ಸುಮಲತಾ ಗೆಲುವು: ಮಂಡ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ ಕಾಂಗ್ರೆಸ್ ಮುಖಂಡ
ರಾಮನಗರ, ಮೇ 25: ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರನ್ನು ಗೆಲ್ಲಿಸಿದ ಜನರಿಗೆ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಧನ್ಯವಾದ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, 'ನಾನು ಮಂಡ್ಯದ ಮತದಾರನಾಗಿದ್ದರೆ ಖಂಡಿತವಾಗಿಯೂ ಸುಮಲತಾ ಅವರಿಗೆ ಮತ ಹಾಕುತ್ತಿದ್ದೆ' ಎಂದು ಹೇಳಿದ್ದಾರೆ.
ಸುಮಲತಾ ಅವರ ವಿರುದ್ಧ ನಡೆಸಿದ ದಾಳಿಗಳನ್ನು ನೋಡಿದಾಗ ಬೇರೆ ಹೆಣ್ಣುಮಕ್ಕಳಾಗಿದ್ದರೆ ಜರ್ಜರಿತರಾಗಿ ಓಡಿ ಹೋಗುತ್ತಿದ್ದರು. ಆದರೆ ಸುಮಲತಾ ಗಟ್ಟಿ ಮನಸ್ಸಿನವರು. ಹೊರಗಿನಿಂದ ಬಂದವರಿಗೆ ಮಣೆ ಹಾಕಲು ಆಗುವುದಿಲ್ಲ ಎಂದು ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಮಂಡ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಟ ಅಂಬರೀಷ್ ಅವರ ಮೇಲಿನ ಜನರಲ್ಲಿನ ಅಭಿಮಾನ ಸುಮಲತಾ ಅವರ ಗೆಲುವಿಗೆ ನೆರವಾಗಿದೆ. ಸುಮಲತಾ ಅವರಿಗೆ ಸುಮಲತಾ ಅವರಿಗೆ ಸ್ವಾಭಿಮಾನದ ಅಸ್ತ್ರ ವರದಾನವಾಯ್ತು. ಅತಿರಥ ಮಹಾರಥರು ಮೈತ್ರಿ ಅಭ್ಯರ್ಥಿ ಪ್ರಚಾರ ಮಾಡಿದ್ದರು.
ಮುಂದೆ ಯಾರಿಗೂ ಇಂತಹ ಐತಿಹಾಸಿಕ ಗೆಲುವು ಸಿಗುವುದಿಲ್ಲವೇನೋ. ಏಕಾಂಗಿಯಾಗಿ ಸ್ಪರ್ಧಿಸಿ ಗೆದ್ದ ಏಕೈಕ ಪಕ್ಷೇತರ ಅಭ್ಯರ್ಥಿ ಸುಮಲತಾ ಎಂದು ಹಾಡಿಹೊಗಳಿದರು.
ಬಳಿಕ ಅವರು ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಮಾಡಿಕೊಂಡಿರುವ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನಮಗೆ ಮೈತ್ರಿ ಬೇಡ. ಮೈತ್ರಿ ಮುಂದುಗರಿದರೆ ಕಾಂಗ್ರೆಸ್ ಶೇ 100ರಷ್ಟು ನಿರ್ನಾಮ ಆಗುವುದು ಸತ್ಯ. ಮೈತ್ರಿಯ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಪಕ್ಷ ಬೆಳೆಯಬೇಕು, ಹಾಗಾಗಿ ಮೈತ್ರಿ ಬೇಡ ಎಂದರು.
ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ವಿವೇಕ ಮೂಡಿರುವುದು ಜೆಡಿಎಸ್ ಅಧ್ಯಕ್ಷ ವಿಶ್ವನಾಥ್ ಅವರಿಗೆ. ಕಾಂಗ್ರೆಸ್ನಲ್ಲಿ ಎಚ್ಕೆ ಪಾಟೀಲ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಸಿಕ್ಕಿದ್ದರೂ ಕೆಲಸ ಇರಲಿಲ್ಲ. ಚುನಾವಣೆ ಫಲಿತಾಂಶ ಬಂತು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ ಎಂದು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications