Get Updates
Get notified of breaking news, exclusive insights, and must-see stories!

ಕಮಲಕ್ಕೆ ಕೈ ತೆನೆ ಒಡಕಿನ ಲಾಭ ಪಡೆದ ಕಮಲ, ಲಿಂಗಪ್ಪರ ಮಗ ಬಿಜೆಪಿಗೆ

Recommended Video

      ರಾಮನಗರದಲ್ಲಿ ಬಿಜೆಪಿ ಆಪರೇಷನ್ ಕಮಲ ಯಶಸ್ವಿ | ಕಾಂಗ್ರೆಸ್ ಎಂ ಎಲ್ ಸಿ ಮಗ ಬಿಜೆಪಿಗೆ | Oneindia Kannada

      ರಾಮನಗರ, ಅಕ್ಟೋಬರ್ 10: ವಿಧಾನಸಭೆ, ಬಿಬಿಎಂಪಿ ಚುನಾವಣೆಯಲ್ಲಿ ಸಿಗದ ಪ್ರತಿಫಲ ಇದೀಗ ಕಮಲ ಪಕ್ಷದ ನಾಯಕರಿಗೆ ದಕ್ಕಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಒಡಕಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. ಶಾಸಕ ಸಿ.ಎಂ ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರನ್ನು ಬಿಜೆಪಿ ಸೆಳೆದುಕೊಂಡಿದೆ.

      ರಾಮನಗರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತಿಕ್ಕಾಟದಿಂದಾಗಿ ಸರಿಯಾಗಿ ಅಭ್ಯರ್ಥಿ ಘೋಷಿಸಲು ಆಗದೆ ಪರದಾಟ ಶುರುವಾಗಿದೆ. ಈ ನಡುವೆ ವಿಧಾನಪರಿಷತ್ ಸದಸ್ಯ ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರು ಇಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ ರುದ್ರೇಶ್ ಅವರ ಜತೆ ಮಾತುಕತೆ ನಡೆಸಿ, ಕೊನೆಗೂ ಕಮಲ ಪಕ್ಷಕ್ಕೆ ಕಾಲಿಟ್ಟಿದ್ದಾರೆ.

      2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಮನಗರದಿಂದ ಕಣಕ್ಕಿಳಿದು ಜಯಗಳಿಸಿದ್ದರು. ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ.

      Congress MLC C M Lingappa’s son Chandrashekar Lingappa to join BJP

      ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿಗೆ ನಾವು ಬೆಂಬಲ ನೀಡುವುದಿಲ್ಲ. ಇತ್ತ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ ಎಂದು ಸಿಎಂ ಲಿಂಗಪ್ಪ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

      ಇಲ್ಲಿಯವರೆಗೂ ಬಿಜೆಪಿಯ ಯಾವುದೇ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಕ್ಕೆ ಪ್ರಯತ್ನಿಸಿದರೂ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಹೇಳಿದ್ದರು. ಆದರೆ, ಬಿಜೆಪಿ ಅವರ ಮಗ ಸೇರ್ಪಡೆಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಸ್ವಂತ ನಿರ್ಧಾರ ಕೈಗೊಳ್ಳುವ ಹಕ್ಕು ಅವನಿಗಿದೆ ಎಂದಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+