By-Elections: ಅಳೋ ಗಂಡಸನ್ನ ನಂಬಬಾರದು! ಹೆಚ್ಡಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ರಾಜ್ಯದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ ಮತ್ತು ಎನ್ಡಿಎ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು ಮೂರು ಕ್ಷೇತ್ರಗಳಲ್ಲಿ ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿಪಿ ಯೋಗೇಶ್ವರ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಳೋ ಗಂಡಸನ್ನ ನಂಬಬೇಡಿ ಎಂದು ಹೆಚ್ಡಿ ಕುಮಾರಸ್ವಾಮಿಯನ್ನು ಟೀಕಿಸಿದರು.
ಚನ್ನಪಟ್ಟಣದ ಕುಡ್ಲೂರು ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಳುವ ಗಂಡಸನ್ನು ನಂಬಬಾರದು ಎಂದು ನಮ್ಮ ಕಡೆ ಒಂದು ಗಾದೆ ಇದೆ. ಹೆಚ್ಡಿ ಕುಮಾರಸ್ವಾಮಿ ಅಳುವ ಗಂಡಸು, ಯಾವತ್ತೂ ಅವರನ್ನು ನಂಬಬೇಡಿ, ಅತ್ತರೆ ಜನರ ಸಮಸ್ಯೆ ಬಗೆಹರಿಯುತ್ತದಾ? ಕೆರೆಗಳು ತುಂಬುತ್ತವಾ? ರೈತರ ಜಮೀನಿಗೆ ನೀರು ಹರಿಯುತ್ತಾ? ಕ್ಷೇತ್ರದ ಅಭಿವೃದ್ಧಿ ಆಗುತ್ತಾ ಎಂದು ಪ್ರಶ್ನೆ ಮಾಡಿದರು.

ನಮಗೆ ಯಾರೂ ಕೂಡ ರಾಜಕೀಯಕ್ಕೆ ಬನ್ನಿ ಎಂದು ಕರೆದಿಲ್ಲ. ಜನಸೇವೆ ಮಾಡಬೇಕು ಎಂದು ನಾವೇ ಬಂದಿದ್ದೇವೆ, ಬಂದ ಮೇಲೆ ಕೆಲಸ ಮಾಡಬೇಕು. ಕಣ್ಣೀರು ಹಾಕಿದರೆ ಜನರ ಕೆಲಸ ಆಗಲ್ಲ, ನಾವು ಗ್ಯಾರಂಟಿ ಯೋಜನೆಗಳ ಮೂಲಕ 1.69 ಕೋಟಿ ಕುಟುಂಬಗಳಿಗೆ ನೆರವಾಗಿದ್ದೇವೆ. ನಮ್ಮ ಕೆಲಸವನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದ್ದೇವೆ ಎಂದರು.
ಜನಪರ ಯೋಜನೆಗಳು ಕೈ ಹಿಡಿಯುತ್ತವೆ
ನಮ್ಮ ಸರ್ಕಾರದ ಶಕ್ತಿ ಯೋಜನೆಯನ್ನು ಮೆಚ್ಚಿಕೊಂಡು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರೇ ಪತ್ರ ಬರೆದಿದ್ದಾರೆ. ಈ ಬಾರಿ ಹಾಸನಾಂಬೆ ಜಾತ್ರೆಯಲ್ಲಿ 21 ಲಕ್ಷ ಮಹಿಳೆಯರು ಹೋಗಿದ್ದಾರೆ, ಇದು ದಾಖಲೆ. ಇದಕ್ಕೆ ಶಕ್ತಿ ಯೋಜನೆ ಕಾರಣ ಎಂದರು.
ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ನಿಖಿಲ್ ಕುಮಾರಸ್ವಾಮಿಯನ್ನು ರಾಮನಗರಕ್ಕೆ ತಂದು ನಿಲ್ಲಿಸಿದರು, ಅಲ್ಲಿ ಕೂಡ ಅವರು ಸೋತಿದ್ದು ಈಗ ಚನ್ನಪಟ್ಟಣಕ್ಕೆ ಕರೆತಂದಿದ್ದಾರೆ. ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು, ಜನ ಮರುಳಾಗಿ ಮತ ಹಾಕುತ್ತಾರೆ ಎಂದು ನಿಖಿಲ್ಗೆ ಹೇಳಿಕೊಟ್ಟಿದ್ದಾರೆ. ಸೋಲಿನ ಭಯದಲ್ಲಿ ಇಡೀ ಫ್ಯಾಮಿಲಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದರು.
ಯೋಗೇಶ್ವರ್ ಗೆಲುವು ಖಚಿತ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 220 ಕೋರಿ ರೂಪಾಯಿ ಅನುದಾನ ಕೊಟ್ಟವನು ನಾನು. ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಟ್ಟ ಬಿಜೆಪಿ ಅನುದಾನ ಕೊಡದೆ ಸುಮ್ಮನಾಗಿತ್ತು, ನಾನು ಅಧಿಕಾರಕ್ಕೆ ಬಂದ ಬಳಿಕ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದರು.
ಯೋಗೇಶ್ವರ್ ಗೆ ಜನರ ಕಷ್ಟಸುಖ ಗೊತ್ತು. ದೇವೇಗೌಡರ ಕುಟುಂಬಕ್ಕೆ ಇದು ಗೊತ್ತಿಲ್ಲ. ಅವರಿಗೆ ಭಾವನಾತ್ಮಕವಾಗಿ ಮಾತಾಡೋದು, ಅಳೋದು ಮಾತ್ರ ಗೊತ್ತು. ಚನ್ನಪಟ್ಟಣದ ಅಭಿವೃದ್ಧಿಗೆ ಯೋಗೇಶ್ವರ್ ಗೆಲ್ಲಬೇಕು, ಕಣ್ಣೀರು ಹಾಕುವವರಲ್ಲ, ಇಲ್ಲಿ ಯೋಗೇಶ್ವರ್ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಟುಕರಿಗೆ ಕಣ್ಣೀರು ಬರಲ್ಲ ಎಂದು ದೇವೇಗೌಡರು ಹೇಳಿದ್ದಾರೆ, ಹಾಸನದಲ್ಲಿ ನಿಮ್ಮ ಮೊಮ್ಮಗನಿಂದ ನೂರಾರು ಹೆಣ್ಣು ಮಕ್ಕಳು ಕಣ್ಣೀರು ಹಾಕಿದ್ದಾರೆ. ಅಲ್ಲಿ ಹೋಗಿ ನಿಮ್ಮ ಕುಟುಂಬದವರು ಕಣ್ಣೀರು ಹಾಕಿದ್ದೀರಾ? ನಿಮ್ಮ ಮೊಮ್ಮಗನಿಂದ ಅನ್ಯಾಯಕ್ಕೆ ಒಳಗಾದ ಹೆಣ್ಣು ಮಕ್ಕಳ ಕಷ್ಟ ಕೇಳಿದ್ರಾ ಎಂದು ಪ್ರಶ್ನೆ ಮಾಡಿದರು.
ಚನ್ನಪಟ್ಟಣ ಕ್ಷೇತ್ರಕ್ಕೆ ಈಗಾಗಲೇ 500 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಕೊಟ್ಟಿದ್ದೇನೆ, ಇನ್ನೂ ಮೂರುವರೆ ವರ್ಷ ನಮ್ಮ ಸರ್ಕಾರ ಇರುತ್ತೆ, ಯೋಗೇಶ್ವರ್ ಗೆದ್ದ ಮೇಲೆ ಮತ್ತಷ್ಟು ಅನುದಾನ ಕೊಡ್ತೀನಿ. ಕ್ಷೇತ್ರದ ಅನುಕೂಲಕ್ಕಾಗಿ ಯೋಗೇಶ್ವರ್ ರನ್ನು ಗೆಲ್ಲಿಸಿ ಎಂದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications