ಇಗ್ಗಲೂರು ಬ್ಯಾರೇಜ್ ಎಚ್ಡಿಡಿ ಕಟ್ಟಿಸಿಲ್ಲ : ಸಿಪಿವೈ ಸವಾಲು
ರಾಮನಗರ, ಫೆಬ್ರವರಿ 24: 'ಇಗ್ಗಲೂರಿನ ಬ್ಯಾರೇಜ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಏನು ಇಲ್ಲ ಬೇಕಿದ್ದರೆ ಬಹಿರಂಗ ಚರ್ಚೆಗೆ ಬರಲಿ' ಎಂದು ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಶನಿವಾರದಂದು ಜೆಡಿಎಸ್ ನಾಯಕರಿಗೆ ಸವಾಲ್ ಹಾಕಿದರು.
ಸಿ.ಪಿ.ಯೋಗೇಶ್ವರ್ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವ ಸಮಯದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಅರಳು ಮರಳು, ಪಾಪ ಅವರಿಗೆ ವಯಸ್ಸಾಗಿದೆ. ಏನ್ ಮಾತನಾಡ್ತಾರೆಂದು ಅವರಿಗೆ ಗೊತ್ತಾಗಲ್ಲ ಎಂದು ಚೇಡಿಸಿದರು.
ಇಗ್ಗಲೂರು ಬ್ಯಾರೇಜ್ ಯೋಜನೆಯಾಗಿದ್ದು 1986 ರಲ್ಲಿ ಅಂದು ಮಾಜಿ ಸಿಎಂಗಳಾದ ವೀರೇಂದ್ರ ಪಾಟೀಲ್ ಹಾಗೂ ದೇವರಾಜ್ ಅರಸು ಕಾಲದಲ್ಲಿ ಟೆಂಡರ್ ಪ್ರಕ್ರಿಯೆ ಆಗಿತ್ತು ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೇ ಎಂದು ಹೇಳಿದರು.

ಇಂದು ರಾಜಕೀಯಕ್ಕಾಗಿ ಜೆಡಿಎಸ್ ನವರು ಇಗ್ಗಲೂರು ಬ್ಯಾರೇಜ್ ನಿರ್ಮಾಣ ಮಾಡಿ ಚನ್ನಪಟ್ಟಣಕ್ಕೆ ನೀರಾವರಿ ಮಾಡಿದ್ದು ನಾವು ಅಂತಾರೆ. ಬ್ಯಾರೇಜ್ ಕಟ್ಟುವಲ್ಲಿ ದೇವೇಗೌಡರ ಕೊಡುಗೆ ಏನು ಇಲ್ಲ ಈ ಬಗ್ಗೆ ನಾನು ಬಹಿರಂಗ ಚರ್ಚೆಗೆ ಸಿದ್ಧ. ದಾಖಲೆ ಸಮೇತ ಎಲ್ಲವನ್ನು ಸಾಬೀತು ಮಾಡ್ತೀನಿ ಎಂದರು.
ಇಗ್ಗಲೂರು ಬ್ಯಾರೇಜ್ ನಿರ್ಮಾಣಕ್ಕೆ ದೇವೇಗೌಡರು ಶ್ರಮಿಸಿದ್ದರ ಬಗ್ಗೆ ಅವರ ಬಳಿ ದಾಖಲೆ ಇದ್ದರೆ ತರಲಿ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಹಿರಂಗ ಸವಾಲ್ ಎಸೆದರು.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications