ರಾಮನಗರ ಜನರ ಆಕ್ರೋಶಕ್ಕೆ ತೇಪೆ ಹಚ್ಚಲು ಮುಂದಾದ ಅಶ್ವತ್ಥ ನಾರಾಯಣ್
ರಾಮನಗರ, ಅಕ್ಟೋಬರ್ 10: ರಾಮನಗರ ಜಿಲ್ಲಾ ವ್ಯಾಪ್ತಿಯ ಪಕ್ಕದಲ್ಲೇ ಹಾದು ಹೋಗಿರುವ ನೈಸ್ ರಸ್ತೆ ಪರಿಶೀಲನೆ ನಡೆಸುವ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ತಾವು ಉಸ್ತುವಾರಿ ವಹಿಸಿಕೊಂಡಿರುವ ರಾಮನಗರಕ್ಕೆ ತಿಂಗಳು ಕಳೆದರೂ ತಿರುಗಿ ನೀಡದಿರುವುದು ಜಿಲ್ಲೆಯ ಜನತೆಯಲ್ಲಿ ಬೇಸರ ಮೂಡಿಸಿದೆ.
ಇದೀಗ ಜನರ ಆಕ್ರೋಶ ಗಮಸಿದ ಡಿಸಿಎಂ ಅಶ್ವತ್ಥ ನಾರಾಯಣ್ ಎಚ್ಚೆತ್ತು ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳನ್ನು ಬೆಂಗಳೂರಿನ ತಮ್ಮ ಕಚೇರಿಗೆ ಕರೆಸಿಕೊಂಡು ಜಿಲ್ಲೆಯ ಆಡಳಿತ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಗಳ ಕುರಿತು ಸಭೆ ನಡೆಸಿ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಆದೇಶ ಮಾಡಿದ್ದೇನೆ ಎಂದು ಪ್ರಕಟಣೆ ಹೊರಡಿಸಿ ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ.
ಉಸ್ತುವಾರಿ ಸಚಿವರ ಈ ಪತ್ರಿಕಾ ಪ್ರಕಟಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನರು, ಸಚಿವರು ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆಗೆ ಭೇಟಿ ಕೊಡುವುದಿರಲಿ, ಜಿಲ್ಲಾ ಕೇಂದ್ರದಲ್ಲಿ ಕಚೇರಿ ತೆರೆದು, ಅಲ್ಲಿಗೆ ಅಗತ್ಯ ಸಿಬ್ಬಂದಿ ನೇಮಿಸಿ ಜನರ ಕುಂದು ಕೊರತೆ ಆಲಿಸುವ ಕೆಲಸಕ್ಕೆ ಮುಂದಾಗದೆ ಬೆಂಗಳೂರಿನಲ್ಲಿ ಕುಳಿತು ಇಲ್ಲಸಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಜಿಲ್ಲೆಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರನ್ನು ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಮಾಡಿದಾಗ, "ಸಿಎಂ ಕೊಟ್ಟ ಜಿಲ್ಲೆಗೆ ಅಶ್ವತ್ಥ ನಾರಾಯಣ್ ರವರನ್ನು ಡಿಸಿಎಂ ಮಾಡಿ ಉಸ್ತುವಾರಿ ಮಾಡಿದ್ದೇವೆ, ಜಿಲ್ಲೆಯ ಜನರ ಅಪೇಕ್ಷೆಯನ್ನು ಅವರಿಗೆ ತಿಳಿಸುತ್ತೇನೆ" ಎಂದು ಹಾರಿಕೆ ಉತ್ತರ ನೀಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications