ಮಾಗಡಿ ಇಂದಿರಾ ಕ್ಯಾಂಟೀನ್ ಭ್ರಷ್ಟ ಪುಟ ತೆರೆದಿಟ್ಟ ಎಚ್.ಸಿ.ಬಾಲಕೃಷ್ಣ
ರಾಮನಗರ, ಮೇ 27: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಮಾಗಡಿಯಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಶುಚಿತ್ವನ್ನು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ತೆರೆದಿಟ್ಟಿದ್ದಾರೆ.
ಈ ಬಗ್ಗೆ ಬಾಲಕೃಷ್ಣ ಟ್ವೀಟ್ ಮಾಡಿದ್ದು, ಇಂತಹ ಆರೋಗ್ಯ ಎಮರ್ಜೆನ್ಸಿಯ ವೇಳೆಯೂ ಸುಳ್ಳು ಲೆಕ್ಕವನ್ನು ಮಾಗಡಿ ತಾಲೂಕು ಆಡಳಿತ ಸರಕಾರಕ್ಕೆ ನೀಡುತ್ತಿದೆ ಎಂದು ಆಪಾದಿಸಿದ್ದಾರೆ.
"ಕೊರೊನಾ ಎರಡನೇ ಅಲೆ ಎಲ್ಲೆಡೆ ತೀವ್ರವಾಗಿ ಹೆಚ್ಚಾಗಿದ್ದು .ಈ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಕ್ರಮವನ್ನು ಮುಂದುವರಿಸಿದೆ. ಈ ಸಂಕಷ್ಟದ ಸಂದರ್ಭದಲ್ಲಿ ಬಡವರು ಹಾಗೂ ಕೂಲಿಕಾರ್ಮಿಕರು ಆಹಾರ ಸೇವಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಆಹಾರದ ವ್ಯವಸ್ಥೆಯ ಆದೇಶ ಹೊರಡಿಸಿದೆ"ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದಾರೆ.

"ಕೇವಲ ಆದೇಶ ಹೊರಡಿಸಿದರೇ ಸಾಕೇ? ಸೂಕ್ತ ಕಾರ್ಯ ನಿರ್ವಹಣೆ ಇಲ್ಲದಿದ್ದರೆ ಈ ಪರಿಸ್ಥಿತಿ, ಕಳೆದ ಒಂದು ತಿಂಗಳಿನಿಂದ ಮಾಗಡಿ ಪಟ್ಟಣದ ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆ ತಯಾರಕರೇ ಇಲ್ಲಾ. ದಿನನಿತ್ಯ 900 ಮಂದಿ ಆಹಾರ ಸೇವಿಸುತ್ತಿದ್ದರೆ ಎಂದು ವರದಿ ನೀಡುತ್ತಾರೆ ಆದರೆ 900 ಮಂದಿಗೆ ಅಡುಗೆ ತಯಾರಿಸಲು ಬೇಕಾದ ಆಹಾರ ಸಾಮಗ್ರಿಗಳೇ ಇಲ್ಲ".
"ಹಾಗೂ ಆಹಾರ ತಯಾರಿಸುವ ಅಡುಗೆ ತಯಾರಕರು ಇಲ್ಲ, ಅಡುಗೆ ತಯಾರಿಸುವ ಸ್ಥಳದಲ್ಲಿ ಶುಚಿತ್ವ ಕೂಡ ಇಲ್ಲ ಹಾಗೂ ಗುಣಮಟ್ಟವಿಲ್ಲದ ಆಹಾರ ನೀಡುತ್ತಿದ್ದಾರೆ. ಇದರಿಂದ ಬಡವರು ಹಾಗೂ ಕೂಲಿಕಾರ್ಮಿಕರು ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಲು ಇಚ್ಛೆ ಪಡುವುದಿಲ್ಲ".
ಕರೋನಾ ಎರಡನೇ ಅಲೆ ಎಲ್ಲೆಡೆಯ ತೀವ್ರವಾಗಿ ಹೆಚ್ಚಾಗಿದ್ದು .ಈ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ಡೌನ್ ಕ್ರಮವನ್ನು ಮುಂದುವರಿಸಿದೆ. ಈ ಸಂಕಷ್ಟದ ಸಂದರ್ಭದಲ್ಲಿ ಬಡವರು ಹಾಗೂ ಕೂಲಿಕಾರ್ಮಿಕರು ಆಹಾರ ಸೇವಿಸಲು ತೊಂದರೆ ಅನುಭವಿಸುತ್ತಿದ್ದಾರೆ.
— HC Balakrishna (@HC_Balakrishna) May 26, 2021
ಇದರಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಆಹಾರದ ವ್ಯವಸ್ಥೆಯ ಆದೇಶ ಹೊರಡಿಸಿದೆ. 1/5 pic.twitter.com/1ZpCIAGE4i
"ದಿನನಿತ್ಯ 900 ಮಂದಿ ಆಹಾರ ಸೇವಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ, ಇಂತಹಾ ಕಷ್ಟದ ಸಮಯದಲ್ಲಿ ಬಡವರಿಗೆ ನೀಡುವ ಆಹಾರದಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅವ್ಯವಹಾರ ನೆಡೆಯುವುದನ್ನು ನೋಡಿ ಕಣ್ಣು ಮುಚ್ಚಿ ಕುಳಿತಿರುವುದು ಮಾಗಡಿ ತಾಲೂಕಿನ ಆಡಳಿತ ವೈಫಲ್ಯದ ಕೈಗನ್ನಡಿಯಾಗಿದೆ".
"ಮಾನ್ಯ ಜಿಲ್ಲಾಧಿಕಾರಿಗಳಿಗೆ ಈ ಮೂಲಕ ಮನವಿ ಮಾಡುತ್ತೇನೆ ತಾಲೂಕು ಆಡಳಿತದಲ್ಲಿ ಕೂಡಲೇ ಮಧ್ಯಪ್ರವೇಶಿಸಿ, ಈ ಅವ್ಯವಹಾರದ ಬಗ್ಗೆ ಕ್ರಮ ಜರುಗಿಸಿ , ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇನೆ"ಎಂದು ಎಚ್.ಸಿ.ಬಾಲಕೃಷ್ಣ ಸರಣಿ ಟ್ವೀಟ್ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications