ಚನ್ನಪಟ್ಟಣ: ಪ್ರಧಾನಿ ಮೋದಿ ಕಾರ್ಯಕ್ರಮಲ್ಲಿ ವೇದಿಕೆ ಹಂಚಿಕೊಂಡ ರೌಡಿ ಶೀಟರ್, ಫೋಟೋ ವೈರಲ್
ರಾಮನಗರ, ಮೇ, 01: ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದರು. ಈ ವೇಳೆ ನರೇಂದ್ರ ಮೋದಿ ಅವರ ಜೊತೆ ವೇದಿಕೆಯಲ್ಲಿ ರೌಡಿ ಶೀಟರ್ ಮುದ್ದುಕೃಷ್ಣ ಕಾಣಿಸಿಕೊಂಡಿರುವುದು ಇದೀಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.
ಚನ್ನಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕುಖ್ಯಾತ ರೌಡಿ ಮುದ್ದುಕೃಷ್ಣ ವೇದಿಕೆ ಹಂಚಿಕೊಂಡಿದ್ದಾರೆ. ಅಲ್ಲದೆ ಪಂಚಲೋಹದಿಂದ ತಯಾರಿಸಲಾಗಿದ್ದ ಅಪ್ರಮೇಯ ಅಂಬೆಗಾಲು ಕೃಷ್ಣನ ವಿಗ್ರಹವನ್ನು ರೌಡಿ ಮುದ್ದುಕೃಷ್ಣ ಮೋದಿ ಅವರಿಗೆ ಉಡುಗೊರೆ ನೀಡಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ.

ಇತ್ತೀಚೆಗಷ್ಟೇ ರೌಡಿಶೀಟರ್ ಫೈಟರ್ ರವಿಗೆ ಕೈ ಮುಗಿದಿದ್ದ ಮೋದಿ, ಇದೀಗ ಮತ್ತೊಬ್ಬ ರೌಡಿ ಶೀಟರ್ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿದ್ದಾರೆ. ಇದೀಗ ಇದಕ್ಕೆ ರೌಡಿ ಶೀಟರ್ ಮೋದಿ ಕಾರ್ಯಕ್ರದಲ್ಲಿ ಭಾಗವಹಿಸಿದ್ದು ಹೇಗೆ? ಭದ್ರತಾ ತಂಡ, ರಾಜ್ಯ ಬಿಜೆಪಿ ನಾಯಕರಿಗೂ ಈ ಬಗ್ಗೆ ಅರಿವಿಲ್ಲವೇ? ಎನ್ನುವ ಪ್ರಶ್ನೆಗಳು ಎದ್ದಿವೆ.
ಜನಸಾಮಾನ್ಯರು, ಮಾಧ್ಯಮದವರು ಕುರ್ಚಿಗಾಗಿ ಪರದಾಡುತ್ತಿದ್ದರು. ಇತ್ತ ನಟೋರಿಯಸ್ ರೌಡಿ ಶೀಟರ್ ಮುದ್ದುಕೃಷ್ಣ ಸುಲಭವಾಗಿ ವೇದಿಕೆ ಏರಿದ್ದ. ಫೈಟರ್ ರವಿ, ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಬೆತ್ತನಗೆರೆ ಶಂಕರ್, ಆನೇಕಲ್ ಮಂಜುನಾಥ್ ಅಲಿಯಾಸ್ ಉಪ್ಪಿ ಬಳಿಕ ಇದೀಗ ಕುಖ್ಯಾತ ರೌಡಿ ಶೀಟರ್ ಮುದ್ದುಕೃಷ್ಣ ಸರದಿ ಆಗಿದೆ.
ಭೂಗತ ಪಾತಾಕಿಗಳ ಜೊತೆ ನಂಟು ಹೊಂದಿರುವ ಚನ್ನಪಟ್ಟಣದ ಎಲೆಕೇರಿಯ ಮುದ್ದುಕೃಷ್ಣ ಸಿ.ಪಿ.ಯೋಗೇಶ್ವರ್ ಅವರ ಪರಮಾಪ್ತ ಆಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ರೌಡಿ ಶೀಟರ್ ಮೋದಿ ಜೊತೆ ವೇದಿಕೆ ಹಂಚಿಕೊಂಡಿರುವುದು ಇದೀಗ ಮೂಲ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ಖಂಡನೆ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ರೌಡಿ ಮೋರ್ಚಾಕ್ಕೆ ಮತ್ತೊಬ್ಬ ಸದಸ್ಯ ಸೇರ್ಪಡೆ ಎಂದು ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ ರೌಡಿ ಶೀಟರ್ ಕೈಯಲ್ಲಿ ಸನ್ಮಾನ ಸ್ವೀಕಾರ ಮಾಡಿರುವ ಪ್ರಧಾನಿ ಅವರದ್ದು ಇದೆಂತಹ ದೌರ್ಭಾಗ್ಯ ಎನ್ನುವ ಟೀಕೆಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿವೆ. ಹೀಗೆ ಸಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಎಚ್ಚೆತ್ತ ಪೊಲೀಸ್ ಇಲಾಖೆ ತನಿಖೆ ಪ್ರಾರಂಭಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications