Mekedatu Padayatra Live: ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ
ರಾಮನಗರ, ಜನವರಿ 09; ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೇಕೆದಾಟುವಿನಿಂದ ಬೆಂಗಳೂರು ತನಕ ಪಾದಯಾತ್ರೆ ನಡೆಯಲಿದೆ.
ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದೆ. ರಾಮನಗರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಸಹ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನಕಪುರ ನಿವಾಸದಲ್ಲಿ ಶನಿವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಮೇಕೆದಾಟು ಪಾದಯಾತ್ರೆ ಆರಂಭಿಸುವುದಾಗಿ ಡಿ. ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ನಾಯಕರ ಪಾದಯಾತ್ರೆ ಹಿನ್ನಲೆಯಲ್ಲಿ ರಾಮನಗರ ಜಿಲ್ಲಾ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಕೋವಿಡ್ ನಿಯಮಗಳ ಅನ್ವಯ ಪಾದಯಾತ್ರೆ ಮಾಡಲು ಅವಕಾಶವಿಲ್ಲ. ಆದರೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಆರಂಭಿಸಲಿದ್ದಾರೆ. ಸರ್ಕಾರ ಏನು ಮಾಡಲಿದೆ? ಎಂದು ಕಾದು ನೋಡಬೇಕಿದೆ.



ಡಿ.ಕೆ.ಶಿವಕುಮಾರ್ ರವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಯೋಜನೆ ನೆನಪಾಗಲಿಲ್ಲವೇ..? ಈಗ ಪಾದಯಾತ್ರೆ ಮಾಡುವ ಬದಲು ಅಂದೇ ಯೋಜನೆಗೆ ಸಂಭಂದಪಟ್ಟ ಕೆಲಸಗಳನ್ನು ಮಾಡಿಸಬಹುದಿತ್ತಲ್ಲವೇ..?@DKShivakumar @siddaramaiah @INCKarnataka @BSBommai @BJP4Karnataka
— Sunil Kumar Karkala (@karkalasunil) January 9, 2022












Click it and Unblock the Notifications