ಕಾಂಗ್ರೆಸ್ ಬಳಿ ಒಬ್ಬ ಟ್ರಬಲ್ ಶೂಟರ್, ನಮ್ಮ ಬಳಿ ಹತ್ತು ಟ್ರಬಲ್ ಕಿಲ್ಲರ್ಸ್: ಕಟ್ಟಾ
ಮಾಗಡಿ (ರಾಮನಗರ ಜಿಲ್ಲೆ), ಜುಲೈ 28: "ಕಾಂಗ್ರೆಸ್ಸಿಗರ ಬಳಿ ಒಬ್ಬ ಟ್ರಬಲ್ ಶೂಟರ್ ಇದ್ದರೆ, ನಮ್ಮ ಬಳಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ" ಎಂದು ಬಿಜೆಪಿಯ ಮುಖಂಡ ಕಟ್ಟಾ ಸುಬ್ರಮಣ್ಯಂ ನಾಯ್ಡು ವ್ಯಂಗ್ಯವಾಡಿದರು.
ಮಾಗಡಿಯಲ್ಲಿ ಮಾತನಾಡಿದ ಅವರು, "ಕೆಲವರಿಗೆ ಬಿಜೆಪಿಗೆ ಅಧಿಕಾರ ಬಂದಿರುವುದು ಅರ್ಜಿಣವಾಗಿದೆ. ಆಸೂಯೆ, ಅಸಂತೃಪ್ತಿ ಕೂಡ ಬಂದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಅಲ್ಲಿನ ಅತೃಪ್ತಿಯಿಂದ ಪಕ್ಷ ಬಿಟ್ಟು ಹೊರ ಬಂದಿದ್ದಾರೆ. ಈ ಹಿಂದೆ ಸಮಾಧಾನವಾಗಿದ್ದ ಆ ಶಾಸಕರ ಮೇಲೆ ಯಾವ ಟೀಕೆಯೂ ಇರಲಿಲ್ಲ. ಈಗ ಪಕ್ಷ ನಡೆಸಿಕೊಂಡಿರುವ ನಡವಳಿಕೆಯಿಂದ ಅವರಿಗೆ ಅಸಮಾಧಾನವಾಗಿದೆ. ಹೀಗಾಗಿ ಪಕ್ಷ ಬಿಟ್ಟಿದ್ದಾರೆ" ಎಂದರು.
ಆದರೆ, ಈಗ ಅಂತಹ ಶಾಸಕರನ್ನು ದುಷ್ಟರು, ಭ್ತಷ್ಟರು, ಭೂತಗಳು ಎಂದು ಸಮಾಜದಲ್ಲಿ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಜೆಡಿಎಸ್ ಹಾಗೂ ಕಾಂಗ್ರೆಸ್ ಬಳಿ ಇದ್ದಾಗ ಶಾಸಕರು ಸರಿ ಇದ್ದರು, ಈಗ ಅವರು ಭ್ರಷ್ಟರಾಗಿದ್ದಾರಾ ಎಂದು ಪ್ರಶ್ನಿಸಿದರು.

"ಇನ್ನು ಅತೃಪ್ತ ಶಾಸಕರು ನಮ್ಮನ್ನು ತಿಂದುಬಿಡುತ್ತಾರೆ ಎಂದು ಹೇಳಿದ್ದಾರೆ. ನಾವೇನು ಬಿರಿಯಾನಿಯಾ ತಿಂದು ಬಿಡುವುದಕ್ಕೆ?" ಎಂದು ಕಿಡಿ ಕಾರಿದರು.
'ಸಿದ್ದರಾಮಯ್ಯ ಅವರು ಸುಳ್ಳಿನ ಸೌಧ ಕಟ್ಟುತ್ತಿದ್ದಾರೆ. ಅವರ ಈ ಬುದ್ಧಿಯಿಂದಲೇ ಇಂದು ಕಾಂಗ್ರೆಸ್ ಸರ್ವನಾಶವಾಗಿದೆ. ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಶಾಸಕರನ್ನು ಅನರ್ಹ ಮಾಡಲು ಅವರಿಗೆ ಹಕ್ಕಿಲ್ಲ. ಇನ್ನು ಯಡಿಯೂರಪ್ಪ ಅವರ ಪದವಿ ಸ್ವೀಕಾರವೇ ಸರಿಯಲ್ಲ ಎನ್ನುವವರು ಕಾನೂನು ರೀತಿ ಹೋರಾಟ ಮಾಡಲಿ. ಸುಪ್ರೀಂ ಕೋರ್ಟ್, ಹೈ ಕೋರ್ಟ್ ಗೆ ಹೋಗಲಿ. ಅದನ್ನು ಬಿಟ್ಟು ಬರೀ ಮಾತನಾಡುವುದರಲ್ಲಿ ಏನಿದೆ" ಎಂದು ಪ್ರಶ್ನಿಸಿದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications