ರಾಮನಗರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಂದೆ ಹಲವು ಬೇಡಿಕೆಗಳನ್ನಿಟ್ಟ ಡಿ.ಕೆ.ಸುರೇಶ್, ಇಲ್ಲಿದೆ ವಿವರ
ರಾಮನಗರ, ಜನವರಿ, 05: ಬೆಂಗಳೂರು - ಮೈಸೂರು ನೂತನ ದಶಪಥ ಎಕ್ಸ್ಪ್ರೆಸ್ ಹೈವೇ ಪರಿಶೀಲನೆಗಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆಗಮಿಸಿದ್ದರು. ನಿತಿನ್ ಗಡ್ಕರಿ ಅವರಿಗೆ ಸಂಸದ ಡಿ.ಕೆ.ಸುರೇಶ್ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 209, ರಾಷ್ಟ್ರೀಯ ಹೆದ್ದಾರಿ 275, ರಾಷ್ಟ್ರೀಯ ಹೆದ್ದಾರಿ 44 ಹಾದುಹೋಗುವ ಪ್ರಮುಖ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಪತ್ರ ನೀಡಿದರು.
ಬೆಂಗಳೂರು ಮೈಸೂರು ರಾಷ್ಟೀಯ ಹೆದ್ದಾರಿ 275ರಲ್ಲಿನ ಎರಡೂ ಬದಿಯ ಅವೈಜ್ಞಾನಿಕ ಸರ್ವಿಸ್ ರಸ್ತೆಗಳನ್ನು ಸರಿಪಡಿಸಬೇಕು, ಅಂಡರ್ ಪಾಸ್ ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ ದುರಸ್ತಿ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಹೆದ್ದಾರಿ ಪಕ್ಕದ ಹಳೇ ರಸ್ತೆಗಳನ್ನು ಒಂದು ಬಾರಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು. ಅಲ್ಲದೇ ಬೆಂಗಳೂರು ಹಾಗೂ ದಿಂಡಗಲ್ ನಡುವೆ ರಾಷ್ಟ್ರೀಯ ಹೆದ್ದಾರಿ 209ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ.

ಅಂಡರ್ ಪಾಸ್ ನಿರ್ಮಾಣ ಮಾಡಬೇಕು
ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಕನಕಪುರ ಬೈಪಾಸ್, ಕನಕಪುರ ಬೈಪಾಸ್ನ ಎಪಿಎಂಸಿ ಯಾರ್ಡ್ನಿಂದ ಸಮೀಪದ ಮುಖ್ಯ ರಸ್ತೆಯವರೆಗೆ, ಕನಕಪುರ ಬೈಪಾಸ್ನಿಂದ ಹೊರನಡೆಯುವ ಕಡೆ ಬಲಭಾಗದಲ್ಲಿನ ಸರ್ವಿಸ್ ರಸ್ತೆ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಹಾರೋಹಳ್ಳಿ ಬೈಪಾಸ್ ಗಳಲ್ಲಿ ವಾಹನ ಸಂಚಾರಕ್ಕೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಏಕಕಾಲ ಅಭಿವೃದ್ಧಿ ಯೋಜನೆಯಡಿಯಲ್ಲಿ ಕನಕಪುರ ಪಟ್ಟಣ ಅಭಿವೃದ್ಧಿ, ಅರ್ಕಾವತಿ ನದಿಗೆ ಬಲ ಭಾಗದಲ್ಲಿ ಪರ್ಯಾಯ ಸೇತುವೆ ನಿರ್ಮಾಣ ಮಾಡಬೇಕು. ಶನಿಮಹತ್ಮಾ ದೇವಾಲಯ, ರವಿಶಂಕರ್ ಗುರೂಜಿ ಆಶ್ರಮ, ಕಗ್ಗಲಿಪುರ ಸರ್ಕಾರಿ ಶಾಲಾ ವಲಯ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ, ಜೈನ್ ವಿಶ್ವವಿದ್ಯಾಲಯ, ಸಾತನೂರು ಜಂಕ್ಷನ್, ಜಕ್ಕೇಗೌಡನದೊಡ್ಡಿ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಮೇಲ್ಸೇತುವೆಗಳ ನಿರ್ಮಾಣ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಂಕ್ಷನ್ಗಳ ಅಭಿವೃದ್ಧಿಗೆ ಒತ್ತಾಯ
ಇನ್ನು ಮತ್ತೊಂದು ಮನವಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಬಿಡದಿಯಿಂದ ಅತ್ತಿಬೆಲೆವರೆಗೂ, ರಾಷ್ಟ್ರೀಯ ಹೆದ್ದಾರಿ 44ರ ಹಾರೋಹಳ್ಳಿ, ಜಿಗಣಿ, ಆನೇಕಲ್ ಮಾರ್ಗವಾಗಿ ಸಾಗುವ ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಜಂಕ್ಷನ್ಗಳ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಜಂಕ್ಷನ್ಗಳು ಕೈಗಾರಿಕಾ ಪ್ರದೇಶವಾಗಿದ್ದು, ಬಿಡದಿ ಬಳಿ 400, ಹಾರೋಹಳ್ಳಿಯಲ್ಲಿ 1280, ಜಿಗಣಿ 339, ಬೊಮ್ಮಸಂದ್ರ 979, ಅತ್ತಿಬೆಲೆ 148 ಕೈಗಾರಿಕಾ ಯುನಿಟ್ಗಳಿದ್ದು, ಇಲ್ಲಿ ಸುಗಮ ಸಂಚಾರಕ್ಕಾಗಿ ಜಂಕ್ಷನ್ಗಳ ಅಭಿವೃದ್ಧಿ ಮಾಡಬೇಕು. ಹಾಗೆಯೇ ಬೆಂಗಳೂರು-ಮೈಸೂರು ರಸ್ತೆಯ ಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ ವಿಶ್ವವಿಖ್ಯಾತ ಕರಕುಶಲ ಕಲೆ ಅಳಿವಿನಂಚಿನಲ್ಲಿದ್ದು, ಇಲ್ಲಿ ಕರಕುಶಲ ಕಲಾಗ್ರಾಮ ನಿರ್ಮಾಣ ಮಾಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications