'ಚನ್ನಪಟ್ಟಣವನ್ನ ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ'
ಚನ್ನಪಟ್ಟಣ, ನವೆಂಬರ್ 26 : ಚನ್ನಪಟ್ಟಣ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರಗೆ ಟಾಂಗ್ ನೀಡುವುದರ ಜೊತೆಗೆ ಅನಿತಾ ಕುಮಾರಸ್ವಾಮಿ ಪರ ಬ್ಯಾಟಿಂಗ್ ನಡೆಸಿದ ಡಿ.ಕೆ ಶಿವಕುಮಾರ್ರವರು, 'ಚನ್ನಪಟ್ಟಣವನ್ನ ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ' ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಶನಿವಾರ ನಡೆದ ಕನಕ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಅನಿತಾ ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ನಮ್ಮ ಸೋದರಿ ಅನಿತಾ ಕುಮಾರಸ್ವಾಮಿಯವರು ನಿಮ್ಮ ಮೇಲೆ ವಿಶ್ವಾಸ ಹಾಗೂ ನಂಬಿಕೆ ಇಟ್ಟುಕೊಂಡು ಬಂದಿದ್ದಾರೆ' ಎಂದು ತಿಳಿಸಿದರು.
'ಶಾಸಕ ಸಿ.ಪಿ ಯೋಗೇಶ್ವರ ಅವರಂತಹ ಹಲವಾರು ನಾಯಕರು ಬರ್ತಾರೆ ಹೋಗ್ತಾರೆ. ಆದರೆ, ಬೇರೆಯವರೆಲ್ಲಾ ಟೆಂಪರ್ವರಿ ನಾವ್ ಮಾತ್ರ ಶಾಶ್ವತ. ನಿಮ್ಮ ಹೆಣ ಹೊರುವವರೂ ನಾವೇ, ಪಲ್ಲಕ್ಕಿ ಹೊರುವವರು ನಾವೇ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

'ಉಪಕಾರ ಮಾಡಿದ್ದನ್ನು ಸ್ಮರಿಸಿಕೊಳ್ಳಬೇಕು. ಆದರೆ, ಸಿಎಂ ಸಿದ್ದರಾಮಯ್ಯನವರು 300 ಕೋಟಿ ಹಣವನ್ನು ಕೆರೆಗಳಿಗೆ ನೀರು ಹರಿಸಲು ಕೊಟ್ಟರೆ ಕೃತಜ್ಞತೆ ಅವರ ಒಂದು ಪೋಟೋವನ್ನು ಹಾಕಲಿಲ್ಲ' ಎಂದು ಸಿ.ಪಿ.ಯೋಗೇಶ್ವರ ವಿರುದ್ಧ ಹರಿಹಾಯ್ದರು.
'ರಾಜಕಾರಣವನ್ನು ನಾನು ಬಿಡಲ್ಲ, ನಾನು ನಿಮ್ಮನ್ನು ನನ್ನೊಟ್ಟಿಗೆ ಕರೆದುಕೊಂಡು ಹೋಗುತ್ತೇನೆ. ಹಾಗಾಗಿ ಚನ್ನಪಟ್ಟಣವನ್ನ ರಾಜಕೀಯವಾಗಿ ಮದುವೆ ಮಾಡಿಕೊಂಡಿದ್ದೇನೆ' ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications