ಚನ್ನಪಟ್ಟಣ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ನಡುವೆ ಕಿತ್ತಾಟ
ರಾಮನಗರ, ಡಿಸೆಂಬರ್ 07: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರನ್ನು ಸಂಘಟಿಸುವ ದೃಷ್ಟಿಯಿಂದ ಕರೆದಿದ್ದ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದೆ.
ಪಟ್ಟಣದಲ್ಲಿ ಕರೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್ ಎದುರೇ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿ ಕಿತ್ತಾಡಿಕೊಂಡರು. ಹೊಂಗನೂರು ಜಿಲ್ಲಾ ಪಂಚಾಯಿತಿ ಸದಸ್ಯೆ ವೀಣಾಚಂದ್ರು ಹಾಗೂ ಮುಖಂಡ ಮಹಾಲಿಂಗು ನಡುವೆ ಗದ್ದಲ ನಡೆಯಿತು.
ಗ್ರಾಮ ಪಂಚಾಯಿತಿ ಚುನಾವಣೆಯ ಹೊಣೆಯನ್ನು ಆಯಾ ಜಿಲ್ಲಾ ಪಂಚಾಯಿತಿ ಸದಸ್ಯರು ನಿಭಾಯಿಸುವುದಾಗಿ ಭರವಸೆ ನೀಡುವ ಸಂದರ್ಭ ಹೊಂಗನೂರು ಜಿಲ್ಲಾ ಪಂಚಾಯಿತಿ ಸದಸ್ಯೆ ವೀಣಾಚಂದ್ರು ಅವರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಚುನಾವಣೆ ನಿಭಾಯಿಸುವುದಾಗಿ ವೇದಿಕೆ ಮೇಲೆ ಹೇಳಿದ ತಕ್ಷಣ ಸಿಟ್ಟಿಗೆದ್ದ ಕೆಲವರು ವೀಣಾಚಂದ್ರು ಅವರ ಉಸ್ತುವಾರಿ ನಮಗೆ ಬೇಡ ಎಂದು ವಿರೋಧಿಸಿದರು.

ವೇದಿಕೆಯ ಮೇಲಿದ್ದ ಸಂಸದ ಡಿ.ಕೆ.ಸುರೇಶ್ ಮಧ್ಯ ಪ್ರವೇಶ ಮಾಡಿ ಏನೇ ಗೊಂದಲ ಇದ್ದರೆ ಸರಿಪಡಿಸೋಣ, ಮಾಧ್ಯಮದವರು ಇದನ್ನೇ ತಪ್ಪಾಗಿ ಬಿಂಬಿಸುತ್ತಾರೆ ಎಂದು ಮುಖಂಡ ಮಹಾಲಿಂಗು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯೆ, ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಸಭೆ ಮುಗಿಸಿ ಸಂಸದ ಡಿ.ಕೆ.ಸುರೇಶ್ ವೇದಿಕೆಯಿಂದ ನಿರ್ಗಮಿಸುವ ವೇಳೆ ಮತ್ತೆ ಜಿಲ್ಲಾ ಪಂಚಾಯತಿ ಸದಸ್ಯೆ ವೀಣಾಚಂದ್ರು, ಅವರ ಮಗ ಸಾಗರ್ ಮುಖಂಡ ಮಹಾಲಿಂಗು ಮತ್ತವರ ಬೆಂಬಲಿಗರು ಬೈದಾಡಿಕೊಂಡು ಕೈಕೈ ಮಿಲಾಯಿಸುವ ಹಂತಕ್ಕೆ ಹೋದರು. ಇದರಿಂದ ವಿಚಲಿತರಾದ ಸಂಸದ ಡಿ.ಕೆ.ಸುರೇಶ್ ಇಬ್ಬರನ್ನೂ ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.
Recommended Video
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications