ಕಾರು ಅಪಘಾತ ಪ್ರಕರಣ: ಸಿಟಿ ರವಿ ಕಾರಿನ ಚಾಲಕ ಅರೆಸ್ಟ್
ಕುಣಿಗಲ್, ಫೆಬ್ರವರಿ 20: ಶಾಸಕ ಸಿಟಿ ರವಿ ಅವರಿದ್ದ ಕಾರು ಇಬ್ಬರ ಮೇಲೆ ಹರಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಿಟಿ ರವಿ ಕಾರು ಅಪಘಾತ ಪ್ರಕರಣ: ಬಿಜೆಪಿ ನೀಡಿದ ಸ್ಪಷ್ಟೀಕರಣವೇನು?
ಮಂಗಳವಾರ ಬೆಳಗಿನ ಜಾವ ಚಿಕ್ಕಮಗಳೂರಿನಿಂದ ಹಿಂದಿರುಗಬೇಕಾದರೆ ಸಿಟಿ ರವಿ ಕುಳಿತಿದ್ದ ಕಾರು ರಸ್ತೆಯ ಪಕ್ಕದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಇಬ್ಬರು ಯುವಕರ ಮೇಲೆ ಹರಿದು ಆ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರು.
ಬಿಜೆಪಿ ಶಾಸಕ ಸಿಟಿ ರವಿ ಅವರಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರ ದುರ್ಮರಣ
ಸಿಟಿ ರವಿ ಹಾಗೂ ಚಾಲಕ ಆಕಾಶ್ಗೂ ಸಣ್ಣ ಪುಟ್ಟ ಗಾಯಗಳಾಗಿದ್ದವು. ಆಕಾಶ್ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಕಡೆಯಿಂದ ತೆರಳುತ್ತಿದ್ದ ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಾ.ಹೆ.75ರ ಟರ್ಕೇನಹಳ್ಳಿ ಗೇಟ್ ಬಳಿ ನೋಡನೋಡುತ್ತಿದ್ದಂತೆ ರಸ್ತೆ ಬದಿಯಿದ್ದ ಇಬ್ಬರು ಯುವಕರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದರು.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾತ್ರಿ ಕಾರು ಚಾಲಕನನ್ನು ಪಟ್ಟಣ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.