ರಾಮನಗರದಲ್ಲಿ ಡ್ಯಾನ್ಸರ್ ಹುಡುಗಿ ಮೇಲೆ ಹಣ ತೂರಾಡಿ ಕುಣಿದು ಕುಪ್ಪಳಿಸಿದ ಕಾಂಗ್ರೆಸ್ ನಾಯಕರು
ರಾಮನಗರ, ನವೆಂಬರ್, 26: ಕಾಂಗ್ರೆಸ್ ಮುಖಂಡ ದೌಲತ್ ಷರೀಫ್ ಹುಟ್ಟಹಬ್ಬ ಹಿನ್ನೆಲೆ, ನಗರದ ರೈಲ್ವೆ ನಿಲ್ದಾಣ ಸಮೀಪದ ಹಾಲ್ವೊಂದರಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಕಾಂಗ್ರೆಸ್ ನಗರಸಭಾ ಸದಸ್ಯರಿಂದಲೇ ಪಾರ್ಟಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಹುಡುಗಿಯರನ್ನು ಕರೆಸಿ ಅವರ ಮೇಲೆ ಹಣ ತೂರಾಡುತ್ತಿರುವ ಕಾಂಗ್ರೆಸ್ ಸದಸ್ಯರ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ರಾಮನಗರದ 19ನೇ ವಾರ್ಡ್ನ ನಗರಸಭಾ ಸದಸ್ಯ ದೌಲತ್ ಷರೀಫ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾಲ್ವೊಂದರಲ್ಲಿ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರು ಕರೆಸಿದಂತಹ ಹುಡುಗಿಯರು ನೃತ್ಯ ಮಾಡಿದ್ದು, ಇವರ ಜೊತೆಗೆ ಕಾಂಗ್ರೆಸ್ ಕೆಲ ನಾಯಕರು ಕೂಡ ಹಣವನ್ನು ತೂರಾಡಿದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲೂ ಭಾರಿ ಆಕ್ರೋಶಗಳು ಭುಗಿಲೆದ್ದಿವೆ. ಅದರಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತವರೂರಿನಲ್ಲಿಯೇ ನಂಗನಾಚ್ ನಡೆದಿದ್ದು, ಡ್ಯಾನ್ಸರ್ ಹುಡುಗಿಯರ ಜೊತೆ ಕಾಂಗ್ರೆಸ್ ನಾಯಕರು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ. ಈ ದೊಂಬರಾಟದ ವಿರುದ್ಧ ಜನರು ಕಿಡಿಕಾರಿದ್ದು, ಇವರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ಮೋಜುಮಸ್ತಿ ಮಾಡಲು ಹೊರಟಿದ್ದಾರೆ ಎಂದು ಖಂಡಿಸಿದ್ದಾರೆ.
ಬಿಡದಿ: ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟ ವೈದ್ಯೆ
ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಕೆ.ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಲಂಚದ ಹಣದಲ್ಲೇ ಬಿಜೆಪಿಯವರು ಜನಸ್ಪಂದನಾ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದನ್ನು ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಅವರು, ಬಿಜೆಪಿಯವರು ಲಂಚದ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದನ್ನು ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಆದರೆ ಇಂದು ರಾಮನಗರದಲ್ಲಿ ದೌಲತ್ ಷರೀಫ್ ಹುಟ್ಟಹಬ್ಬ ಹಿನ್ನೆಲೆ, ಕಾಂಗ್ರೆಸ್ ನಾಯಕರು ಡ್ಯನ್ಸರ್ ಹುಡುಗಿ ಜೊತೆ ಹಣವನ್ನು ತೂರಾಡುತ್ತಾ ಕುಣಿದು ಕುಪ್ಪಳಿಸಿದ್ದಾರೆ.
ಸರ್ಕಾರಕ್ಕೆ ಸೆಡ್ಡು ಹೊಡೆದು ತಾತ್ಕಾಲಿಕ ಸೇತುವೆ ನಿರ್ಮಿಸಿದ ಸುಗ್ಗನಹಳ್ಳಿ ಗ್ರಾಮಸ್ಥರು