ರಾಮನಗರ: ಕೆಡಿಪಿ ಸಭೆಗೆ ಮುನ್ನ ಶ್ರೀರಾಮನ ದರ್ಶನ ಪಡೆದ ಡಿಸಿಎಂ
ರಾಮನಗರ, ಜೂನ್ 19: ಶತ ಶತಮಾನಗಳು ಕಳೆದರೂ ಶ್ರೀರಾಮನ ಮೇಲಿರುವ ಭಾರತೀಯರ ನಂಬಿಕೆ, ಭಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ನರನಾಡಿಗಳಲ್ಲೂ ಆ ಸೀತಾರಾಮನೇ ತುಂಬಿಹೋಗಿದ್ದಾನೆ. ಪ್ರಸಕ್ತ ಕಾಲಘಟ್ಟದಲ್ಲಿ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ರಾಮತತ್ವದಲ್ಲೇ ಪರಿಹಾರವಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವಥ್ ನಾರಾಯಣ ಅವರು ಪ್ರತಿಪಾದಿಸಿದರು.
Recommended Video
ರಾಮನಗರದಲ್ಲಿ ಶುಕ್ರವಾರ ಜಿಲ್ಲೆಯ ಮೊದಲ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಮೀಪದ ರಾಮದೇವರ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಪಟ್ಟಾಭಿರಾಮನ ದರ್ಶನ ಪಡೆದ ನಂತರ ಮಾತನಾಡಿದ ಅವರು, ರಾಮನನ್ನು ನಾವೆಲ್ಲರೂ ಮತ್ತೆ ಮತ್ತೆ ಸ್ಮರಿಸುತ್ತೇವೆ, ನಿರಂತರವಾಗಿ ಪೂಜಿಸುತ್ತೇವೆ. ಭವಿಷ್ಯದಲ್ಲಿ ಇನ್ನೆಷ್ಟೇ ತಲೆಮಾರುಗಳು ಕಳೆದರೂ ಆ ಮರ್ಯಾದಾ ಪುರುಷೋತ್ತಮನ ಆದರ್ಶ, ಮೌಲ್ಯಗಳು ನಮ್ಮನ್ನು ಕೈಹಿಡಿದು ಸದಾ ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು.
ಅದೆಷ್ಟೋ ವರ್ಷಗಳಿಂದ ಇದ್ದ ಅಡ್ಡಿಗಳೆಲ್ಲ ನಿವಾರಣೆಯಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಬಿದ್ದ ಕೆಲ ದಿನಗಳಲ್ಲೇ, ಈ ರಾಮಗಿರಿಯಲ್ಲಿ ಪಟ್ಟಾಭಿರಾಮನ ದರ್ಶನ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವಜನ್ಮದ ಫಲ. ಸಕಲ ಪ್ರಜೆಗಳ ಪಾಲಿನ ದೈವ ಈ ರಾಮ ಸನ್ನಿಧಿಯಿಂದ ನಾನು ನೇರವಾಗಿ ಕೆಡಿಪಿ ಸಭೆಗೆ ಹೋಗುತ್ತಿದ್ದೇನೆ. ಇಂದಿನಿಂದ ರಾಮನಗರ ಜಿಲ್ಲೆಯ ಅಭಿವೃದ್ಧಿಯಲ್ಲಿ ನವಶಕೆ ಆರಂಭವಾಗಲಿದೆ ಎಂದು ಡಿಸಿಎಂ ಹೇಳಿದರು.

ಜಾತಿ, ಧರ್ಮ ಬೇಧವಿಲ್ಲದೆ ಪ್ರತಿಯೊಬ್ಬರನ್ನು ಒಟ್ಟಿಗೆ ಕರೆದುಕೊಂಡು ಮುನ್ನಡೆಯುವುದು ನನ್ನ ಉದ್ದೇಶ. ರಾಮ ಹಾಕಿಕೊಟ್ಟ ಸನ್ಮಾರ್ಗದಲ್ಲಿಯೇ ಪ್ರಗತಿಯ ರಥಚಕ್ರಗಳು ಸಾಗಲಿವೆ. ಎಲ್ಲರ ಸಹಕಾರದಿಂದ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂಬುದು ನನ್ನ ಇಚ್ಚೆಯಾಗಿದೆ. ಆ ಕಾರ್ಯಕ್ಕೆ ಈ ರಾಮ ಸನ್ನಿಧಿಯಿಂದಲೇ ಚಾಲನೆ ಸಿಕ್ಕಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಸುಮಾರು 400 ಮೆಟ್ಟಿಲುಗಳ ಎತ್ತರದ ರಾಮದೇವರ ಬೆಟ್ಟವನ್ನು ಡಿಸಿಎಂ ಅಶ್ವಥ್ ನಾರಾಯಣ ಅವರು ಎಲ್ಲಿಯೂ ನಿಲ್ಲದೇ ಕಾಲ್ನಡಿಗೆಯಲ್ಲಿಯೇ ಹತ್ತಿದರು. ಪುರಾಣ ಪ್ರಸಿದ್ಧವಾದ ಈ ತಾಣವನ್ನು ವೀಕ್ಷಿಸಿದರಲ್ಲದೆ, ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಬಳಿಕ ಬೆಟ್ಟದ ಮೇಲಿರುವ ಪಟ್ಟಾಭಿರಾಮಸ್ವಾಮಿ ಹಾಗೂ ಶಿವನಿಗೆ ಪೂಜೆ ಸಲ್ಲಿಸಿದರು.

ನಮ್ಮ ಪಾಲಿಗೆ ಈ ರಾಮಕ್ಷೇತ್ರ ಬಹಳ ವಿಶೇಷ. ಈ ಬೆಟ್ಟದಲ್ಲಿ ಶ್ರೀರಾಮಚಂದ್ರ, ಸೀತಾ ಸಮೇತರಾಗಿ 5 ರಿಂದ 6 ವರ್ಷ ತಂಗಿದ್ದರು. ಇಲ್ಲಿರುವ ಪಟ್ಟಾಭಿರಾಮ ದೇವರನ್ನು ವಾನರ ಅರಸ ಸುಗ್ರೀವನೇ ಸ್ಥಾಪಿಸಿದನೆಂದು ಹಾಗೂ ಇಲ್ಲಿರುವ ಶಿವಲಿಂಗವನ್ನು ಸಾಕ್ಷಾತ್ ಶ್ರೀರಾಮರೇ ಸ್ಥಾಪನೆ ಮಾಡಿದರೆಂದೂ ಪುರಾಣಗಳು ಹೇಳುತ್ತವೆ ಎಂದರು.
ರಾಮದೇವರ ಬೆಟ್ಟವು ರಣಹದ್ದು ಸಂರಕ್ಷಣಾ ಧಾಮವೂ ಆಗಿದೆ. ಹೀಗಾಗಿ ಸರ್ವರೀತಿಯಲ್ಲೂ ಈ ತಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು. ಕೆಡಿಪಿ ಸಭೆಯ ನಾಮಕರಣ ಸದಸ್ಯ ಎಂ.ರುದ್ರೇಶ ಹಾಜರಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications