ಏಸುಗೆ ಡಿಕೆಶಿ ಫೋಟೊ; ಸಾಮಾಜಿಕ ಜಾಲತಾಣದಲ್ಲಿ ಏಸುಕುಮಾರ್ ಎಂದು ಕುಚೋದ್ಯ
ರಾಮನಗರ, ಜನವರಿ 02: ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ಕಪಾಲ ಬೆಟ್ಟದಲ್ಲಿ ಜಗತ್ತಿನ ಎತ್ತರದ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣವನ್ನು ಸಮರ್ಥಿಸಿಕೊಂಡ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಏಸುಕುಮಾರ್ ಎಂದು ಕರೆದು ಟ್ರೋಲ್ ಮಾಡಿದ್ದಾರೆ ನೆಟ್ಟಿಗರು.
ಏಸುಕ್ರಿಸ್ತನ ಭಾವ ಚಿತ್ರಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮುಖದ ಚಿತ್ರ ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕುಚೋದ್ಯ ಮಾಡಿದ್ದು, ಅಲ್ಲದೇ ಇನ್ನೊಂದು ಇಟಲಿ ನಮ್ಮ ಕನಕಪುರ ನಾಡು, ಕನಕಪುರದ ಹಿಂದೂಗಳ ಆತ್ಮಕ್ಕೆ ಶಾಂತಿ ಸಿಗಲಿ, ಡಿಕೆಶಿ ಎಲ್ಲಾ ಹಿಂದೂಗಳನ್ನು ಮತಾಂತರ ಮಾಡಿದ ಮೇಲೆ ಕ್ರೈಸ್ತ ಮಿಷಿನರಿಗಳದೇ ದರ್ಬಾರು, ಎಂಬ ಬರಹಗಳನ್ನು ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಸಹೋದರರು ತಮ್ಮ ಅಧಿಕಾರ ಬಳಸಿ 114 ಅಡಿ ಎತ್ತರದ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ 10 ಎಕರೆ ಸರ್ಕಾರಿ ಭೂಮಿಯನ್ನು ಖರೀದಿಸಿ ಕಪಾಲ ಬೆಟ್ಟ ಅಭಿವೃದ್ಧಿ ಟ್ರಸ್ಟ್ ಗೆ ಕೊಡುಗೆ ನೀಡಿದ್ದರು. ನಂತರ ಈ ಒಂದು ಸಂಗತಿ ವಿವಾದದ ರೂಪ ಪಡೆದಿತ್ತು. ಇದೀಗ ಡಿಕೆ ಸಹೋದರರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಹರಿಬಿಡಲಾಗುತ್ತಿದೆ.
-
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications