ಕಾಂಗ್ರೆಸ್ ಸಮಾವೇಶದಲ್ಲಿ ಕಾಣೆಯಾದ ಪರಮೇಶ್ವರ್ ಪೋಟೋ: ಸಭೆ ಬಹಿಷ್ಕಾರ
ರಾಮನಗರ, ಡಿಸೆಂಬರ್ 09: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಫೋಟೊ ಇಲ್ಲದ ಕಾರಣ, ಸಭೆಯನ್ನು ಬಹಿಷ್ಕರಿಸಲಾಗಿದೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿರುವ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ತಾಲ್ಲೂಕಿನ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರ ಸಭೆಗಳನ್ನು ಹಮ್ಮಿದ್ದಾರೆ. ಅದರ ಮೂಲಕ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡುತ್ತಿದ್ದಾರೆ ಆದರೆ ದರೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬಾವಚಿತ್ರ ಬಳಸದೆ ಕಡೆಗಣಿಸಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ

ತಿಪ್ಪಸಂದ್ರ ಹೋಬಳಿಯ ಕಾರ್ಯಕರ್ತರ ಸೇರ್ಪಡೆ ಮತ್ತು ಕಾಂಗ್ರೆಸ್ ಸಮಾವೇಶದ ಯಾವುದೇ ಪ್ಲೆಕ್ಸ್ ಹಾಗೂ ಬ್ಯಾನರ್ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರವರ ಭಾವಚಿತ್ರವನ್ನ ಹಾಕಿಲ್ಲ ಎಂದು ದಲಿತ ಸಂಘಟನೆಗಳು ಸಮಾವೇಶವನ್ನು ಬಹಿಷ್ಕಾರ ಮಾಡಿದ ಘಟನೆ ಮಾಗಡಿಯಲ್ಲಿ ನಡೆದಿದೆ.
ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಬಂಡಾಯ ಶಾಸಕ ಹೆಚ್.ಸಿ.ಬಾಲಕೃಷ್ಣ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಕಾಂಗ್ರೆಸ್ ಸಮಾವೇಶದ ಬ್ಯಾನರ್ಗಳಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರ ಭಾವಚಿತ್ರಗಳನ್ನ ಹಾಕಿದ್ದಾರೆ ಅದರೆ ಕೆಪಿಸಿಸಿ ಅಧ್ಯಕ್ಷರ ಭಾವಚಿತ್ರವನ್ನ ಹಾಕದಿರುವುದಕ್ಕೆ ದಲಿತ ಸಂಘಟನೆಯ ಕಾರ್ಯಕರ್ತರು ಕಿಡಿಕಾರಿದ್ರು. ಈಗಲೇ ಬಾಲಕೃಷ್ಣ ದಲಿತರನ್ನ ದೂರವಿಡುವ ಕೆಲಸವನ್ನ ಮಾಡುತ್ತಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದರು.

ಶಾಸಕರು ಇನ್ನು ಅಧಿಕೃತವಾಗಿ ಕಾಂಗ್ರೆಸ್ ಸೇರುವ ಮಾದಲೇ ಕೆಪಿಸಿಸಿ ಅಧ್ಯಕ್ಷರನ್ನು ಕಡೆಗಣಿಸಿದ್ದಾರೆ. ಕಾರ್ಯಕ್ರಮದಲ್ಲಿ ಬ್ಯಾನರ್ ಮತ್ತು ಪ್ಲೆಕ್ಸ್ ಗಳಲ್ಲಿ ಡಾ,ಪರಮೇಶ್ವರ್ ರವರ ಬಾವಚಿತ್ರ ಬಳಸದಿರುವುದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಕಿಡಿಕಾರಿದರು.

ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಶಾಸಕರ ವರ್ತನೆ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತಿದೆ. ಈ ಬಗ್ಗೆ ಕೆಪಿಸಿಸಿಗೆ ದೂರು ನೀಡುವುದಾಗಿ ದಲಿತ ಮುಖಂಡರು ತಿಳಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications