ರಾಮನಗರ ತಾಲ್ಲೂಕು ಪಂಚಾಯತಿಯ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ರಾಮನಗರ, ಮೇ 20: ಇಂದು ನಡೆದ ರಾಮನಗರ ತಾಲ್ಲೂಕು ಪಂಚಾಯತಿ ಅಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಭದ್ರಯ್ಯ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ.
Recommended Video
ಚನ್ನಮಾನಹಳ್ಳಿ ತಾ.ಪಂ ಕ್ಷೇತ್ರದ ಜೆಡಿಎಸ್ ಸದಸ್ಯ ಭದ್ರಯ್ಯ ಕಾಂಗ್ರೆಸ್ ಬೆಂಬಲಿತರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಭದ್ರಯ್ಯ ಹೊರತುಪಡಿಸಿ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಭದ್ರಯ್ಯ ಅವಿರೋಧ ಆಯ್ಕೆಯಾಗಿದ್ದಾರೆಂದು, ಚುನಾವಣಾಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ ಘೋಷಿಸಿದರು.
14 ಸದಸ್ಯ ಬಲದ ತಾ.ಪಂ ನಲ್ಲಿ 8 ಸ್ಥಾನದಲ್ಲಿ ಜೆಡಿಎಸ್ ಮತ್ತು 6 ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಇನ್ನು ಉಳಿಕೆ ಒಂದು ವರ್ಷದ ಅವಧಿಗೆ ನಡೆದ ಚುನಾವಾಣೆಯಲ್ಲಿ ಜೆಡಿಎಸ್ ನ ಸದಸ್ಯರುಗಳಾದ ಭದ್ರಯ್ಯ, ಜಗದೀಶ್ ರನ್ನ ತನ್ನತ್ತ ಸೆಳೆದು ತಾ.ಪಂ ಅಧಿಕಾರದ ಗದ್ದುಗೆ ಎರಲು ಯಶಸ್ವಿಯಾಗಿದೆ.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಮನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಸಿಕ್ಕ ಅವಕಾಶಗಳೆಲ್ಲವನ್ನೂ ಕಾಂಗ್ರೆಸ್ ಬಳಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸ್ಥಳೀಯ ಮಟ್ಟದ ಚುನಾವಾಣೆಗಳಲ್ಲೂ ಪ್ರಾಬಲ್ಯ ಮೆರೆಯಲು ಯಾವ ರೀತಿಯ ಹೋರಾಟಕ್ಕೂ ಸಿದ್ಧ ಎಂದು ಸಾಬೀತುಪಡಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ತಾ.ಪಂ ಅಧ್ಯಕ್ಷ ಭದ್ರಯ್ಯ ಅವರನ್ನು, ಎಂಎಲ್ಸಿ ಸಿ.ಎಂ ಲಿಂಗಪ್ಪ, ಮಾಜಿ ಶಾಸಕ, ಎಚ್.ಸಿ ಬಾಲಕೃಷ್ಣ, ಜಿ.ಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಸೇರಿದಂತೆ ಎಲ್ಲಾ ಸದಸ್ಯರು ಮತ್ತು ಮುಖಂಡರು ಅಭಿನಂದಿಸಿದರು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications