Channapatna: ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿ ಅಂತಿಮ, ಒಂದು ಷರತ್ತಿನ ಮೇಲೆ ಸೋಮವಾರ ಘೋಷಣೆ!
ರಾಮನಗರ, ಅಕ್ಟೋಬರ್ 20: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣ. ಈಗಾಗಲೇ ಬಿಜೆಪಿಗೆ ಎರಡು ಕ್ಷೇತ್ರಗಳನ್ನು ಬಿಟ್ಟುಕೊಟ್ಟಾಗಿದೆ. ಸಂಡೂರು, ಶಿಗ್ಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ ಚನ್ನಪಟ್ಟಣದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯಾರು?. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಆದರೆ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.
ಭಾನುವಾರ ಮಧ್ಯಾಹ್ನದ ಮಾಹಿತಿಯಂತೆ ಚನ್ನಪಟ್ಟಣದ ಅಭ್ಯರ್ಥಿ ಕುರಿತು ಬಿಜೆಪಿ-ಜೆಡಿಎಸ್ ಒಮ್ಮತಕ್ಕೆ ಬಂದಿವೆ. ಸೋಮವಾರ ಬೆಳಗ್ಗೆ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ ಘೋಷಣೆಯಾಗಲಿದೆ. ಮೈತ್ರಿ ಧರ್ಮದ ಆಧಾರದಲ್ಲಿ 2+1 ಸೀಟು ಹಂಚಿಕೆ ಸೂತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಚನ್ನಪಟ್ಟಣ ಕ್ಷೇತ್ರ ಸಿಗಲಿದೆ.

ಕೇಂದ್ರ ಸಚಿವ, ಮಂಡ್ಯದ ಸಂಸದ ಎಚ್. ಡಿ. ಕುಮಾರಸ್ವಾಮಿ ಸಹ ಬಿಜೆಪಿ ನಾಯಕರ ಸೂತ್ರಕ್ಕೆ ಒಪ್ಪಿಕೊಂಡಿದ್ದಾರೆ. ಅಭ್ಯರ್ಥಿಯ ಹೆಸರಿಗೆ ಅವರು ಸಹ ಅನುಮೋದನೆ ನೀಡಿದ್ದಾರೆ. ಆದರೆ ಅವರು ಹಾಕಿರುವ ಒಂದು ಷರತ್ತಿಗೊಳಪಟ್ಟು ಸೋಮವಾರ ಬೆಳಗ್ಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ.
ಯಾರಾಗಲಿದ್ದಾರೆ ಅಭ್ಯರ್ಥಿ?; ಚನ್ನಪಟ್ಟಣದ ಟಿಕೆಟ್ಗಾಗಿ ಸಿ. ಪಿ. ಯೋಗೇಶ್ವರ ಪ್ರಯತ್ನ ನಡೆಸಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ಕೇಂದ್ರ ನಾಯಕರನ್ನು ಸಂಪರ್ಕಿಸಿ ಸಿ. ಪಿ. ಯೋಗೇಶ್ವರ ಕಣಕ್ಕಿಳಿಸಲು ಒಪ್ಪಿಗೆಯನ್ನು ಪಡೆದಿವೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. ಸಿ. ಪಿ. ಯೋಗೇಶ್ವರ ಹಾಲಿ ಬಿಜೆಪಿಯಲ್ಲಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಆದರೆ ಎಚ್. ಡಿ. ಕುಮಾರಸ್ವಾಮಿ ಅವರ ಷರತ್ತು, ಮೈತ್ರಿ ಧರ್ಮದ ಮಾತಿನಂತೆ ಸಿ. ಪಿ. ಯೋಗೇಶ್ವರ ಜೆಡಿಎಸ್ ಪಕ್ಷದ ಚಿಹ್ನೆಯಿಂದ ಚನ್ನಪಟ್ಟಣದ ಉಪ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಚುನಾವಣೆಯಲ್ಲಿ ಅವರು ಗೆದ್ದರೆ ವಿಧಾನಸಭೆಯಲ್ಲಿ ಜೆಡಿಎಸ್ನ ಸಂಖ್ಯಾಬಲ 19ಕ್ಕೆ ಏರಿಕೆಯಾಗಲಿದೆ. 2023ರಲ್ಲಿ ಪಕ್ಷ 19 ಸ್ಥಾನದಲ್ಲಿ ಜಯಗಳಿಸಿತ್ತು. ಕುಮಾರಸ್ವಾಮಿ ರಾಜೀನಾಮೆ ಬಳಿಕ ಶಾಸಕರ ಸಂಖ್ಯೆ 18ಕ್ಕೆ ಇಳಿಕೆಯಾಗಿದೆ.
ಮೊದಲಿನಿಂದಲೂ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದ ಅಭ್ಯರ್ಥಿ ಜೆಡಿಎಸ್ ಪಕ್ಷದ ಚಿಹ್ನೆಯಿಂದ ಕಣಕ್ಕಿಳಿಯಬೇಕು ಎಂದು ಬೇಡಿಕೆ ಇಟ್ಟಿದ್ದರು. ಮೈತ್ರಿ ಧರ್ಮದ ಸೀಟು ಹಂಚಿಕೆಯಂತೆಯೂ ಶಿಗ್ಗಾವಿ, ಸಂಡೂರು ಬಿಜೆಪಿಗೆ, ಚನ್ನಪಟ್ಟಣ ಜೆಡಿಎಸ್ಗೆ ಎಂಬುದು ಅಂತಿಮವಾಗಿದೆ.
ಸಿ. ಪಿ. ಯೋಗೇಶ್ವರ ಸಹ ಜೆಡಿಎಸ್ ಪಕ್ಷದ ಚಿಹ್ನೆಯಿಂದ ಕಣಕ್ಕಿಳಿಯಲು ಒಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿ ಇದೆ. ಸೋಮವಾರ ಬೆಳಗ್ಗೆ ಬಿಜೆಪಿ & ಜೆಡಿಎಸ್ ನಾಯಕರು ಒಟ್ಟಾಗಿ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ ಪಕ್ಷಕ್ಕಿಂತ ಹೆಚ್ಚಾಗಿ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಆದ್ದರಿಂದ ಉಪ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾದರೆ ಮೂರು ಪಕ್ಷದ ಗೆಲುವಿನ ಲೆಕ್ಕಾಚಾರ ಬುಡಮೇಲು ಆಗಲಿದೆ. ಆದ್ದರಿಂದ ಜೆಡಿಎಸ್ನ ಷರತ್ತಿಗೆ ಬಿಜೆಪಿಯೂ ಒಪ್ಪಿಗೆ ನೀಡಿದೆ. ಆದ್ದರಿಂದ ಜೆಡಿಎಸ್ ಚಿಹ್ನೆಗೆ ಜೈ ಎಂದಿದೆ.
ಬಿಜೆಪಿಯಲ್ಲಿರುವ ಸಿ. ಪಿ. ಯೋಗೇಶ್ವರ ಪ್ರಸ್ತುತ ವಿಧಾನ ಪರಿಷತ್ ಸದಸ್ಯರು. ಅವರ ಸದಸ್ಯತ್ವದ ಅವಧಿ 2026ರ ತನಕ ಇದೆ. ಚನ್ನಪಟ್ಟಣ ಉಪ ಚುನಾವಣೆಗೆ ಜೆಡಿಎಸ್ನಿಂದ ಸ್ಪರ್ಧಿಸಬೇಕಾದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಶಾಸಕರಾಗಿ ಆಯ್ಕೆಯಾದರೆ ವಿಧಾನಸಭೆ ಪ್ರವೇಶ ಮಾಡುತ್ತಾರೆ. ಆದರೆ ಸೋತರೆ ಮುಂದಿನ ರಾಜಕೀಯ ನಡೆ ಏನು? ಎಂಬುದು ಚರ್ಚೆಯ ವಿಚಾರ.
ಚನ್ನಪಟ್ಟಣ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದೆ. ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನವೆಂಬರ್ 13ರಂದು ಮತದಾನ ಮತ್ತು ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ.
ಅಕ್ಟೋಬರ್ 18ರ ಶುಕ್ರವಾರ ಉಪ ಚುನಾವಣೆಯ ಅಧಿಸೂಚನೆಯೂ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25ರ ಶುಕ್ರವಾರ ಕೊನೆಯ ದಿನ. ಅಕ್ಟೋಬರ್ 28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ಬುಧವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications