ಕೋವಿಡ್; ವೈದ್ಯಕೀಯ ಉಪಕರಣ ಕೊಡುಗೆ ಕೊಟ್ಟ ಟೊಯೋಟಾ
ರಾಮನಗರ, ಮೇ 24; ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಟೊಯೋಟಾ ಕಿರ್ಲೋಸ್ಕರ್ ಬಿಡದಿ ಘಟಕ ರಾಮನಗರ ಜಿಲ್ಲೆಗೆ ಸುಮಾರು 3.5 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದೆ.
ಈಗಾಗಲೇ ಜಿಲ್ಲೆಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಟೊಯೊಟಾ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣಗೆ ಹಸ್ತಾಂತರ ಮಾಡಿದೆ.
ಬೆಂಗಳೂರಿನಲ್ಲಿ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಹಾಗೂ ಹಿರಿಯ ವ್ಯವಸ್ಥಾಪಕ ಕಿರಣ್ 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ ಜಿಲ್ಲಾಡಳಿತದ ಪರವಾಗಿ ವೈದ್ಯಕೀಯ ಸಲಕರಣೆಗಳನ್ನು ಸ್ವೀಕರಿಸಿದರು.

8 ನೆಬಲೈಸರ್ಗಳು, 20 ಗ್ಲೂಕೋ ಮೀಟರ್ಗಳು, 5 ಆಂಬೂ ಬ್ಯಾಗ್, 48 ಪಲ್ಸ್ ಆಕ್ಸಿ ಮೀಟರ್, 200 ನೋಸಲ್ ಪ್ರಾಂಗ್ಸ್, 250 ಆಕ್ಸಿಜನ್ ಮಾಸ್ಕ್, 20 ಆಮ್ಲಜನಕ ಸಾಂದ್ರಕ ಹಾಗೂ 5 ಮಲ್ಟಿ ಪ್ಯಾರಾ ಬೆಡ್ ಸೈಡ್ ಮಾನೀಟರ್ಗಳನ್ನು ಟೊಯೋಟಾ ಕಂಪನಿ ಪ್ರತಿನಿಧಿಗಳು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿಗಳು, "ಈಗಾಗಲೇ ಜಿಲ್ಲೆಗೆ ಹಲವಾರು ರೀತಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿ ನೆರವಾಗಿದೆ. ಈಗ ಕೋವಿಡ್ ಸಂಕಷ್ಟದಲ್ಲಿ ಅಗತ್ಯವಾದ ವಿವಿಧ ವೈದ್ಯಕೀಯ ಸಲಕರಣೆಗಳನ್ನು ನೀಡಿದೆ. ಇನ್ನೊಂದು ವಾರದಲ್ಲಿ 30 ಆಮ್ಲಜನಕ ಸಾಂದ್ರಕ ಸರಬರಾಜು ಮಾಡಲಿದ್ದಾರೆ" ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications