ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ವರ್ ಗೆ ಮತ ನೀಡಲ್ಲ ಎಂದು ಪ್ರತಿಭಟನೆ ನಡೆಸಿದ ದಲಿತರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ.‌ 08 : ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರನ್ನು ದಲಿತರು ಮತ್ತು ಛಲವಾದಿಗಳು ಬೆಂಬಲಿಸಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಶಿವರಾಮ್
ಹೇಳಿಕೆ ನೀಡಿರುವುದನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಯೋಗೇಶ್ವರ್ ಒಬ್ಬ ಸುಳ್ಳು ಶಾಸಕ. ಕಳೆದ 19 ವರ್ಷದಿಂದ ದಲಿತರ ಹೆಸರಲ್ಲಿ ಅಧಿಕಾರ ಹಿಡಿದಿದ್ದಾರೆ. ಆದರೆ ತಾಲೂಕಿನಲ್ಲಿ ದಲಿತರ ಅಭಿವೃದ್ಧಿ ಮಾಡಿಲ್ಲ. ಅಲ್ಲದೆ, ತಮ್ಮ ಚುನಾವಣಾ ಪ್ರಚಾರ ಕೈಪಿಡಿಯಲ್ಲಿ ಅಂಬೇಡ್ಕರ್ ಭವನ ಪೂರ್ಣಗೊಳಿಸಿರುವುದಾಗಿ ಹೇಳಿದ್ದಾರೆ.

ಸಿ.ಪಿ.ಯೋಗೇಶ್ವರ್ ಗೆ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ ಪರೋಕ್ಷ ಬೆಂಬಲ ಸಿ.ಪಿ.ಯೋಗೇಶ್ವರ್ ಗೆ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ ಪರೋಕ್ಷ ಬೆಂಬಲ

ಭವನ ಲೋಕಾರ್ಪಣೆಯಾಗದೆ ಶಿಥಿಲವಾಸ್ಥೆಗೆ ತಲುಪುತ್ತಿದೆ ಎಂದು ದಲಿತರು ಆರೋಪಿಸಿದರು.

Dalits protested against Yogeshwar for not voting

ಪಟ್ಟಣದ ಅಂಬೇಡ್ಕರ್ ಭವನದ ಎದರು ಯೋಗೇಶ್ವರ್ ಮತ್ತು ಕೆ.ಶಿವರಾಮ್ ವಿರುದ್ಧ ಪ್ರತಿಭಟನೆ ನಡೆಸಿದ ಸಂಘಟನೆಗಳ ಕಾರ್ಯಕರ್ತರು ಯೋಗೇಶ್ವರ್ ಚುನಾವಣಾ ಕರಾಪತ್ರ ಹಾಗೂ ಕೈ ಪಿಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಈ ಬಾರಿ ಯೋಗೇಶ್ವರ್ ಗೆ ದಲಿತರು ಮತ ನೀಡಲ್ಲ ಎಂದರು.

ಕೆಲ ದಿನಗಳ ಹಿಂದೆ ಚನ್ನಪಟ್ಟಣದ ಮುಸ್ಲಿಂ ಬಡಾವಣೆಗಳಲ್ಲಿ ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆ ಗ್ರಾಮ ಪ್ರವೇಶಿಸದಂತೆ ತಡೆದ ಘಟನೆ ಚನ್ನಪಟ್ಟಣದ ಸಾಮಂದಿಪುರ ಗ್ರಾಮದಲ್ಲಿ ನಡೆದಿತ್ತು.

English summary
Karnataka assembly elections 2018: Dalits protested against Yogeshwar for not voting. BJP state vice president K. Shivaram said daliths would support and vote Channapatna BJP candidate Yogeshwar.so his statement condemned Dalits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X