ರಾಮನಗರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಂದೆ ಹಲವು ಬೇಡಿಕೆಗಳನ್ನಿಟ್ಟ ಡಿ.ಕೆ.ಸುರೇಶ್, ಇಲ್ಲಿದೆ ವಿವರ
ರಾಮನಗರ, ಜನವರಿ, 05: ಬೆಂಗಳೂರು - ಮೈಸೂರು ನೂತನ ದಶಪಥ ಎಕ್ಸ್ಪ್ರೆಸ್ ಹೈವೇ ಪರಿಶೀಲನೆಗಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆಗಮಿಸಿದ್ದರು. ನಿತಿನ್ ಗಡ್ಕರಿ ಅವರಿಗೆ ಸಂಸದ ಡಿ.ಕೆ.ಸುರೇಶ್ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 209, ರಾಷ್ಟ್ರೀಯ ಹೆದ್ದಾರಿ 275, ರಾಷ್ಟ್ರೀಯ ಹೆದ್ದಾರಿ 44 ಹಾದುಹೋಗುವ ಪ್ರಮುಖ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಪತ್ರ ನೀಡಿದರು.
ಬೆಂಗಳೂರು ಮೈಸೂರು ರಾಷ್ಟೀಯ ಹೆದ್ದಾರಿ 275ರಲ್ಲಿನ ಎರಡೂ ಬದಿಯ ಅವೈಜ್ಞಾನಿಕ ಸರ್ವಿಸ್ ರಸ್ತೆಗಳನ್ನು ಸರಿಪಡಿಸಬೇಕು, ಅಂಡರ್ ಪಾಸ್ ರಸ್ತೆಗಳಲ್ಲಿ ಮಳೆ ನೀರು ನಿಲ್ಲದಂತೆ ದುರಸ್ತಿ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಹೆದ್ದಾರಿ ಪಕ್ಕದ ಹಳೇ ರಸ್ತೆಗಳನ್ನು ಒಂದು ಬಾರಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು. ಅಲ್ಲದೇ ಬೆಂಗಳೂರು ಹಾಗೂ ದಿಂಡಗಲ್ ನಡುವೆ ರಾಷ್ಟ್ರೀಯ ಹೆದ್ದಾರಿ 209ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ.

ಅಂಡರ್ ಪಾಸ್ ನಿರ್ಮಾಣ ಮಾಡಬೇಕು
ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಕನಕಪುರ ಬೈಪಾಸ್, ಕನಕಪುರ ಬೈಪಾಸ್ನ ಎಪಿಎಂಸಿ ಯಾರ್ಡ್ನಿಂದ ಸಮೀಪದ ಮುಖ್ಯ ರಸ್ತೆಯವರೆಗೆ, ಕನಕಪುರ ಬೈಪಾಸ್ನಿಂದ ಹೊರನಡೆಯುವ ಕಡೆ ಬಲಭಾಗದಲ್ಲಿನ ಸರ್ವಿಸ್ ರಸ್ತೆ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಹಾರೋಹಳ್ಳಿ ಬೈಪಾಸ್ ಗಳಲ್ಲಿ ವಾಹನ ಸಂಚಾರಕ್ಕೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಏಕಕಾಲ ಅಭಿವೃದ್ಧಿ ಯೋಜನೆಯಡಿಯಲ್ಲಿ ಕನಕಪುರ ಪಟ್ಟಣ ಅಭಿವೃದ್ಧಿ, ಅರ್ಕಾವತಿ ನದಿಗೆ ಬಲ ಭಾಗದಲ್ಲಿ ಪರ್ಯಾಯ ಸೇತುವೆ ನಿರ್ಮಾಣ ಮಾಡಬೇಕು. ಶನಿಮಹತ್ಮಾ ದೇವಾಲಯ, ರವಿಶಂಕರ್ ಗುರೂಜಿ ಆಶ್ರಮ, ಕಗ್ಗಲಿಪುರ ಸರ್ಕಾರಿ ಶಾಲಾ ವಲಯ, ಹಾರೋಹಳ್ಳಿ ಕೈಗಾರಿಕಾ ಪ್ರದೇಶ, ಜೈನ್ ವಿಶ್ವವಿದ್ಯಾಲಯ, ಸಾತನೂರು ಜಂಕ್ಷನ್, ಜಕ್ಕೇಗೌಡನದೊಡ್ಡಿ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಮೇಲ್ಸೇತುವೆಗಳ ನಿರ್ಮಾಣ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಂಕ್ಷನ್ಗಳ ಅಭಿವೃದ್ಧಿಗೆ ಒತ್ತಾಯ
ಇನ್ನು ಮತ್ತೊಂದು ಮನವಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಬಿಡದಿಯಿಂದ ಅತ್ತಿಬೆಲೆವರೆಗೂ, ರಾಷ್ಟ್ರೀಯ ಹೆದ್ದಾರಿ 44ರ ಹಾರೋಹಳ್ಳಿ, ಜಿಗಣಿ, ಆನೇಕಲ್ ಮಾರ್ಗವಾಗಿ ಸಾಗುವ ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಜಂಕ್ಷನ್ಗಳ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಜಂಕ್ಷನ್ಗಳು ಕೈಗಾರಿಕಾ ಪ್ರದೇಶವಾಗಿದ್ದು, ಬಿಡದಿ ಬಳಿ 400, ಹಾರೋಹಳ್ಳಿಯಲ್ಲಿ 1280, ಜಿಗಣಿ 339, ಬೊಮ್ಮಸಂದ್ರ 979, ಅತ್ತಿಬೆಲೆ 148 ಕೈಗಾರಿಕಾ ಯುನಿಟ್ಗಳಿದ್ದು, ಇಲ್ಲಿ ಸುಗಮ ಸಂಚಾರಕ್ಕಾಗಿ ಜಂಕ್ಷನ್ಗಳ ಅಭಿವೃದ್ಧಿ ಮಾಡಬೇಕು. ಹಾಗೆಯೇ ಬೆಂಗಳೂರು-ಮೈಸೂರು ರಸ್ತೆಯ ಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ ವಿಶ್ವವಿಖ್ಯಾತ ಕರಕುಶಲ ಕಲೆ ಅಳಿವಿನಂಚಿನಲ್ಲಿದ್ದು, ಇಲ್ಲಿ ಕರಕುಶಲ ಕಲಾಗ್ರಾಮ ನಿರ್ಮಾಣ ಮಾಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications