ಮಾಗಡಿಯಲ್ಲಿ ಕಾಂಗ್ರೆಸ್ ಗೆ ಟಾಂಗ್ ನೀಡಿದ ಜೆಡಿಎಸ್, ಎ.ಮಂಜುಗೆ ಗಾಳ
ರಾಮನಗರ, ಅಕ್ಟೋಬರ್ 30: "ನಾನು ಈಗಾಗಲೇ ಮಾನಸಿಕವಾಗಿ ಜೆಡಿಎಸ್ ಸೇರಿದ್ದೇನೆ. ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಮಾಗಡಿಯ ಕೆಂಪೇಗೌಡ ಮೈದಾನದಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಅಧಿಕೃತವಾಗಿ ಜೆಡಿಎಸ್ ಸೇರುತ್ತೇನೆ" ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯರೂ ಆಗಿರುವ ಎ.ಮಂಜು ತಿಳಿಸಿದರು.
ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಮತ್ತು ನಾನು ಉತ್ತಮ ಸ್ನೇಹಿತರು. ಬಹಳ ವರ್ಷಗಳಿಂದಲೂ ವ್ಯಾಪಾರ- ವಹಿವಾಟು ಹಾಗೂ ರಾಜಕಾರಣವನ್ನು ಜೊತೆಜೊತೆಗೆ ಮಾಡುತ್ತಿದ್ದೇವೆ. ಆದರೆ ಸ್ನೇಹ ಬೇರೆ, ರಾಜಕಾರಣ ಬೇರೆ.
ಈ ಹಿಂದೆ ಬಿಜೆಪಿಯವರು ನನ್ನನ್ನು ಮಾಗಡಿ ಕ್ಷೇತ್ರದಿಂದ ಕಣಕ್ಕಿಳಿಸಲು ಬಹಳ ಪ್ರಯತ್ನಪಟ್ಟಿದ್ದಾರೆ. ಆದರೆ ನಾನು ದೇವೇಗೌಡರಿಗೆ ಮನಸ್ಸು ಕೊಟ್ಟಿದ್ದೇನೆ, ಕೊನೆಯವರೆಗೂ ಜೆಡಿಎಸ್ ನಲ್ಲೇ ಇರುತ್ತೇನೆಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಭಿನ್ನಮತೀಯ ಶಾಸಕ ಬಾಲಕೃಷ್ಣ ಜೆಡಿಎಸ್ ನಿಂದ ಕೈ ಪಾಳಯಕ್ಕೆ ಜಿಗಿದಿದ್ದಾರೆ. ಇದಕ್ಕೆ ತಿರುಗೇಟು ನೀಡುವಂತೆ ಕಾಂಗ್ರೆಸ್ ನ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಅವರನ್ನು ಜೆಡಿಎಸ್ ಗೆ ಸೆಳೆದಿದೆ.
ಆ ಪ್ರಯತ್ನವಾಗಿ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಡದಿ ಪಟ್ಟಣದಲ್ಲಿ ನೆಲ್ಲಿಗುಡ್ಡ ಕೆರೆಗೆ ಜೆಡಿಎಸ್ ವತಿಯಿಂದ ಬಾಗಿನ ಅರ್ಪಣೆ ಮತ್ತು ಗಂಗೆ ಪೂಜೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಪಕ್ಷದಿಂದ ಹೊರಬಂದು ಜೆಡಿಎಸ್ ಸೇರ್ಪಡೆಯಾಗುತ್ತಿರುವ ಎ.ಮಂಜು ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಬಿಡದಿ ಬಿಜಿಎಸ್ ಸರ್ಕಲ್ ನಿಂದ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ತೆರಳಿದರು.

ಸುಮಾರು ಎರಡು ಕಿ.ಮೀ ದೂರದಲ್ಲಿನ ನೆಲ್ಲಿಗುಡ್ಡ ಕೆರೆಗೆ ಬಾಗಿನ ಅರ್ಪಿಸಲಾಯಿತು. ಐದು ಸಾವಿರಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ಮತ್ತು ಎ.ಮಂಜು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗಿಯಾದರು. ಆ ಮೂಲಕ ಜೆಡಿಎಸ್ ನ ಭದ್ರಕೋಟೆ ಬಿಡದಿ ಎಂಬ ಸಂದೇಶವನ್ನು ರವಾನಿಸುವ ಯತ್ನ ನಡೆಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications