ಸಂಸದ ಪ್ರತಾಪ್ ಸಿಂಹ ಅವರನ್ನು ಪಕ್ಷದಿಂದ ಉಚ್ಚಾಟಿಸಿ : ಡಿಕೆ ಸುರೇಶ್
ರಾಮನಗರ, ಡಿಸೆಂಬರ್ 05: ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿ ಮಾಡಲು ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದರು.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಇಂದು ನಡೆದ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸುರೇಶ್,
ಬಿಜೆಪಿಯ ರಾಷ್ಟ್ರೀಯ ನಾಯಕರ ಆದೇಶದಂತೆ ಕೋಮುಗಲಭೆ ಮಾಡುತ್ತಿರುವುದಾಗಿ ಸ್ವತಃ ಪ್ರತಾಪ್ ಸಿಂಹ ಅವರೇ ಹೇಳಿದ್ದಾರೆ. ಆದರೂ ಅವರ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲವೇಕೆ? ಎಂದು ಪ್ರಶ್ನಿಸಿದರು.

ಬಿಜೆಪಿಯ ರಾಷ್ಟ್ರೀಯ ನಾಯಕರ ಆದೇಶದಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿ ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಇಂತಹ ಗಲಭೆಗೆ ಮುಖ್ಯಮಂತ್ರಿಗಳು ಅವಕಾಶ ನೀಡುವುದಿಲ್ಲ, ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಕಲುಷಿತ ವಾತಾವರಣ ಸೃಷ್ಟಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಇನ್ನೂ ಕಾಂಗ್ರೆಸ್ ಸರಕಾರ ರಾಜ್ಯವನ್ನು ರಾವಣ ರಾಜ್ಯ ಮಾಡಲು ಹೊರಟ್ಟಿದೆ ಎಂಬ ಸಚಿವ ಅನಂತ್ ಕುಮಾರ್ ಹೇಳಿಕೆ ಪ್ರತಿಕ್ರಿಯಿಸಿದ ಸುರೇಶ್ ರಾಮಾಯಣದಲ್ಲಿ ರಾಮ ರಾಜ್ಯವು ಬರುತ್ತದೆ. ರಾವಣ ರಾಜ್ಯವು ಬರುತ್ತದೆ ಹಾಗಾಗಿ ಅನಂತ್ ಕುಮಾರ್ ಹಾಗೂ ಅವರ ಪಕ್ಷದವರು ರಾಮಾಯಣವನ್ನ ಭಾಗ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದ್ರು.
ನಾನು ಯಾವುದೇ ಅಧಿಕಾರಿಗಳಿಗೆ ಏಕವಚನ ಪ್ರಯೋಗ ಮಾಡಿಲ್ಲ, ಇದೆಲ್ಲ ಯೋಗೀಶ್ವರ್ ಅವರ ಕಟ್ಟು ಕಥೆ ಒಂದು ವೇಳೆ ನಾನು ಏಕವಚನ ಪ್ರಯೋಗ ಮಾಡಿದ್ರೆ ಅಂತಹ ಅಧಿಕಾರಿಗಳು ಬೇಕಾದ್ರೆ ತಮ್ಮ ಹಿರಿಯ ಅಧಿಕಾರಿಗಳಿಗೊ ಇಲ್ಲ ಶಾಸಕರಿಗೊ ನನ್ನ ವಿರುದ್ಧ ದೂರು ಕೊಡಲಿ ಎಂದು ತಿಳಿಸಿದರು.
ಸಿಪಿವೈ ಅವರ ಸಹೋದರನೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದಾಗಿ ಹೇಳಿಕೊಂಡು ಜಿ.ಪಂ ಅಧ್ಯಕ್ಷಗಿರಿಯಲ್ಲಿ ಇದ್ದುಕೊಂಡು ಅಧಿಕಾರ ಅನುಭವಿಸುತ್ತಿದ್ದಾರೆ. ಸಿಪಿವೈಗೆ ಅಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಸಹೋದರ ರಾಜೇಶ್ ಕೈಯಲ್ಲಿ ಜಿ.ಪಂ ಅಧ್ಯಕ್ಷಗಾದಿಗೆ ರಾಜಿನಾಮೆ ಕೊಡಿಸಲಿ ಎಂದು ಸಿಪಿವೈಗೆ ಸವಾಲು ಹಾಕಿದ್ರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications