Get Updates
Get notified of breaking news, exclusive insights, and must-see stories!

ಮಗನ ಸಾವಿಗೆ ಸಿಂಧೂರಿ ಹೊಣೆಯಲ್ಲ, ಅವರಿಬ್ಬರೂ ಮದುವೆ ಆಗಬಹುದಿತ್ತು ಎಂದ ಡಿ.ಕೆ.ರವಿ ತಾಯಿ

ಮಗನ ಸಾವಿಗೆ ಸಿಂಧೂರಿ ಹೊಣೆಯಲ್ಲ: ಅವರಿಬ್ಬರೂ ಮದುವೆ ಆಗಬಹುದಿತ್ತು ಎಂದು ಡಿ.ಕೆ.ರವಿ ತಾಯಿ ಡಿ. ರೂಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ, ಫೆಬ್ರವರಿ, 20: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ‌ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟದಲ್ಲಿ ನನ್ನ ಮಗನ ಹೆಸರು ತರಬೇಡಿ. ನನ್ನ ಮಗ ಮೃತಪಟ್ಟು 8 ವರ್ಷಗಳು ಕಳೆದಿವೆ. ನಿಮ್ಮ ಜಗಳದಿಂದ ನನ್ನ ಮಗನ ಹರಸರಿಗೆ ಮಸಿ ಹಚ್ಚಬೇಡಿ ಎಂದು ಐಎಎಸ್‌ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿಕಾರಿದರು.

₹25 ಲಕ್ಷ ಖರ್ಚು ಮಾಡಿ ಸೆರೆ ಹಿಡಿದ ಪುಂಡಾನೆ ರಾಮನಗರ ಜಿಲ್ಲೆಗೆ ವಾಪಸ್‌: ಹೆಚ್ಚಿದ ಆತಂಕ

ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಲ ಗ್ರಾಮದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಮಾಧ್ಯಮಗಳೊಂದಿಗೆ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ , ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೆಲ ಪೋಟೋಗಳನ್ನು ಪೋಸ್ಟ್ ಮಾಡಿದಲ್ಲದೇ ದಿ.ಡಿ.ಕೆ.ರವಿ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಕಿಡಿಕಾರಿದರು.

DK Ravi Mother Gowramma Reaction to D Roopa vs Rohini Sindhuri Fight

ಮಗನ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ

"ನನ್ನ ಮಗ ಡಿ.ಕೆ. ರವಿ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ. ಅವರಿಬ್ಬರು ಸ್ನೇಹಿತರು,‌ ಅವರು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲೂ ಸ್ನೇಹಿತರಾಗಿದ್ದರು. ಹಾಗಾಗ ನನಗೂ ಫೋನ್ ಮಾಡಿ ಮಾತನಾಡುತ್ತಿದ್ದರು. ಅವರು ಇಷ್ಟಪಟ್ಟಿದ್ದರೆ "ಆ" ಸಮಯದಲ್ಲೇ ಇಬ್ಬರು ಮದುವೆ ಅಗಬಹುದಿತ್ತು.‌‌ ಅದಕ್ಕೆ ಯಾರ ವಿರೋಧವೂ ಇರಲಿಲ್ಲ. ಹಾಗಾಗಿ ಅವರ ಮೇಲೆ ಎನೂ ಹೇಳುವುದಿಲ್ಲ‌‌," ಎಂದು ಡಿ.ಕೆ.ರವಿ ತಾಯಿ ಗೌರಮ್ಮ‌ ತಿಳಿಸಿದರು.

ಡಿ. ರೂಪ ವಿರುದ್ಧ ಡಿ.ಕೆ. ರವಿ ತಾಯಿ ಆಕ್ರೋಶ

"ನಮ್ಮ ಮನೆಗೆ ರೋಹಿಣಿ ಸಿಂಧೂರಿ ಮೂರು ಬಾರಿ ಬಂದಿದ್ದಾರೆ. ಡಿ.ಕೆ. ರವಿಯ ಸಾಮಾಜಿಕ ಕಳಕಳಿ ಕಂಡು ನನಗೂ ಮಾರ್ಗದರ್ಶನ ಮಾಡು ಎಂದು ರೋಹಿಣಿ ನನ್ನ ಮುಂದೆಯೇ ಕೇಳಿದ್ದಾಳೆ. ರೋಹಿಣಿ ಸಿಂಧೂರಿ ಮೇಲೆ ಅಪರಾಧ ಹೊರಿಸಲು ರೂಪ‌ ಅವರು ನನ್ನ ಮಗನ ಹೆಸರನ್ನು ತಂದಿದ್ದಾರೆ. ನಿಮ್ಮಿಬ್ಬರ ಜಗಳದಲ್ಲಿ ನನ್ನ ಮಗನ ಹೆಸರು ತರಬೇಡಿ, ನೀವೆ ಆಗಲಿ, ರಾಜಕಾರಣಿಗಳೇ ಆಗಲಿ ಯಾವುದೆ ವಿಚಾರಕ್ಕೆ ನನ್ನ ಮಗನ ಹೆಸರು ತರಬೇಡಿ," ಎಂದು ಗೌರಮ್ಮ ಎಚ್ಚರಿಕೆ ನೀಡಿದರು.

DK Ravi Mother Gowramma Reaction to D Roopa vs Rohini Sindhuri Fight

ಅಧಿಕಾರ ಬಳಸಿಕೊಂಡು ಜನರಿಗೆ ಉಪಕಾರ ಮಾಡಿ

ನನ್ನ ಮಗನಿಗೆ ಇದ್ದಷ್ಟು ಅಧಿಕಾರ ನಿಮಗೂ ಇದೆ. ನಿಮ್ಮ‌ಅಧಿಕಾರ ಬಳಸಿಕೊಂಡು ಜನರಿಗೆ ಉಪಕಾರ ಮಾಡಿ. ದುಡಿಯುವ ಕೈಗಳಿಗೆ ಕೆಲಸ ಕೊಡುವ ಮೂಲ‌ಕ ಜೀವನ ರೂಪಿಸಿ. ನನ್ನ ಮಗ ನಡೆದ ದಾರಿಯಲ್ಲಿ ನಡೆಯಿರಿ‌. ಅದರೆ ನಿಮ್ಮ ಜಗಳದಲ್ಲಿ, ಸಿಂಧೂರಿ ಅವರ ಮೇಲೆ ಅಪವಾದ ಹೊರಿಸಿದ್ದೀರಿ. ಹಾಗೆಯೇ ನನ್ನ ಮಗನ ಹೆಸರು ತಂದು ಅವನ ಹೆಸರಿಗೆ ಮಸಿ ಹಚ್ವುವ ಕೆಲಸ ಮಾಡಬೇಡಿ ರೂಪಾ ಅವರೇ ಎಂದು ಮಾಧ್ಯಮಗಳ ಮೂಲಕ ಮನವಿ ಮಾಡಿದರು.

ನಾನು ಮುಖ್ಯಮಂತ್ರಿ ಯಾಗುತ್ತೇನೆ, ಮನೆಗೊಬ್ಬರಿಗೆ ಕೆಲಸ ಕೊಡುತ್ತೇನೆ ಎಂದು ಹೇಳುತ್ತಿದ್ದ ನನ್ನ ಮಗ ಅಪರಂಜಿ. ಅವನ ನಡೆ, ನುಡಿಗಳನ್ನು ಜನರು ಕೊಂಡಾಡುತ್ತಿದ್ದಾರೆ. ಇದೀಗ ನಿಮ್ಮಿಬ್ಬರ ರಂಪಾಟ ನೋಡಿ ಜನರು ನನಗೆ ರಾಜ್ಯದ ವಿವಿಧ ಭಾಗದಿಂದ ಫೋನ್ ಮಾಡಿ ಡಿ.ಕೆ.ರವಿಯ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದರು. ನಿಮ್ಮ ನಡೆಗೆ ಛೀಮಾರಿ ಹಾಕುತ್ತಿದ್ದಾರೆ ಎಂದು ಡಿ.ಕೆ.ರವಿ ತಾಯಿ ಡಿ. ರೂಪಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+