Chennapatna By Election: ಒಂದೇ ಕ್ಷೇತ್ರದಲ್ಲಿ ತಾಯಿ, ಮಗ ಇಬ್ಬರನ್ನೂ ಸೋಲಿಸಿದ 'ಸೈನಿಕ'!
ರಾಮನಗರ, ನವೆಂಬರ್ 23: ಚನ್ನಪಟ್ಟಣದ ಚುನಾವಣೆ ಎಂದರೆ ಮಾಜಿ ಸಚಿವ ಸಿ. ಪಿ. ಯೋಗೇಶ್ವರ ಮತ್ತು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನಡುವಿನ ಹೋರಾಟ. 2024ರ ಉಪ ಚುನಾವಣೆಯಲ್ಲಿಯೂ ಇದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಪಟ್ಟಣದ 'ಸೈನಿಕ' ಖ್ಯಾತಿಯ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿಸಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ 2024ರ ಫಲಿತಾಂಶ ಶನಿವಾರ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ 1,12,642 ಮತಗಳನ್ನು ಪಡೆದು 25,413 ಮತಗಳ ಅಂತರದಿಂದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (87,229 ಮತ) ಸೋಲಿಸಿದ್ದಾರೆ.

ಈ ಮೂಲಕ ಸಿ. ಪಿ. ಯೋಗೇಶ್ವರ ಚನ್ನಪಟ್ಟಣದಲ್ಲಿ ಎಚ್. ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಸಿದ್ದಾರೆ. 2023ರ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಸೋತಿದ್ದ ಸೇಡನ್ನು 2024ರ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಪುತ್ರನನ್ನು ಸೋಲಿಸುವ ಮೂಲಕ ತೀರಿಸಿಕೊಂಡಿದ್ದಾರೆ ಯೋಗೇಶ್ವರ.
ತಾಯಿ, ಮಗ ಇಬ್ಬರ ಸೋಲು: ಸಿನಿಮಾ ಹೆಸರಿನಲ್ಲಿ 'ಸೈನಿಕ' ಎಂದೇ ಕರೆಸಿಕೊಳ್ಳುವ ಸಿ. ಪಿ. ಯೋಗೇಶ್ವರ ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೋಲಿಸಿದ್ದಾರೆ. ಅದರಲ್ಲೂ 2024ರ ಉಪ ಚುನಾವಣೆಯನ್ನು ಎಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆಯಾಗಿ ತೆಗೆದುಕೊಂಡು ಪುತ್ರನನ್ನು ಗೆಲ್ಲಿಸಬೇಕು ಎಂದು ಪಣ ತೊಟ್ಟಿದ್ದರು. ಆದರೆ ಡಿ. ಕೆ. ಶಿವಕುಮಾರ್ ತಂತ್ರದಿಂದ ಎಲ್ಲಾ ಲೆಕ್ಕಚಾರ ಉಲ್ಟಾ ಆಗಿದೆ.
ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ 2013ರ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸೋಲಿಸಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ ಅನಿತಾ ಕುಮಾರಸ್ವಾಮಿ 73,635 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದ ಸಿ. ಪಿ. ಯೋಗೇಶ್ವರ 80,099 ಮತಗಳನ್ನು ಪಡೆದು ಜಯಗಳಿಸಿದ್ದರು.
2024ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ 1,12,642 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ ಮೂಲಕ ಮತ್ತೆ ಸಿ. ಪಿ. ಯೋಗೇಶ್ವರ ಕೈ ಮೇಲಾಗಿದೆ.
2018ರ ಚುನಾವಣೆಯಲ್ಲಿ ಜೆಡಿಎಸ್ನ ಎಚ್. ಡಿ. ಕುಮಾರಸ್ವಾಮಿ 87,995 ಮತಗಳನ್ನು ಪಡೆದಿದ್ದರು. ಬಿಜೆಪಿಯ ಸಿ. ಪಿ. ಯೋಗೇಶ್ವರ 66,465 ಮತಗಳನ್ನು ಪಡೆದು ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು.
2023ರಲ್ಲಿ ಸಿ. ಪಿ. ಯೋಗೇಶ್ವರ ಬಿಜೆಪಿಯಿಂದ ಕಣಕ್ಕಿಳಿದು 80,677 ಮತಗಳನ್ನು ಪಡೆದು ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು. ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದರು.
ಬಿಜೆಪಿಯಲ್ಲಿದ್ದ ಸಿ. ಪಿ. ಯೋಗೇಶ್ವರ ಉಪ ಚುನಾವಣೆ ಟಿಕೆಟ್ ಸಿಗುವುದು ಅನುಮಾನವಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರಿದರು. ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್ ಪ್ರಭಾವ, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದ ಯೋಜನೆಗಳು, ಸಿ. ಪಿ. ಯೋಗೇಶ್ವರ ವೈಯಕ್ತಿಕ ಮತಗಳ ಕಾರಣ ಕಾಂಗ್ರೆಸ್ಗೆ ಚನ್ನಪಟ್ಟಣ ಸಿಕ್ಕಿದೆ. ನಿಖಿಲ್ ಕುಮಾರಸ್ವಾಮಿಗೆ ಮತ್ತೆ ಸೋಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications