Nikhil Kumaraswamy: ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ನಿಖಿಲ್ ಕುಮಾರಸ್ವಾಮಿ!
ರಾಮನಗರ, ಅಕ್ಟೋಬರ್ 24: ಸಿ. ಪಿ. ಯೋಗೇಶ್ವರ V/S ನಿಖಿಲ್ ಕುಮಾರಸ್ವಾಮಿ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಉಪ ಚುನಾವಣೆ ಕಣ ಅಂತಿಮವಾಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಇಡೀ ಕಾಂಗ್ರೆಸ್ ಸರ್ಕಾರ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರ ದಂಡು ಚನ್ನಪಟ್ಟಣದಲ್ಲಿ ಬೀಡು ಬಿಟ್ಟು ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಗೆಲುವು ಯಾರಿಗೆ?.
ಚನ್ನಪಟ್ಟಣ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೇಂದ್ರ ಸಚಿವ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿಯೇ ಘೋಷಣೆ ಮಾಡಿದ್ದಾರೆ. ಈಗ ಚನ್ನಪಟ್ಟಣದ ಉಪ ಚುನಾವಣೆ ಕಣದ ಲೆಕ್ಕಾಚಾರ ಆರಂಭವಾಗಿದೆ.

ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದ ಅಭ್ಯರ್ಥಿಯಾಗಬೇಕು ಎಂಬ ಒತ್ತಾಯ ಹಲವು ದಿನಗಳಿಂದ ಇತ್ತು. ಆದರೆ ಸಿ. ಪಿ. ಯೋಗೇಶ್ವರ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರು. ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಎಂದು ಘೋಷಣೆಯೂ ಆಯಿತು. ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನ. ಆದರೆ ಗುರುವಾರ ಸಂಜೆ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂದು ಘೋಷಣೆ ಮಾಡಲಾಗಿದೆ.
ನಿಖಿಲ್ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆ: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕಣಕ್ಕಿಳಿಯುವ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಒಮ್ಮೆ ಲೋಕಸಭೆಯಲ್ಲಿ ಮತ್ತೊಮ್ಮೆ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಲಾಂಚ್ ಮಾಡಿಸಲಾಗಲಿಲ್ಲ ಎನ್ನುವ ಕೊರಗು ಎಚ್. ಡಿ. ಕುಮಾರಸ್ವಾಮಿಯನ್ನು ಕಾಡುತ್ತಿದೆ.
ಅದು 2019ರ ಲೋಕಸಭೆ ಚುನಾವಣೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿತ್ತು. ಎಚ್. ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಕಾಂಗ್ರೆಸ್ ಸಹ ಅಭ್ಯರ್ಥಿ ಹಾಕದೇ ಅವರನ್ನು ಬೆಂಬಲಿಸಿತು.
ಆದರೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ 577,784 ಮತಗಳನ್ನು ಪಡೆದು ಸೋಲು ಕಂಡರು. ಎದುರಾಳಿಯಾಗಿ ಇದ್ದಿದ್ದು ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ. ಅಂಬರೀಶ್ ಸಾವಿನ ಬಳಿಕ ನಡೆದ ಚುನಾವಣೆಯಲ್ಲಿ ಅನುಕಂಪದ ಮತಗಳು ಸುಮಲತಾ ಅವರನ್ನು ಗೆಲ್ಲಿಸಿತು.
ಅದು 2023ರ ವಿಧಾನಸಭೆ ಚುನಾವಣೆ. ರಾಮನಗರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಭಾವ ಇರುವ ಕ್ಷೇತ್ರ, ತವರು ಜಿಲ್ಲೆ. ರಾಮನಗರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ ಬದಲು ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಮಂಡ್ಯದಲ್ಲಿ ಸೋತ ನಿಖಿಲ್ ರಾಮನಗರದಲ್ಲಿ ಗೆದ್ದು ಶಾಸಕರಾಗುತ್ತಾರೆ ಎಂದೇ ಅಂದಾಜಿಸಲಾಗಿತ್ತು.
ಚುನಾವಣೆಯಲ್ಲಿ ಎಲ್ಲಾ ಲೆಕ್ಕಾಚಾರ ಉಲ್ಟಾ ಆಯಿತು. ಕಾಂಗ್ರೆಸ್ನ ಹೆಚ್. ಎ. ಇಕ್ಬಾಲ್ ಹುಸೇನ್ 87690 ಮತಗಳನ್ನು ಪಡೆದು ಗೆದ್ದರು. ನಿಖಿಲ್ ಕುಮಾರಸ್ವಾಮಿ 76975 ಮತಗಳನ್ನು ಪಡೆದು ಸೋತರು. ಎರಡು ಚುನಾವಣೆಯಲ್ಲಿಯೂ ಸೋಲು ಕಂಡ ನಿಖಿಲ್ ಚನ್ನಪಟ್ಟಣದ ಹೆಸರು ಕೇಳಿ ಬಂದಾಗಲೆಲ್ಲಾ ನಾನು ಅಭ್ಯರ್ಥಿಯಲ್ಲ ಎಂದೇ ಹೇಳುತ್ತಿದ್ದರು.
ಆದರೆ ಸಿ. ಪಿ. ಯೋಗೇಶ್ವರ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಮೈತ್ರಿಕೂಟಕ್ಕೆ ಸಂಕಷ್ಟ ತಂದಿತು. ಶಿಗ್ಗಾವಿ, ಸಂಡೂರು ಬಿಜೆಪಿಗೆ ಬಿಟ್ಟುಕೊಟ್ಟಿದ್ದ ಜೆಡಿಎಸ್ಗೆ ಚನ್ನಪಟ್ಟಣಕ್ಕೆ ತನ್ನ ಅಭ್ಯರ್ಥಿ ಘೋಷಣೆ ಮಾಡುವುದು ಅನಿವಾರ್ಯವಾಗಿತ್ತು. ಜಯಮುತ್ತು ಅವರ ಹೆಸರು ಕೇಳಿಬಂದರೂ ಸಹ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಪರವಾಗಿದ್ದರು. ಅಂತಿಮವಾಗಿ ನಿಖಿಲ್ ಅಭ್ಯರ್ಥಿಯಾಗಿದ್ದು, ಈ ಬಾರಿಯಾದರೂ ಅದೃಷ್ಟ ಕೈ ಹಿಡಿಯಲಿದೆಯೇ? ಕಾದು ನೋಡಬೇಕಿದೆ.
ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹೊಂದಿರುವ ಪ್ರಭಾವ. ಬಿಜೆಪಿಯ ಬೆಂಬಲ ಚನ್ನಪಟ್ಟಣದಲ್ಲಿ ನಿಖಿಲ್ಗೆ ಬೆಂಬಲವಾಗಿದೆ. ಆದರೆ ಎದುರಾಳಿಯಾಗಿರುವುದು ಸಿ. ಪಿ. ಯೋಗೇಶ್ವರ. ಆದ್ದರಿಂದ ಚುನಾವಣೆ ಸುಲಭದ ತುತ್ತಲ್ಲ ಎಂಬುದು ಎಲ್ಲರಿಗೂ ತಿಳಿದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications