ಕೊರೊನಾ ಕಂಟ್ರೋಲ್ ಮಾಡಲು ಹೊಸ ಯೋಜನೆ
ಬೆಂಗಳೂರು, ಆ. 10: ರಾಮನಗರ ಜಿಲ್ಲೆಗೆ ನಿಗದಿಯಾಗಿರುವ ಗುರಿಗೆ ಮಾತ್ರ ಕೋವಿಡ್ ಪರೀಕ್ಷೆಗೆ ಸೀಮಿತಗೊಳಿಸದೆ ಅವಶ್ಯಕತೆ ಇರುವ ಕಡೆ ಹೆಚ್ಚಿನ ಕೋವಿಡ್-19 ಪರೀಕ್ಷೆ ನಡೆಸುವಂತೆ ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.
Recommended Video
ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ರಾಮನಗರ ಜಿಲ್ಲೆಯಲ್ಲಿ ILI ಹಾಗೂ SARI ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ. ಜಿಲ್ಲೆಯಲ್ಲಿ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ, ಪ್ರಾಥಮಿಕ ಹಂತದಲ್ಲೇ ಕೋವಿಡ್ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ. ಕೋವಿಡ್ ಸಂಬಂಧಿಸಿದಂತೆ ಸಾರ್ವಜನಿಕರು ಸಂಪರ್ಕಿಸಲು ತೆರೆಯಲಾಗಿರುವ ಸಹಾಯವಾಣಿಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ರಾಮನಗರ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಆ್ಯಂಟಿಜೆನ್ ಕಿಟ್
ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಜಿಲ್ಲೆಯಲ್ಲಿ 19,480 ಸ್ಯಾಂಪಲ್ಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 1,670 ಪಾಸಿಟಿವ್ ಕಂಡುಬಂದಿರುತ್ತದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಗೆ 6,000 ಆ್ಯಂಟಿಜೆನ್ ಕಿಟ್ ನೀಡಲಾಗಿದ್ದು 5,462 ಬಳಸಿಕೊಳ್ಳಲಾಗಿದೆ. ಇದರಲ್ಲಿ 469 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದರು.
40 ಲಕ್ಷ ಮಾನವ ದಿನ: ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯಿತಿಗಳಿಂದ 2020ರ ಆಗಸ್ಟ್ 10ರ ಅಂತ್ಯಕ್ಕೆ ದಾಖಲೆಯಾದ 40 ಲಕ್ಷ ಮಾನವ ದಿನಗಳನ್ನು ನರೇಗಾ ಯೋಜನೆಯಡಿ ಸೃಜಿಸಲಾಗಿದೆ. ವಾರ್ಷಿಕವಾಗಿ ನೀಡಲಾಗಿರುವ 50 ಲಕ್ಷ ಮಾನವ ದಿನಗಳ ಗುರಿಯ ಪೈಕಿ ಈಗಾಗಲೇ 21 ಲಕ್ಷ ಮಾನವ ದಿನಗಳಿಗಿಂತ ಅಧಿಕ ಸಾಧನೆಯನ್ನು ಜಿಲ್ಲೆಯಲ್ಲಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಡಿಸಿಎಂಗೆ ಮಾಹಿತಿ ನೀಡಿದರು.

ಆಟದ ಮೈದಾನ
ಜಿಲ್ಲೆಯಲ್ಲಿ 1400 ಕ್ಕೂ ಹೆಚ್ಚು ಪ್ರಾಥಮಿಕ, ಪ್ರೌಢಶಾಲೆಗಳಿವೆ. ಈ ಪೈಕಿ ಆಯ್ದ 500 ಶಾಲೆಗಳನ್ನು ಗುರುತಿಸಿ ಅಲ್ಲಿ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಸುಮಾರು ಒಂದು ಎಕರೆಯಷ್ಟು ಕನಿಷ್ಠ ಜಾಗವನ್ನು ಹೊಂದಿರುವ ಶಾಲೆಗಳಲ್ಲಿ ಮಕ್ಕಳಿಗೆ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಇಲ್ಲಿ, ಓಟದ ಟ್ರ್ಯಾಕ್ , ಕಬಡ್ಡಿ, ವಾಲಿಬಾಲ್ ಮತ್ತು ಬಾಸ್ಕೆಟ್ ಬಾಲ್ ಕೋರ್ಟ್, ಹೈಜಂಪ್ ಮತ್ತು ಲಾಂಗ್ ಜಂಪ್ ಗೆ ಅನುಕೂಲವಾಗುವಂತೆ ಮರಳು ಗುಂಡಿಗಳ ನಿರ್ಮಾಣ ಸೇರಿದಂತೆ ಐದು ಇಲ್ಲವೆ ಆರು ಬಗೆಯ ಆಟಗಳನ್ನು ಮಕ್ಕಳು ಆಡಲು ಅನುವಾಗುವಂತೆ ಮೈದಾನವನ್ನು ನಿರ್ಮಿಸಲಾಗುವುದು ಎಂದು ಸಿಇಒ ಇಕ್ರಂ ಅವರು ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ ಅವರಿಗೆ ವಿವರಿಸಿದರು.

'ಎ' ಗ್ರೇಡ್ ಸಾಧನೆ
ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ನೂತನವಾಗಿ ರೂಪಿಸಿರುವ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆಯಲ್ಲಿ ರಾಮನಗರ ಜಿಲ್ಲೆ 'ಎ' ಗ್ರೇಡ್ ಸಾಧನೆ ಮಾಡಿದೆ. ಇದಕ್ಕಾಗಿ ಜಿಲ್ಲೆಗೆ ಹೆಸರು ತಂದುಕೊಟ್ಟ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ಶಿಕ್ಷಕರನ್ನು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದರು.

ಕೋವಿಡ್ ಕೇರ್ ಸೆಂಟರ್
ರಾಮನಗರದಲ್ಲಿರುವ ಕೋವಿಡ್-19 ಆಸ್ಪತ್ರೆಯು ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೆರವಿನಿಂದ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ದೊಡ್ಡ ಮರಳವಾಡಿಯಲ್ಲಿ 118 ಹಾಸಿಗೆಗಳ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಇನ್ನು ಮುಂದೆ ಈ ಭಾಗದಲ್ಲಿನ ಕೋವಿಡ್ ಸೋಂಕಿತರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುವುದು. ಅದೇ ರೀತಿ ಮಾಗಡಿಯಲ್ಲೂ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಅನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಮಾಹಿತಿ ನೀಡಿದರು.
ವರ್ಚುವಲ್ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಡಿಎಚ್ಒ ಡಾ. ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications