ಚುನಾವಣಾ ಪ್ರಚಾರದಲ್ಲಿ ರೇವಣ್ಣಗೆ ಸಾಥ್ ಕೊಟ್ಟ ಡಿಕೆಶಿ, ಸಾಧುಕೋಕಿಲಾ
ರಾಮನಗರ, ಮೇ. 06: ಎಚ್.ಡಿ. ಕುಮಾರಸ್ವಾಮಿ ಯಾಕೆ ಎರಡು ಕಡೆ ಸ್ಪರ್ಧೆ ಮಾಡಬೇಕಾಗಿತ್ತು. ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದಾರೆ. ಅಲ್ಲಿಯೇ ನಿಲ್ಲಬೇಕಾಗಿತ್ತು.
ಯಾಕೆ ಎರಡು ಕಡೆ ನಿಂತು ದ್ವಂದ್ವ ನೀತಿ ಅನುಸರಿಸಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಎಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ರೇವಣ್ಣ ಪರ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಪ್ರಚಾರದ ವೇಳೆ ಡಿಕೆಶಿಗೆ ಸ್ಥಳೀಯ ಮುಖಂಡರು ಹಾಗೂ ಹಾಸ್ಯನಟ ಸಾಧುಕೋಕಿಲಾ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಬಹಿರಂಗವಾಗಿ ಮಾತನಾಡಿದ ಡಿಕೆಶಿ ಮೋದಿ ಗೌಡರನ್ನು ಯಾಕೆ ಹೊಗಳಬೇಕಾಗಿತ್ತು, ಅತ್ತ ದೇವೇಗೌಡ್ರು ಹೇಳ್ತಾರೆ ಬಿಜೆಪಿ ಜೊತೆಯಲ್ಲಿ ಎಚ್ ಡಿಕೆ ಹೋದ್ರೆ ನನ್ನ ಮಗನನ್ನೇ ಮನೆಯಿಂದ ಹೊರ ಹಾಕ್ತೀನಿ ಅಂತ.

ಇತ್ತ ಕುಮಾರಸ್ವಾಮಿ ಯಾಕೆ ಎರಡು ಕಡೆ ಸ್ಪರ್ಧೆ ಮಾಡಬೇಕಾಗಿತ್ತು. ಹಾಗಾದ್ರೆ, ರಾಮನಗರ ಜನತೆಯ ಮೇಲೆ ನಂಬಿಕೆ ಇಲ್ಲವೋ ಅಥವಾ ಇಲ್ಲಿಯವರ ಮೇಲೆ ನಂಬಿಕೆ ಇಲ್ಲವೋ ಎಂದು ಎಚ್ ಡಿಕೆ ಅವರನ್ನು ಪ್ರಶ್ನಿಸಿದರು.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾತ್ಯಾತೀತ ಜನತಾದಳ 112 ಸೀಟ್ ಗೆದ್ದು ಅಧಿಕಾರಕ್ಕೆ ಬರಲ್ಲ. ಇನ್ನು ಬಿಜೆಪಿ ಅಧಿಕಾರಕ್ಕೆ ಬರುತ್ತಾ ಅದು ಇಲ್ಲಾ, ಇನ್ನೇನಿದ್ದರು ಕಾಂಗ್ರೆಸ್ ಸರ್ಕಾರ ಮಾತ್ರ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೀಶ್ವರ್ ವಿರುದ್ಧ ಗುಡುಗಿದ್ರು. ಏನಪ್ಪ ನೀನು ಬಿಜೆಪಿಗೆ ಹೋಗಿದ್ದೀಯಾ, ನಿನ್ನ ಪಕ್ಷ ಎಲ್ಲರ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ ಹಣ ಹಾಕ್ತೀವಿ ಅಂದರು. ಹಾಕಿದ್ದಾರ? ಇಲ್ಲ. ಅವರಂತೆ ಯೋಗೇಶ್ವರ್ ಕೂಡ ಸುಳ್ಳು ಹೇಳಿಕೊಂಡು ಪ್ರಚಾರ ಮಾಡ್ತಾವ್ರೆ ಎಂದು ವ್ಯಂಗ್ಯವಾಡಿದರು.
ಹಣ ಹಂಚಿ ಕಾಂಗ್ರೆಸ್ ಕಾರ್ಯಕರ್ತರ ಖರೀದಿಗೆ ಮುಂದಾಗಿದ್ದಾರೆ. ಶಿಕಾರಿ ಮಾಡಲು ರೆಡಿ ಇದ್ದಾರೆ. ಹಾಗಾಗಿ ನಮ್ಮ ಕಾರ್ಯಕರ್ತರ ಪಡೆ ಅವರ ಹಿಂದೆ ಇದೇ. ಅದಕ್ಕೆಲ್ಲ ಅವಕಾಶ ಸಿಗಲ್ಲ ಎಂದು ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದರು.
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications