ರಾಮನಗರ ಜಿಲ್ಲಾ ಪ್ರಧಾನ ನ್ಯಾಯಾಧೀಶರಿಂದ ಕೊರೊನಾ ಜಾಗೃತಿ

ರಾಮನಗರ, ಡಿಸೆಂಬರ್ 3: ಮಾಸ್ಕ್ ಧರಿಸುವುದರಿಂದ ಕೋವಿಡ್-19 ಮಹಾಮಾರಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ರಾಮನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪ್ರಚಾರಾಂದೋಲನಕ್ಕೆ ಜಿಲ್ಲಾ ನ್ಯಾಯಾಧೀಶರು ಚಾಲನೆ ನೀಡಿದರು.

ರಾಮನಗರದ ವಿವಿಧ ವಾರ್ಡ್ ಗಳಲ್ಲಿ ಸಂಚರಿಸಿ ಮಾಸ್ಕ್ ವಿತರಿಸುವ ಮೂಲಕ, ಸಾರ್ವಜನಿಕರು ಮಾಸ್ಕ್ ಧರಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿಕೊಟ್ಟರು.

Ramanagara: Coronavirus Awareness By The Chief Justice Of Ramanagar District

ಇದೇ ಸಂದರ್ಭದಲ್ಲಿ ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಹೊರಗೆ ಹೋಗುವಾಗ ತಪ್ಪದೇ ಮಾಸ್ಕ್ ನ್ನು ಧರಿಸಿ ಹೋಗುವುದು ಸೂಕ್ತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+