ಕರ್ನಾಟಕದ ಹಕ್ಕನ್ನು ಪ್ರಶ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಸಂಸದ ಡಿ.ಕೆ. ಸುರೇಶ್
ರಾಮನಗರ, ಡಿಸೆಂಬರ್ 21: "ಎಂಇಎಸ್ನವರು ಏನು ಮಾಡಿದರೂ ಕನ್ನಡ ವಿರೋಧಿ ಧೋರಣೆ ಇರುತ್ತದೆ. ಹೀಗಾಗಿ ಎಂಇಎಸ್ ಕೃತ್ಯವನ್ನು ಖಂಡಿಸಬೇಕಾಗುತ್ತದೆ. ಕರ್ನಾಟಕದಲ್ಲಿದ್ದುಕೊಂಡು ಕನ್ನಡವನ್ನು ವಿರೋಧಿಸುವವರ ಮೇಲೆ ಸರ್ಕಾರ ಶಿಸ್ತು ಕ್ರಮ ಕೈಗೊಳ್ಳಬೇಕು," ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಎಂಇಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯ ಪುರಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಅವರು ಮಾತನಾಡಿದರು.
"ಕರ್ನಾಟಕದ ಹಕ್ಕನ್ನು ಪ್ರಶ್ನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು. ಈ ಬಗ್ಗೆ ಸಿಎಂ ಈಗಾಗಲೇ ತಿಳಿಸಿದ್ದಾರೆ. ಆದರೆ ಅದನ್ನು ತ್ವರಿತವಾಗಿ ಕ್ರಮವಹಿಸಬೇಕು, ಅದು ನಮ್ಮ ಧರ್ಮ," ಎಂದರು.

"ಇನ್ನು ಎಂಇಎಸ್ ಸಂಘಟನೆ ಬ್ಯಾನ್ ವಿಚಾರವಾಗಿ ನಾನು ಮಾತನಾಡಲ್ಲ. ಆದರೆ ಯಾವುದೇ ಸಂಘಟನೆ ನಮ್ಮ ನಾಡಿನ ವಿರುದ್ಧ ಇದ್ದರೆ ಸರ್ಕಾರ ಕ್ರಮವಹಿಸಲಿ. ಯಾವುದೇ ಸಂಘಟನೆ ಇರಲಿ, ಯಾರೇ ಇರಲಿ ಅದರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು," ಎಂದು ಹೇಳಿದರು.
"ಎಂಇಎಸ್ ಸಂಘಟನೆಯನ್ನು ನಿಷೇಧಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ, ಬೆಳಗಾವಿ ಕರ್ನಾಟಕದ ಒಂದು ಭಾಗವಾಗಿದೆ. ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿ ಅಭಿವೃದ್ಧಿಯಾಗುತ್ತಿರುವುದರಿಂದ ಕನ್ನಡವನ್ನು ಪ್ರೋತ್ಸಾಹಿಸಬೇಕು, ಕನ್ನಡ ಪರ ಎಲ್ಲಾ ಭಾಷೆಯ ಜನರು ನಿಲ್ಲಬೇಕು," ಎಂದು ಡಿ.ಕೆ. ಸುರೇಶ್ ತಿಳಿಸಿದರು.
ಸಿ.ಟಿ. ರವಿಯನ್ನು ಆಸ್ಪತ್ರೆಗೆ ಸೇರಿಸಬೇಕು
ಇನ್ನು ಕಾಂಗ್ರೆಸ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿ.ಕೆ.ಸುರೇಶ್, ಸಿಟ್ಟಿನ ಬರದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಎನ್ನುವ ಬದಲು ವಿಲ್ಸನ್ ಗಾರ್ಡನ್ಗೆ ಸೇರಿಸಬೇಕು ಎಂದರು.

ಸಿ.ಟಿ. ರವಿ ಒಂದು ರಾತ್ರಿ ಒಂದು ರೀತಿ ಮಾತನಾಡುತ್ತಾರೆ, ಮತ್ತೊಂದು ರಾತ್ರಿ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ. ಅವರಿಗೆ ಯಾವುದೇ ಕೀ ಇಲ್ಲ, ಕೀ ಇಲ್ಲದೇ ಆಡುತ್ತಾರೆ. ಕೀ ಇಲ್ಲದವರ ಬಗ್ಗೆ ಏನು ಹೇಳಲು ಸಾಧ್ಯ. ಅವರನ್ನು ವಿಲ್ಸನ್ ಗಾರ್ಡನ್ಗೆ ಕಳುಹಿಸಬೇಕಷ್ಟೇ ಎಂದರು.
ಸಿ.ಟಿ. ರವಿಗೆ ತಿಳುವಳಿಕೆ ಸ್ವಲ್ಪ ಕಡಿಮೆ. ಅವರ ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯ ಘನತೆಗೆ ತಕ್ಕ ರೀತಿ ನಡೆದುಕೊಳ್ಳಬೇಕು. ಸಿ.ಟಿ. ರವಿಯ ಹೇಳಿಕೆಗಳನ್ನು ನೋಡುತ್ತಿರುವ ಪಕ್ಷದ ವರಿಷ್ಠರು ಯಾವುದಾದರೂ ಆಸ್ಪತ್ರೆಗೆ ಸೇರಿಸುವುದು ಒಳ್ಳೆಯದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿದರು.
ಇದಲ್ಲದೆ ಎಐಸಿಸಿ ಹೊಸ ಜವಾಬ್ದಾರಿ ನೀಡಿದೆ. ನಮ್ಮ ಪಕ್ಷದ ಸೋನಿಯಾ ಗಾಂಧಿಯವರು ಹೊಸ ಸಮಿತಿ ರಚನೆ ಮಾಡಿದ್ದಾರೆ. ಆದರಲ್ಲಿ ನನ್ನನ್ನು ಗುರುತಿಸಿ ಹುದ್ದೆ ಕೊಟ್ಟಿರುವುದರಿಂದ ಎಲ್ಲಾ ಸಂಸದರ ಒಡನಾಡಿಯಾಗಿ ಕೆಲಸ ಮಾಡುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು.
ಜನವರಿಯಲ್ಲಿ ಮೇಕೆದಾಟು ಹೋರಾಟ
ಜನವರಿ 9ರಿಂದ ಮೇಕೆದಾಟು ಹೋರಾಟ ಪ್ರಾರಂಭ ಮಾಡಲಾಗುತ್ತದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಇಂದು ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ. ಇದು ಪಕ್ಷಾತೀತವಾಗಿ ನಡೆಯುವ ಹೋರಾಟ, ಯಾರು ಬೇಕಾದರೂ ಹೋರಾಟದಲ್ಲಿ ಭಾಗವಹಿಸಬಹುದು ಎಂದು ಸಂಸದ ಡಿ.ಕೆ. ಸುರೇಶ್ ಮೇಕೆದಾಟು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ
ತೃತೀಯ ಲಿಂಗಿಗಳಿಗೆ ಪೊಲೀಸ್ ಇಲಾಖೆಯಲ್ಲಿ ಅವಕಾಶ ನೀಡಿರುವ ಬಗ್ಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಸಮಾಜದಲ್ಲಿ ಬದಲಾವಣೆಗಳು ಆಗಬೇಕು. ತೃತೀಯ ಲಿಂಗಿಗಳಿಗೆ ಪೊಲೀಸ್ ಇಲಾಖೆಯಲ್ಲಿ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅವರ ಪರವಾಗಿ ನಿಂತಿದೆ. ಸರ್ಕಾರದ ಈ ಕ್ರಮವನ್ನು ಅಭಿನಂದಿಸುತ್ತೇನೆಂದು ಪ್ರತಿಕ್ರಿಯೆ ನೀಡಿದರು.
Recommended Video
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications