ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ ಸಮರ್ಪಿಸಿದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಭಕ್ತರು
ರಾಮನಗರ, ಡಿಸೆಂಬರ್, 16: ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅವರ ನೇತೃತ್ವದಲ್ಲಿ 150 ಯಾತ್ರಾರ್ಥಿಗಳ ತಂಡ ಅಯೋಧ್ಯೆಗೆ ತೆರಳಿದ್ದಾರೆ. ಉತ್ತರಪ್ರದೇಶದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾ ಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು ಸಮರ್ಪಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಜಿಲ್ಲೆಯ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ತೆರಳಿದ್ದಾರೆ.
ವಿಧಿಬದ್ಧವಾಗಿ ಪೂಜೆ ಸಲ್ಲಿಕೆ
ರಾಮಮಂದಿರದ ಕನ್ನಡಿಗ ಅರ್ಚಕರಾದ ಗೋಪಾಲ್ ಭಟ್ ಭಕ್ತರು ಕೊಂಡೊಯ್ಯದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಮೃತ್ತಿಕೆಯನ್ನು ಕೂಡ ಶಾಸ್ತ್ರೋಕ್ತವಾಗಿ ಪೂಜಿಸಿ, ಸಚಿವರು ಮತ್ತು ಅವರ ಸಹ ಯಾತ್ರಾರ್ಥಿಗಳಿಗೆ ನೀಡಲಾಗಿದೆ. ಅಯೋಧ್ಯೆ ಮೃತ್ತಿಕೆಯನ್ನು ಜಿಲ್ಲೆಯ ರಾಮದೇವರ ಬೆಟ್ಟಕ್ಕೆ ಸಮರ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು. ಬಳಿಕ, ಮಂದಿರದ ಆವರಣದಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪಕ್ ರಾಯ್ ಮತ್ತು ನ್ಯಾಸದ ಪದಾಧಿಕಾರಿಗಳಿಗೆ ಈ ಕಾಣಿಕೆಗಳನ್ನು ರಾಮನಗರ ಜಿಲ್ಲೆಯ ಪರವಾಗಿ ಸಚಿವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಜೊತೆಗಿದ್ದ ಭಕ್ತಗಣವು "ಭಾರತ್ ಮಾತಾ ಕೀ ಜೈ, ಗಂಗಾ ಮಾತಾ ಕೀ ಜೈ, ಸರಯೂ ಮಾತಾ ಕೀ ಜೈ, ಜೈ ಶ್ರೀ ರಾಮ್" ಹೀಗೆ ಮುಂತಾದ ಘೋಷಣೆಗಳನ್ನು ಮೊಳಗಿಸಿದರು.

ರಾಮದೇವರ ಬೆಟ್ಟದ ಬಗ್ಗೆ ಸಚಿವರು ಹೇಳಿದ್ದೇನು?
ಜಿಲ್ಲೆಯಿಂದ ತೆಗೆದುಕೊಂಡು ಹೋಗಿದ್ದ ಕಾಣಿಕೆಗಳನ್ನು ಸಮರ್ಪಿಸಿ ಮಾತನಾಡಿದ ಸಚಿವ ಅಶ್ವತ್ಥ್ ನಾರಾಯಣ್, ರಾಮದೇವರ ಬೆಟ್ಟದ ತಾಣವಾದ ರಾಮನಗರವು ಪರಮಾತ್ಮನಾದ ಶ್ರೀರಾಮನ ಹೆಸರನ್ನೇ ಹೊತ್ತಿದೆ. ಜೊತೆಗೆ ಈ ಬೆಟ್ಟದಲ್ಲಿ ದೇಶದಲ್ಲೇ ಅಪರೂಪವಾಗಿರುವ ರಣಹದ್ದಿನ ಸಂತತಿ ಉಳಿದುಕೊಂಡಿದೆ. ರಾಮಾಯಣದಲ್ಲೂ ಈ ಸಂತತಿಗೆ ಸೇರಿದ ಜಟಾಯು, ಸಂಪಾತಿಗಳ ಪಾತ್ರವಿದೆ. ಹೀಗೆ ರಾಮನಗರ, ರಾಮ ಮತ್ತು ರಾಮಾಯಣಗಳ ನಡುವೆ ಮಧುರ ಬಾಂಧವ್ಯವಿದೆ ಎಂದು ಸ್ಮರಿಸಿದರು.
ಶ್ರೀರಾಮ ನಮ್ಮೆಲ್ಲರ ಪಾಲಿನ ಆದರ್ಶ ಮೂರ್ತಿ
ಶ್ರೀರಾಮನು ನಮ್ಮ ಪರಂಪರೆ, ಸಂಸ್ಕೃತಿ ಮತ್ತು ಭಾರತೀಯತೆಯ ಪ್ರತೀಕವಾಗಿದ್ದಾನೆ. ನಮ್ಮೆಲ್ಲರ ಪಾಲಿನ ಆದರ್ಶಮೂರ್ತಿ ಆಗಿರುವ ಶ್ರೀರಾಮನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 2024ರ ಜನವರಿಯ ಹೊತ್ತಿಗೆ ಮಂದಿರದ ಕಾಮಗಾರಿಗಳು ಮುಗಿದು, ಜನರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದರು. ರಾಮನಿಂದ ನಮ್ಮಲ್ಲಿ ರಾಮ ರಾಜ್ಯದ ಪರಿಕಲ್ಪನೆ ಬಂದಿದೆ. ತ್ರೇತಾಯುಗದಿಂದಲೂ ರಾಮನು ಭಾರತೀಯರನ್ನು ಒಗ್ಗೂಡಿಸುವ ಶಕ್ತಿಯಾಗಿ ಉಳಿದುಕೊಂಡು ಬಂದಿದ್ದಾನೆ. ಇಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರಕ್ಕೆ ತಮ್ಮ ಕಾಣಿಕೆಯೂ ಇರಬೇಕೆಂದು ಇಲ್ಲಿನ ಭಕ್ತರು ಅಪೇಕ್ಷೆ ವ್ಯಕ್ತಪಡಿಸಿದರು. ಈ ಮೂಲಕ ರಾಮನಗರದ ಜನತೆಗೆ ಪರಮಾತ್ಮನ ಆಶೀರ್ವಾದ ಸಿಕ್ಕಿದೆ ಎಂದು ಸಚಿವರು ಬಣ್ಣಿಸಿದರು.

ಪೂಜೆಯ ಬಳಿಕ ಸಚಿವರು ಮತ್ತು ಯಾತ್ರಾರ್ಥಿಗಳು ಪ್ರಗತಿಯಲ್ಲಿರುವ ಮಂದಿರವನ್ನು ವೀಕ್ಷಿಸಿ, ದೇಗುಲದಲ್ಲಿ ದರ್ಶನ ಪಡೆದರು. ಸಚಿವರ ಜೊತೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜು, ರಾಜ್ಯ ರೇಷ್ಮೆ ಕೈಗಾರಿಕೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್ ಗೌಡ ಸೇರಿದಂತೆ ಹಲವರು ಇದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications