ರಾಮನಗರಕ್ಕೆ ಕೊರೊನಾ ಲಗ್ಗೆ ಇಡಲು ಸರ್ಕಾರವೇ ಕಾರಣ ಎಂದ ಎಚ್ ಡಿಕೆ
ರಾಮನಗರ, ಏಪ್ರಿಲ್.23: ಬೆಂಗಳೂರು ಪಾದರಾಯನಪುರದಲ್ಲಿ ವೈದ್ಯರು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 121 ಮಂದಿಯನ್ನು ರಾಮನಗರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿತ್ತು. ಹೀಗೆ ಶಿಫ್ಟ್ ಆದ 121 ಆರೋಪಿಗಳ ಪೈಕಿ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ಇರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ತೀವ್ರ ವಿರೋಧದ ನಡುವೆಯೂ ಬೆಂಗಳೂರು ಪರಪ್ಪನ ಅಗ್ರಹಾರದಿಂದ ರಾಮನಗರ ಜಿಲ್ಲಾ ಕಾರಾಗೃಹಕ್ಕೆ 121 ಮಂದಿ ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿತ್ತು. ಸರ್ಕಾರದ ನಿರ್ಧಾರಕ್ಕೆ ಆರಂಭದಿಂದಲೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದರು.
ರಾಜ್ಯ ಸರ್ಕಾರವು ತೆಗೆದುಕೊಂಡ ನಿರ್ಧಾರದಿಂದ ರಾಮನಗರ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುವಂತಾ ಸ್ಥಿತಿ ನಿರ್ಮಾಣ ಮಾಡುವುದು ಬೇಡು ಎಂದು ಸಲಹೆ ನೀಡಿದ್ದರು. ಅದಾಗಿಯೂ ಸ್ಥಳಾಂತರಿಸಿದ್ದು, ಇದೀಗ ಸರ್ಕಾರಕ್ಕೆ ಟ್ವಿಟ್ಟರ್ ನಲ್ಲಿ ಹೆಚ್ಡಿಕೆ ಚಾಟಿ ಏಟು ಕೊಟ್ಟಿದ್ದಾರೆ.

ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಕುಮಾರಸ್ವಾಮಿ
ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ.

ರಾಮನಗರ ಜಿಲ್ಲೆಯ ಜನರಲ್ಲಿ ಕೊರೊನಾ ಭೀತಿ
ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ಗೆ ಕರೆದೊಯ್ಯಲಾಗಿದೆ. ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ.

ರಾಮನಗರಕ್ಕೆ ಕೊರೊನಾ ಲಗ್ಗೆ ಇಡಲು ಸರ್ಕಾರ ಕಾರಣ
ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ.

ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ
ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆ ಯವರು ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications