ರಾಮನಗರದ ಸೋಲು ಅಂಬಿಗೆ ಗೆಲುವಿನ ಮೆಟ್ಟಿಲಾಯಿತು!
ರಾಮನಗರ, ನವೆಂಬರ್.26: ರಾಮನಗರಕ್ಕೂ ಅಂಬರೀಶ್ ಅವರಿಗೂ ಅವಿನಾಭಾವ ಸಂಬಂಧವಿದೆ. ಅದೊಂದು ರೀತಿಯಲ್ಲಿ ರಾಜಕೀಯವಾಗಿ ಆದ ನಂಟು ಎಂದರೂ ತಪ್ಪಾಗಲಾರದು. ಒಂದು ಸೋಲು ಮುಂದೆ ಗೆಲುವಿನ ಮೆಟ್ಟಲಾಗಬಹುದು ಎಂಬುದಕ್ಕೆ ಅಂಬರೀಶ್ ಅವರಿಗೆ ರಾಮನಗರದಲ್ಲಿ ಆದ ಸೋಲೇ ನಿದರ್ಶನ ಎಂದರೆ ತಪ್ಪಾಗಲಾರದು.
ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ 1997ರಲ್ಲಿ ನಡೆದ ಉಪಚುನಾವಣೆಯಲ್ಲಿ ಜನತಾದಳದ ಅಭ್ಯರ್ಥಿಯಾಗಿ ಅಂಬರೀಷ್ ಸ್ಪರ್ಧಿಸಿದ್ದು ಒಂದು ಆಕಸ್ಮಿಕ ಸಂದರ್ಭ ಎಂದರೆ ತಪ್ಪಾಗಲಾರದು. ಅದಕ್ಕೆ ಕಾರಣವೂ ಇತ್ತು. 1994ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಎಚ್.ಡಿ.ದೇವೇಗೌಡರು ರಾಮನಗರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾದರು.
ನಂತರ ದೇಶದ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆದು 1997 ರಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರು ಪ್ರಧಾನಿಯಾದರು. ಈ ವೇಳೆ ಅವರು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆಗ ಅವರ ಕ್ಷೇತ್ರದಿಂದ ಜನತಾದಳದಿಂದ ಉಪಚುನಾವಣೆಗೆ ಸ್ಪರ್ಧಿಸಿದವರು ಅಂಬರೀಶ್.
ಅವತ್ತು ಅಂಬರೀಶ್ ಅವರಿಗೆ ಪ್ರತಿಸ್ಪರ್ಧಿಯಾಗಿದ್ದವರು ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಿ.ಎಂ.ಲಿಂಗಪ್ಪ. ಇವರಿಬ್ಬರಿಗೂ ರಾಜಕೀಯವಾಗಿ ಭಾರೀ ಸ್ಪರ್ಧೆ ಏರ್ಪಟ್ಟಿತ್ತು.
ಚುನಾವಣೆಯನ್ನು ಎದುರಿಸಿ ಗೆಲ್ಲಲೇ ಬೇಕೆಂದು ಪಣತೊಟ್ಟ ಅವರು ಅವತ್ತು ಕ್ಷೇತ್ರದಲ್ಲಿ ಹುರುಪಿನಿಂದಲೇ ಓಡಾಡಿ ಮತ ಯಾಚಿಸಿದ್ದರು.

ಎಲ್ಲೆಡೆ ಉತ್ತಮ ಸ್ಪಂದನೆ
ಅಂದು ಅಂಬರೀಷ್ ಗೆ ಎಲ್ಲೆಡೆ ಉತ್ತಮ ಸ್ಪಂದನೆ ದೊರೆತಿತ್ತು. ಆದರೆ ಮತದಾನ ನಡೆದು ಚುನಾವಣಾ ಫಲಿತಾಂಶ ಬಂದಾಗ ಮಾತ್ರ ಎದುರಾಳಿ ಸಿ.ಎಂ. ಲಿಂಗಪ್ಪ ಅವರಿಗೆ 59,924 ಮತಗಳು ಹಾಗೂ ಅಂಬರೀಷ್ ಅವರಿಗೆ 50,314 ಮತಗಳು ದೊರೆತವು.

ಕ್ಷೇತ್ರದ ಒಡನಾಟ ಮರೆಯಲಿಲ್ಲ
ಸುಮಾರು 9610 ಮತಗಳ ಅಂತರದಿಂದ ಅಂಬರೀಶ್ ಅವರು ಸೋಲು ಕಾಣಬೇಕಾಯಿತು. ಆದರೆ ಆ ಸೋಲಿನ ಬಗ್ಗೆ ಅವರು ತಲೆ ಕೆಡಿಸಿಕೊಳ್ಳಲಿಲ್ಲ. ಜತೆಗೆ ಕ್ಷೇತ್ರದ ಒಡನಾಟವನ್ನು ಮರೆಯಲಿಲ್ಲ.

ಗೆಲುವಿನ ಸೋಪಾನವಾಯಿತು
ಮುಂದೆ ಅಂಬಿ ಮಂಡ್ಯದಿಂದ ಸ್ಪರ್ಧಿಸಿ ಕೇಂದ್ರದ ಸಚಿವರಾದರು. ರಾಜ್ಯದ ಸಚಿವರು ಆದರೂ ಎಂಬುದು ಗೊತ್ತೇ ಇದೆ. ಆದರೆ ರಾಮನಗರದಲ್ಲಾದ ಸೋಲು ಅವರಿಗೆ ಗೆಲುವಿನ ಸೋಪಾನವಾಯಿತು ಎಂಬುದಂತು ನಿಜ.

ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದ್ದರು
ಅವತ್ತಿನ ಅಂದರೆ 1997ರ ಉಪಚುನಾವಣೆಯ ದಿನಗಳನ್ನು ನೆನಪಿಸಿಕೊಂಡ ಕಾಂಗ್ರೆಸ್ ಮುಖಂಡ, ಸಿ.ಎಂ. ಲಿಂಗಪ್ಪ ಅವರ ಮುಂದೆ ಅಂಬರೀಶ್ ಸೋಲು ಕಂಡರೂ ಚುನಾವಣೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದ್ದರು. ಎಂದೂ ನನ್ನ ಬಗ್ಗೆ ಕೋಪ ತೋರಿಸಿದವರಲ್ಲ, ನಾವಿಬ್ಬರೂ ಭೇಟಿಯಾದಾಗ ತಮಾಷೆಯಾಗಿ ಮಾತನಾಡಿಸಿ ಕೀಟಲೆ ಮಾಡುತ್ತಿದ್ದ ಅಪರೂಪದ ವ್ಯಕ್ತಿ ಎಂಬುದಾಗಿ ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications