Get Updates
Get notified of breaking news, exclusive insights, and must-see stories!

ಈಗಲೂ ಎಚ್ಡಿಕೆ - ಡಿಕೆಶಿ ಜೋಡೆತ್ತುಗಳೇ...!

ರಾಮನಗರ, ಡಿಸೆಂಬರ್ 26: ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಆದರೆ ಅಂದು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ಪಣ ತೊಟ್ಟು ನಿಂತವರು ಮತ್ತು ಕುಮಾರಸ್ವಾಮಿಗೆ ಬೆನ್ನೆಲುಬಾಗಿದ್ದವರು ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ಎಂಬುದು ಗೊತ್ತಿರುವ ವಿಚಾರ.

ಕಾಂಗ್ರೆಸ್‌ನಿಂದ ಶಾಸಕರೆಲ್ಲ ರಾಜೀನಾಮೆ ನೀಡಿ ಗುಳೆಹೋಗಿ ಮುಂಬೈನಲ್ಲಿ ಕುಳಿತಿದ್ದಾಗ ಅವರನ್ನು ಕರೆತರಲು ಖುದ್ದು ಮುಂಬೈಗೆ ಹೋಗಿ ಬಂದವರು ಡಿ.ಕೆ.ಶಿವಕುಮಾರ್. ಅಷ್ಟೇ ಅಲ್ಲ ಬಹುಮತವಿಲ್ಲದೆ ಸರ್ಕಾರ ಪತನವಾಗುತ್ತದೆ ಎಂಬುದು ಗೊತ್ತಾಗುತ್ತಿದ್ದಂತೆಯೇ ಸದನದಲ್ಲಿ ತಮ್ಮೆಲ್ಲ ಆಕ್ರೋಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟವರು ಡಿಕೆಶಿ. ಈ ವೇಳೆ ಸಮ್ಮಿಶ್ರ ಸರ್ಕಾರದ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷ್ಣಬೈರೇಗೌಡ ಮೊದಲಾದ ನಾಯಕರು ಮಾತನಾಡಿದರೂ ಅದ್ಯಾವುದೂ ಪರಿಣಾಮ ಬೀರಲಿಲ್ಲ. ಜತೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರನ್ನು ಒಗ್ಗೂಡಿಸುವಲ್ಲಿ ಯಾವುದೇ ಪಾತ್ರವನ್ನು ವಹಿಸಲಿಲ್ಲ.

ಒಂದು ವೇಳೆ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕವೂ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಮೈತ್ರಿ ಧರ್ಮವನ್ನು ಕಾಪಾಡಿಕೊಂಡು ಬಂದಿದ್ದರೆ ಉಪ ಚುನಾವಣೆಯಲ್ಲಿ ಗೆದ್ದು ಸಮ್ಮಿಶ್ರ ಸರ್ಕಾರವನ್ನು ಮತ್ತೆ ಅಸ್ತಿತ್ವಕ್ಕೆ ತರಬಹುದಿತ್ತೇನೋ. ಆದರೆ ಅದ್ಯಾವುದು ಆಗಲಿಲ್ಲ.

DK Shivakumar And Kumaraswamy Are Friends After The Fall Of Coalition Government Also

ಅದಕ್ಕೆ ಕಾರಣ ಸಿದ್ದರಾಮಯ್ಯ ಮತ್ತು ದೇವೇಗೌಡರ ಕುಟುಂಬದ ನಡುವೆ ಇದ್ದ ಒಂದಷ್ಟು ಅಸಮಾಧಾನಗಳು. ಇವೆಲ್ಲವೂ ಬಹಿರಂಗಗೊಂಡು ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುವ ಮುಖೇನ ಎರಡು ಪಕ್ಷಗಳ ನಡುವೆ ಇದ್ದ ಬಿರುಕನ್ನು ಕಂದಕವನ್ನಾಗಿ ಮಾಡಿಕೊಂಡರು. ಕಾಂಗ್ರೆಸ್‌ನ ಒಂದಷ್ಟು ನಾಯಕರು, ಜೆಡಿಎಸ್ ‌ನ ಮತ್ತೊಂದಷ್ಟು ನಾಯಕರು ತಮ್ಮ ಆಕ್ರೋಶವನ್ನು ಹಲವು ರೀತಿಯಲ್ಲಿ ಹೊರ ಹಾಕಿದ್ದರೂ ಈ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಯಾವುದೇ ರೀತಿಯಲ್ಲಿಯೂ ಆರೋಪ-ಪ್ರತ್ಯಾರೋಪಗಳನ್ನು ಮಾಡಲಿಲ್ಲ.

ಹಿಂದೆ ಅವರು ಹಾವು ಮುಂಗುಸಿಯಂತಿದ್ದರೂ ನಂತರದ ಕಾಲಘಟ್ಟದಲ್ಲಿ, ರಾಜಕೀಯ ಪರಿಸ್ಥಿತಿಗನುಗುಣವಾಗಿ ತಮ್ಮ ಸಂಬಂಧವನ್ನು ಗಟ್ಟಿ ಮಾಡಿಕೊಂಡಿದ್ದರು. ಲೋಕಸಭಾ ಚುನಾವಣೆ ಸಂದರ್ಭ ತಾವೇ ಜೋಡೆತ್ತುಗಳು ಎಂಬುದನ್ನು ಸಾಬೀತು ಮಾಡಿದರು. ಅಷ್ಟೇ ಅಲ್ಲ, ತಮ್ಮ ಸಂಬಂಧ ಇನ್ನು ಗಟ್ಟಿಯಾಗಿಯೇ ಉಳಿದಿದೆ ಎಂಬುದನ್ನು ರಾಜಕೀಯ ವಲಯದಲ್ಲಿ ತೋರಿಸಿಕೊಟ್ಟಿದ್ದರು. ಈಗಲೂ ಅದನ್ನು ಮುಂದುವರೆಸಿರುವುದಕ್ಕೆ ರಾಮನಗರದಲ್ಲಿ ಪೌರತ್ವ ಕಾಯ್ದೆ ಜಾರಿ ವಿರುದ್ಧದ ಹೋರಾಟ ಸಾಕ್ಷಿ.

ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ರಾಮನಗರ ಕ್ಷೇತ್ರವನ್ನು ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವುದರಿಂದ ಪತಿ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅವರ ಜತೆಗೆ ಕಾಂಗ್ರೆಸ್‌ನ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಇತರೆ ನಾಯಕರು ಇದ್ದರು. ಇವರೆಲ್ಲ ಸೇರಿ ಪ್ರತಿಭಟನೆ ನಡೆಸಿದ್ದರು. ಇದೆಲ್ಲವನ್ನು ಗಮನಿಸಿದರೆ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಜೋಡೆತ್ತುಗಳಾಗಿ ಮುಂದುವರೆಯುತ್ತಿದ್ದಾರೆ ಎಂಬುದಂತು ಸ್ಪಷ್ಟವಾಗುತ್ತಿದೆ. ಆದರೆ ದೇವೇಗೌಡರ ಕುಟುಂಬದೊಂದಿಗಿನ ಉತ್ತಮ ಸಂಬಂಧ ಡಿ.ಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಗಾದಿಗೆ ತೊಡಕಾಗುತ್ತಿದೆಯಾ? ಎಂಬ ಪ್ರಶ್ನೆಯೂ ಕಾಡತೊಡಗಿದೆ. ಇಲ್ಲಿ ತನಕ ಕೆಪಿಸಿಸಿ ಅಧ್ಯಕ್ಷ ಗಾದಿ ಡಿಕೆಶಿ ಅವರಿಗೆ ಸಿಗುವಲ್ಲಿ ಹಾದಿ ಸುಗಮವಾಗಿದೆ ಎನ್ನಲಾಗುತ್ತಿತ್ತಾರೂ ಇದೀಗ ಸಿದ್ದರಾಮಯ್ಯ ಬಣದಿಂದ ಕೃಷ್ಣಬೈರೇಗೌಡರನ್ನು ರೇಸಿಗೆ ಬಿಟ್ಟಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಏನೆಲ್ಲ ಆಗುತ್ತದೆ ಎಂಬುದನ್ನು ಕಾಲವೇ ಹೇಳಬೇಕಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+