ 900 ಕೋಟಿ ರೂ ಮಂಜೂರಾತಿಯಾಗಿದೆ. ರಾಜಕೀಯ ಕಾರಣದಿಂದ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಕಿತ್ತುಕೊಂಡು ಹೋಗಿದ್ದಾರೆ. ಚುನಾವಣೆ ಬಳಿಕ ಹೋರಾಟ, ರೂಪುರೇಷೆಗಳನ್ನು ರಚನೆ ಮಾಡುತ್ತೇವೆ" ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹತ್ತು ತಿಂಗಳ ನಂತರ ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳ ಬಗ್ಗೆ ಡಿ.ಕೆ.ಸುರೇಶ್ ಗರಂ ಆಗಿದ್ದರು. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ ಸಭೆಗೆ ಗೈರಾಗಿದ್ದು ಕಂಡ ಸಂಸದ ಡಿ.ಕೆ.ಸುರೇಶ್, ಟೌನ್ ಪಿಎಸ್ ಐ ಹೇಮಂತ್ ಕುಮಾರ್ ಮೂಲಕ ವಾರ್ನಿಂಗ್ ಕೊಟ್ಟರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications