ಚನ್ನಪಟ್ಟಣದಲ್ಲಿ ಹಾಳು ಕೊಂಪೆಯಾಗಿದೆ ಬಾಪುವಿನ ನೆನಪಿನ ಭವನ
ರಾಮನಗರ, ಅಕ್ಟೋಬರ್ 2: ಜಗತ್ತಿಗೆ ಅಹಿಂಸಾ ತತ್ವವನ್ನು ಸಾರಿದ ಬಾಪುವಿನ 151ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರದ ತುಂಬೆಲ್ಲಾ ಆಚರಿಸಲಾಗುತ್ತಿದೆ. ಗಾಂಧಿಜೀಯವರ ತತ್ವ, ಆದರ್ಶಗಳನ್ನು ಸಾರುವ ಕಾರ್ಯಕ್ರಮಗಳ ಮೂಲಕ ಆಚರಣೆ ನಡೆಯುತ್ತಿದೆ.
ಮಹಾತ್ಮ ಗಾಂಧಿಯವರ ನೆನಪುಗಳು ರಾಮನಗರ ಜಿಲ್ಲೆಯಲ್ಲೂ ಇದೆ. ಜನವರಿ 6,1934ರಂದು ಮಂಡ್ಯ ಮೂಲಕ ತಾಲೂಕಿಗೆ ಆಗಮಿಸಿದ ಮಹಾತ್ಮಾ ಗಾಂಧೀಜಿ ಚನ್ನಪಟ್ಟಣ ನಗರದ ಬಾಲಕರ ಪ್ರೌಢಶಾಲೆಯಲ್ಲಿ ಹರಿಜನ ನಿಧಿಯನ್ನು ಸಂಗ್ರಹಿಸಿದರು. ಈ ವೇಳೆ ವಿದ್ಯಾರ್ಥಿಗಳು, ದಾನಿಗಳು 90 ರೂ. ಹಣವನ್ನು ನಿಧಿಗೆ ದೇಣಿಗೆಯಾಗಿ ನೀಡಿದರು. ಸಾರ್ವಜನಿಕರನ್ನುದ್ದೇಶಿಸಿ ಗಾಂಧೀಜಿ ಬಾಷಣವನ್ನು ಸಹ ಮಾಡಿದರು. ಮುಂದೆ ಓದಿ...

ಗಾಂಧಿ ವಿಶ್ರಾಂತಿ ಪಡೆದಿದ್ದ ಜಾಗದಲ್ಲಿ "ಸ್ಮಾರಕ ಭವನ"
ನಂತರ ಗಾಂಧೀಜಿ ಅವರು, ಸರಸ್ವತಿ ಮತ್ತು ಆರ್ಯಮೂರ್ತಿ ದಂಪತಿ ಹರಿಜನ ಸೇವೆಯಲ್ಲಿ ತೊಡಗಿಕೊಂಡಿದ್ದನ್ನು ತಿಳಿದು ಕೆಲ ಕಾಲ ಅವರ ಕುಟೀರದಲ್ಲಿ ವಿಶ್ರಾಂತಿ ಪಡೆದು ಪ್ರಯಾಣ ಮುಂದುವರೆಸಿದರು. ಇದು ಚನ್ನಪಟ್ಟಣಕ್ಕೆ ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ಇತಿಹಾಸ. ಗಾಂಧಿ ವಿಶ್ರಾಂತಿ ಪಡೆದಿದ್ದ ಅಭಯ ಕುಟೀರ ಸದ್ಯ ಪೊಲೀಸ್ ಠಾಣೆ ಮುಂಭಾಗ ಬೆಂ-ಮೈ ಹೆದ್ದಾರಿಯಲ್ಲಿ ಇದ್ದು, ಈ ಸ್ಥಳದಲ್ಲಿ ಗಾಂಧಿಸ್ಮಾರಕ ಭವನವನ್ನು ನಿರ್ಮಿಸಲಾಗಿದೆ.

ಹಾಳುಕೊಂಪೆಯಾಗಿದೆ ಗಾಂಧಿ ನೆನಪಿನ ಭವನ
ನಗರದಲ್ಲಿ ಗಾಂಧಿ ಭೇಟಿ ಕೊಟ್ಟು ವಿಶ್ರಾಂತಿ ಪಡೆದ ನೆನಪಿಗಾಗಿ ನಿರ್ಮಾಣಗೊಂಡ ಭವನ, ನಿರ್ವಹಣೆ ಇಲ್ಲದೆ ಈಗ ಹಾಳು ಕೊಂಪೆಯಾಗಿದೆ. ಹತ್ತು ದಶಕಗಳ ಹಿಂದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬಂದು ಹೋದ ನೆನಪಿಗಾಗಿ ಈ ಭವನವನ್ನು ನಿರ್ಮಾಣ ಮಾಡಲಾಗಿದ್ದು, ಇಂದು ಈ ಸ್ಮಾರಕ ಪ್ರತಿನಿತ್ಯ ಕೆಲಸ ಇಲ್ಲದೇ ಕುಡಿದು ಮಲಗುವವರ ತಾಣವಾಗಿದೆ. ಇದನ್ನು ಸಂರಕ್ಷಿಸಬೇಕಾದ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ, ಇದು ಯಾರ ಒಡೆತನಕ್ಕೆ ಸೇರಿದ್ದು ಎಂದು ತಿಳಿಯದೇ ಗೊಂದಲದಲ್ಲಿದೆ.

ಗಾಂಧಿ ಭವನ ಜಾಗದ ಬಗ್ಗೆ ಗೊಂದಲ
ಗಾಂಧಿಭವನದ ಜಾಗ ಯಾರಿಗೆ ಸೇರಿದ್ದು ಎಂಬ ಗೊಂದಲದಿಂದ, ಗಾಂಧಿ ಭವನದ ಆವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಮತ್ತು ಜಾಹೀರಾತು ಫಲಕದ ಬಾಡಿಗೆ ಹಣ ಅನ್ಯರ ಪಾಲಾಗುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ. ತಾಲ್ಲೂಕು ಆಡಳಿತ ಎಚ್ಚೆತ್ತುಕೊಂಡು ಕಟ್ಟಡವನ್ನು ದುರಸ್ತಿ ಮಾಡಬೇಕೆಂದು ಹಲವು ಬಾರಿ ಒತ್ತಾಯಿಸಿದರೂ ತಾಲ್ಲೂಕು ಮತ್ತು ಜಿಲ್ಲಾಡಳಿತ ಜಾಣಗುರುಡು ಪ್ರದರ್ಶಿಸುತ್ತಿದೆ.
Recommended Video

ಭವನದ ಕಾಯಕಲ್ಪಕ್ಕೆ ಒತ್ತಾಯ
ರಾಷ್ಟ್ರಪಿತ ಗಾಂಧೀಜಿ ನೆನಪಿನ ಈ ಗಾಂಧಿಸ್ಮಾರಕ ಭವನ ನಮಗೆ ಪವಿತ್ರತಾಣ. ಆದರೆ ಇದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವುದು ಖೇದಕಾರಿಯಾಗಿದೆ. ಕೂಡಲೇ ಭವನದ ಕಾಯಕಲ್ಪಕ್ಕೆ ಮುಂದಾಗಬೇಕು ಎಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications