ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ ಎಸ್ ಎಸ್ ಕಚೇರಿಗೆ ಸಚಿವ ಸಿ. ಪಿ. ಯೋಗೇಶ್ವರ್ ಭೇಟಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 25: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಣೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಸಣ್ಣ ನೀರಾವರಿ ಸಚಿವ ಸಿ. ಪಿ. ಯೋಗೇಶ್ವರ್ ನಿಧಿ ಸಂಗ್ರಹದಲ್ಲ ಪಾಲ್ಗೊಂಡರು, ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದರು.

ಭಾನುವಾರ ಚನ್ನಪಟ್ಟಣದ ಕನಕನಗರ ಬಡಾವಣೆಯಲ್ಲಿ ಸಚಿವ ಸಿ. ಪಿ. ಯೋಗೇಶ್ವರ್ ಮನೆ ಮನೆಗೆ ತೆರಳಿ ನಿಧಿ ಸಂಗ್ರಹ ಮಾಡಿದರು. ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು‌ ಸಂಘ ಪರಿವಾರದ ಸದಸ್ಯರೊಂದಿಗೆ ಬಡಾವಣೆಯ ಬೀದಿಗಳಲ್ಲಿ ಸಂಚಾರ ಮಾಡಿದರು.

ಚನ್ನಪಟ್ಟಣಕ್ಕೆ ಸಚಿವ ಯೋಗೇಶ್ವರ್ ಆಗಮನ; ಅದ್ದೂರಿ ಸ್ವಾಗತಚನ್ನಪಟ್ಟಣಕ್ಕೆ ಸಚಿವ ಯೋಗೇಶ್ವರ್ ಆಗಮನ; ಅದ್ದೂರಿ ಸ್ವಾಗತ

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮುಕ್ತ ಮನಸ್ಸಿನಿಂದ ದೇಣಿಗೆ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು. ಹಾಗೂ ಯಾವುದೇ ಒತ್ತಾಯವಿಲ್ಲ ತಮ್ಮ ಶಕ್ತಿ‌ ಅನುಸಾರ ದೇಣಿಗೆ ನೀಡುವಂತೆ ಜನರಿಗೆ ಕರೆ ನೀಡಿದರು.
ನಿಧಿ ಸಂಗ್ರಹಣೆಯಲ್ಲಿ ಹಣ ನೀಡಿದ ಜನರಿಗೆ ಸಚಿವರು 100 ರೂಪಾಯಿಯ ಕೂಪನ್ ನೀಡಿದರು.

ಸಿಪಿ ಯೋಗೇಶ್ವರ್‌ಗೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು? ಸಿಪಿ ಯೋಗೇಶ್ವರ್‌ಗೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?

 CP Yogeshwar Visited RSS Office At Chennapatna

ಶ್ರೀರಾಮ ಮಂದಿರ ನಿರ್ಮಾಣದ ಮಾಹಿತಿ ಇರುವ ಕಿರು ಹೊತ್ತಿಗೆಯನ್ನು ನೀಡದ ಸಚಿವರು ಜನರು ಬ್ಯಾಂಕ್ ಮೂಲಕವು ಮಂದಿರ ನಿರ್ಮಾಣಕ್ಕೆ ತಮ್ಮ ದೇಣಿಗೆಯನ್ನು ನೀಡಬಹುದು ಎಂದು ಮಾಹಿತಿ ನೀಡಿದರು. ಚನ್ನಪಟ್ಟಣದಲ್ಲಿ ಸಚಿವರು ನಿಧಿ ಸಂಗ್ರಹಣೆ ಕಾರ್ಯವನ್ನು ಇನ್ನೂ ಮೂರು ದಿನಗಳ ಕಾಲ ನಡೆಸಲಿದ್ದಾರೆ.

2ನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಲಿರುವ ಸಿಪಿ ಯೋಗೇಶ್ವರ್ ವ್ಯಕ್ತಿಚಿತ್ರಣ 2ನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಲಿರುವ ಸಿಪಿ ಯೋಗೇಶ್ವರ್ ವ್ಯಕ್ತಿಚಿತ್ರಣ

ಆರ್ ಎಸ್ ಎಸ್ ಕಚೇರಿಗೆ ಭೇಟಿ; ಸಣ್ಣ ನೀರಾವರಿ ಸಚಿವ ಸಿ. ಪಿ. ಯೋಗೇಶ್ವರ್ ಚನ್ನಪಟ್ಟಣದಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಕ್ಕೆ ತೆರಳುವ ಮಾರ್ಗದಲ್ಲಿ ರಾಮನಗರದ ಕಾಮನಗುಡಿ ಸರ್ಕಲ್‌ ಬಳಿ ಇರುವ ಸಂಘ ಪರಿವಾರದ ಕಚೇರಿಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

 CP Yogeshwar Visited RSS Office At Chennapatna

Recommended Video

ರಾಜ್ಯದಲ್ಲಿ ಗಣಿಗಾರಿಕೆ ಅವಶ್ಯಕತೆ ಇದೆ, ಆದ್ರೆ illegal mining ವಿರುದ್ಧ ನಿರ್ದಾಕ್ಷಿಣ್ಯ ಕ್ರಮ- CM BSY | Oneindia Kannada

ರಾಮನಗರದ ಸಂಘ ಪರಿವಾರದ ಕಚೇರಿಯಲ್ಲಿ ಕೆಲವು ಆರ್ ಎಸ್ ಎಸ್ ಪ್ರಮುಖರ ಜೊತೆ ಸಚಿವರು ಸಭೆಯನ್ನು ಕೂಡ ನಡೆಸಿದ್ದಾರೆ. ಆದರೆ, ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಯಾರು ಎಲ್ಲೂ ಗುಟ್ಟುಬಿಟ್ಟುಕೊಟ್ಟಿಲ್ಲ.

English summary
Minister for minor irrigation C. P. Yogeshwar participated in a drive to collect donations for Ram Mandir at Ayodhya. He also visited RSS office at Chennapatna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X