ಅಂಬೇಡ್ಕರ್ ಭವನ ಉದ್ಘಾಟನೆ; ಮಾಜಿ ಸಿಎಂ V/S ಹಾಲಿ ಸಚಿವರ ಪ್ರತಿಷ್ಠೆ!
ರಾಮನಗರ, ಜನವರಿ 21: ಚನ್ನಪಟ್ಟಣದಲ್ಲಿ ಶುಕ್ರವಾರ ಡಾ. ಬಿ. ಆರ್. ಅಂಬೇಡ್ಕರ್ ಭವನ ಉದ್ಘಾಟನೆಗೆ ಸಿದ್ಧವಾಗಿದೆ. ಕಳೆದ 17 ವರ್ಷಗಳಿಂದ ಲೋಕಾರ್ಪಣೆಯಾಗದೇ ಪಾಳುಕೊಂಪೆಯಾಗಿದ್ದ ಕಟ್ಟಡಕ್ಕೆ ಈಗ ಮುಕ್ತಿ ಸಿಕ್ಕಿದೆ. ಚನ್ನಪಟ್ಟಣ ಶಾಸಕರಾದ ಎಚ್. ಡಿ. ಕುಮಾರಸ್ವಾಮಿ ಅವರಿಂದ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದೆ.
ಸಂಭ್ರಮದಿಂದ ನಡೆಯಬೇಕಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಪ್ರತಿಷ್ಠೆಯ ಕಣವಾಗಿದೆ. ತರಾತುರಿಯಲ್ಲಿ ಉದ್ಘಾಟನೆ ಬೇಡ ಎಂದು ಸಚಿವ ಯೋಗೇಶ್ವರ್ ಬೆಂಬಲಿಗರು ಅಪಸ್ವರ ಎತ್ತಿದ್ದಾರೆ.
ಗೊಂದಲ ನಡುವೆಯು ಚನ್ನಪಟ್ಟಣದ ಸಾತನೂರು ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಂಬೇಡ್ಕರ್ ಭವನ ಶುಕ್ರವಾರ ಉದ್ಘಾಟನೆಯಾಗಲಿದೆ. ಕ್ಷೇತ್ರದ ಶಾಸಕ ಎಚ್. ಡಿ. ಕುಮಾರಸ್ವಾಮಿ ಇದನ್ನು ಅಧಿಕೃತವಾಗಿ ತಿಳಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಸ್ವಾಮಿ ವಹಿಸಲಿದ್ದಾರೆ. ಭವನದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಡಲಿದ್ದಾರೆ. ಸಚಿವ ಯೋಗೇಶ್ವರ್ ಘನ ಉಪಸ್ಥಿತಿ ಇರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

4 ರಿಂದ 5 ಕೋಟಿ ಖರ್ಚು
"ಕಳೆದ 17 ವರ್ಷಗಳಿಂದ ಈ ಭವನ ಉದ್ಘಾಟನೆಯಾಗದೇ ಇದ್ದದ್ದು ಬೇಸರದ ವಿಚಾರ. ನಾನು ಕ್ಷೇತ್ರದ ಜನರಿಗೆ ಮಾತುಕೊಟ್ಟಿದ್ದೆ, ಹಾಗಾಗಿ 22 ನೇ ತಾರೀಕು ಭವನವನ್ನು ಉದ್ಘಾಟನೆ ಮಾಡಲಾಗುತ್ತೆ, ಈಗಾಗಲೇ 4 ರಿಂದ 5 ಕೋಟಿ ಹಣ ಖರ್ಚಾಗಿದೆ. ಜೊತೆಗೆ ಇನ್ನು 1 ರಿಂದ 2 ಕೋಟಿ ಹಣ ಬೇಕಾಗುತ್ತೆ ಎಂದು ಅಧಿಕಾರಿಗಳು ಹೇಳಿದ್ದಾರೆ" ಎಂದು ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಪರ -ವಿರೋಧ ಚರ್ಚೆಗಳು
ಶಾಸಕ ಎಚ್. ಡಿ. ಕುಮಾರಸ್ವಾಮಿ ತರಾತುರಿಯಲ್ಲಿ ಭವನವನ್ನು ಉದ್ಘಾಟನೆ ಮಾಡಲು ಹೊರಟ್ಟಿದ್ದಾರೆ. ಭವನದ ಕಾಮಗಾರಿ ಇನ್ನು ಪೂರ್ಣವಾಗಿಲ್ಲ. ಇಷ್ಟು ಆತುರವಾಗಿ ಉದ್ಘಾಟನೆ ಮಾಡಲು ಹೊರಟಿರುವುದು ಯಾಕೆ?. ಏಪ್ರಿಲ್ 14ಕ್ಕೆ ಭವನವನ್ನು ಉದ್ಘಾಟನೆ ಮಾಡಲಿ. ಶುಕ್ರವಾರ ಉದ್ಘಾಟನೆ ಮಾಡಿದರೆ ನಾವು ಉಗ್ರ ಹೋರಾಟ ಮಾಡುತ್ತೇವೆ. ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಸಚಿವ ಸಿ. ಪಿ. ಯೋಗೇಶ್ವರ್ ಬೆಂಬಲಿಗರು ಎಚ್ಚರಿಕೆ ಕೊಟ್ಟಿದ್ದಾರೆ.

ಜೆಡಿಎಸ್ ನಾಯಕರು ಹೇಳುವುದೇನು?
ಇದೇ ವಿಚಾರವಾಗಿ ಜೆಡಿಎಸ್ ಮುಖಂಡರು ಮಾತನಾಡಿದ್ದಾರೆ. ಭವನದ ಕಾಮಗಾರಿ ಶೇ 90ರಷ್ಟು ಮುಗಿದಿದೆ. ಭವನಕ್ಕೆ ಬೇಕಾಗಿರುವ ಪೀಠೋಪಕರಣಗಳು ಮಾತ್ರ ಬಾಕಿಯಿದೆ. ಈ ಬಗ್ಗೆ ಸ್ವತ: ಕುಮಾರಸ್ವಾಮಿಯವರು ಸಂಬಂಧಪಟ್ಟ ಇಲಾಖೆಯ ಸಚಿವರಾದ ಶ್ರೀರಾಮುಲು ಜೊತೆಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ಉದ್ಘಾಟನೆ ನಡೆಯಲಿದೆ
ಮುಂದಿನ ಒಂದು ವಾರದಲ್ಲಿ ಪೀಠೋಪಕರಣಗಳು ಭವನಕ್ಕೆ ಬರಬೇಕು. ಸಾರ್ವಜನಿಕರ ಸೇವೆಗೆ ಭವನವನ್ನು ನೀಡಬೇಕಾಗಿದೆ ಎಂದು ಶ್ರೀರಾಮುಲು ಅವರಿಗೆ ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ, ಕೆಲವರು ಕಾರ್ಯಕ್ರಮವನ್ನು ಹಾಳು ಮಾಡುವ ದೃಷ್ಟಿಯಿಂದ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಶುಕ್ರವಾರ ಭವನ ಉದ್ಘಾಟನೆಯಾಗಲಿದೆ ಎಂದು ಕುಮಾರಸ್ವಾಮಿ ಬೆಂಬಲಿಗರು ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications