KSRTC ಬಸ್ನಲ್ಲಿ ಟಿಕೆಟ್ ಗೋಲ್ಮಾಲ್: ಕಂಡಕ್ಟರ್ ಅಮಾನತು
ರಾಮನಗರ, ಜನವರಿ 16: ಕರ್ನಾಟಕ ಸರ್ಕಾರದ ಸಂಸ್ಥೆಗಳಾದ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿಯಲ್ಲಿ ಕೆಲಸ ಸಿಗುವುದೇ ಪುಣ್ಯ, ಒಮ್ಮೆ ಇಂತಹ ಸಂಸ್ಥೆಗಳಲ್ಲಿ ಕೆಲಸ ಸಿಕ್ಕರೆ ಸಾಕು ಎಂದು ಅನೇಕರು ಕೇಳಿಕೊಳ್ಳುತ್ತಿರುತ್ತಾರೆ. ಆದರೆ ಇನ್ನೂ ಕೆಲವರು ಕೆಲಸ ಸಿಕ್ಕ ಮೇಲೆ ತೋರುವ ನಿರ್ಲಕ್ಷ್ಯದಿಂದ ಬಹಳ ಸುಲಭವಾಗಿ ಕೆಲಸ ಕಳೆದುಕೊಳ್ಳುತ್ತಾರೆ. ಇಂತಹದ್ದೇ ಘಟನೆ ಇದೀಗ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ.
ಕನಕಪುರ ಡಿಪೋಗೆ ಸೇರಿದ KA42-F0746 ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕ ಕೆಲಸದ ಮೇಲೆ ತೋರಿದ ನಿರ್ಲಕ್ಷ್ಯದಿಂದ ಸದ್ಯ ಆತನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಚಾಲಕ ಕಂ ನಿರ್ವಾಹಕ ನವೀನ್ ಟಿ.ಎನ್ ಕರ್ತವ್ಯದಿಂದ ಅಮಾನತಾದ ಕೆಎಸ್ಆರ್ಟಿಸಿ ಸಿಬ್ಬಂದಿ.

ಕಂಡಕ್ಟರ್ ನವೀನ್ KA42-F0746 ಕೆಎಸ್ಆರ್ಟಿಸಿ ಬಸ್ನ ಚಾಲಕ ಹಾಗೂ ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದರು. ಜೊತೆಗೆ ತಮ್ಮ ಬಸ್ನಲ್ಲಿ ಖಾಸಗಿ ವ್ಯಕ್ತಿಗೆ ಕೆಲಸ ನೀಡಿದ್ದರು. ಕೆಎಸ್ಆರ್ಟಿಸಿ ಬಸ್ನ ಟಿಕೆಟ್ ಮಷಿನ್ ಅನ್ನು ಆ ಖಾಸಗಿ ವ್ಯಕ್ತಿಗೆ ನೀಡಿ ಟಿಕೆಟ್ ನೀಡುವಂತೆ ಹೇಳಿದ್ದರು ಎನ್ನಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಟಿಕೆಟ್ ನೀಡುತ್ತಿದ್ದ ಯುವಕ ಸಾಮಾನ್ಯವಾಗಿ ಮಹಿಳೆಯರಿಗೆ ಉಚಿತ ಟಿಕೆಟ್ ನೀಡುತ್ತಿದ್ದ ಆದರೆ ಪುರುಷರ ಟಿಕೆಟ್ ವಿಚಾರಕ್ಕೆ ಬಂದರೆ ಹಣ ಪಡೆದು ಟಿಕೆಟ್ ನೀಡದೇ ಯಾಮಾರಿಸುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.
ಪುರುಷರ ಬಳಿ ದುಡ್ಡು ಪಡೆದು ಟಿಕೆಟ್ ಕೊಡದೇ ಮುಂದೆ ಹೋಗುತ್ತಿದ್ದ. ಇದರಿಂದ ಪ್ರಯಾಣಿಕರಿಗೆ ಭಯವಾಗಿದ್ದು, ಮುಂದೆ ಚೆಕ್ಕಿಂಗ್ ಅಧಿಕಾರಿಗಳು ಬಂದರೆ ನಾವೇನು ಮಾಡುವುದು ಎಂದು ಟಿಕೆಟ್ ನೀಡುತ್ತಿದ್ದ ಯುವಕನನ್ನು ಪ್ರಶ್ನಿಸಿದ್ದಾರೆ. ಅಧಿಕಾರಿಗಳಿಗೆ ಮಾಮೂಲಿ ಕೊಡುತ್ತೇವೆ. ನಮ್ಮ ಬಸ್ಅನ್ನು ಯಾರೂ ಚೆಕ್ಕಿಂಗ್ ಮಾಡಲು ಬರುವುದಿಲ್ಲ. ಅದನೆಲ್ಲಾ ನಾನು ನೋಡಿಕೊಳ್ಳುತ್ತೇನೆ ಎಂದು ನೇರವಾಗಿ ಹೇಳುತ್ತಿದ್ದ.
ಕೆಎಸ್ಆರ್ಟಿಸಿ ಬಸ್ನಲ್ಲಿ ನಡೆಯುತ್ತಿದ್ದ ಈ ವ್ಯವಹಾರವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿ ಕೊನೆಗೆ ಕೆಎಸ್ಆರ್ಟಿಸಿ ಅಧಿಕಾರಿಗಳನ್ನು ತಲುಪಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಶಿಸ್ತುಪಾಲನಾ ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕ ಕಂ ನಿರ್ವಾಹಕ ನವೀನ್ ಟಿ.ಎನ್ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಕೆಎಸ್ಆರ್ಟಿಸಿ ಬಸ್ನಲ್ಲಿ ಟಿಕೆಟ್ ನೀಡುತ್ತಿದ್ದ ಯುವಕನ ವಿರುದ್ಧ ಕನಕಪುರ ಡಿಪೋ ಮ್ಯಾನೇಜರ್ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications