ಎಚ್ಡಿಕೆ ಮಣಿಸಲು ಡಿಕೆಶಿ ಬೂಟು ನೆಕ್ಕಿದ್ದ ಯೋಗೇಶ್ವರ್: ಏನಿದು ಗಂಭೀರ ಆರೋಪ!
ರಾಮನಗರ, ಮಾರ್ಚ್ 1: ಸಚಿವ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ 'ಚನ್ನಪಟ್ಟಣ ಪಾಲಿಟಿಕ್ಸ್' ಗೆ ಎರಡೂ ಪಕ್ಷಗಳ ಇತರ ನಾಯಕರೂ ಈಗ ಧ್ವನಿಗೂಡಿಸಲು ಆರಂಭಿಸಿದ್ದಾರೆ.
"ನನ್ನ ವಿರುದ್ದ ಏಕವಚನದಲ್ಲಿ ಮಾತನಾಡುತ್ತಿದ್ದೀಯಾ, ನಿನಗಿಂತ ಚೆನ್ನಾಗಿ ನಾನೂ ಮಾತನಾಡಬಲ್ಲೆ. ಇಸ್ಪೀಟ್ ದುಡ್ಡಲ್ಲಿ ನೀನು ಸಚಿವನಾಗಿದ್ದೀಯಾ ಅಷ್ಟೇ..ನನ್ನ ಮುಂದೆ ನೀನು ಇನ್ನೂ ಬಚ್ಚಾ"ಎಂದು ಕುಮಾರಸ್ವಾಮಿ, ಸಚಿವ ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದರು.
ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ್ದ ಸಿಪಿವೈ, "ಸಿಎಂ ಆಗಿದ್ದಾಗ ಬೆಳಗ್ಗೆ ಆರು ಗಂಟೆಗೆ ಹೋದರೂ, ಮನೆಗೆ ಯಾರನ್ನೂ ಸೇರಿಸುತ್ತಿಲ್ಲ. ಈಗ, ಚನ್ನಪಟ್ಟಣಕ್ಕೆ ಬರುತ್ತಲೇ ಇದ್ದಾನೆ. ಅವನಿಗೆ ಗೊತ್ತಾಗಿದೆ, ಕೆಲಸ ಮಾಡಿದರೆ ಮಾತ್ರ ಜನ ಕೈಹಿಡಿಯುವುದು ಎಂದು. ರಾಮನಗರಕ್ಕೆ ಬಂದಾಗ ಅವನು ಕೂಡಾ ಬಚ್ಚನೇ ಆಗಿದ್ದ"ಎಂದು ಸಿಪಿವೈ ಹೇಳಿದ್ದರು.
ಇವರ ಈ ಮಾತಿನ ಚಕಮಕಿಗೆ ಜೆಡಿಎಸ್ ಮತ್ತು ಬಿಜೆಪಿಯ ನಾಯಕರೂ ಹೇಳಿಕೆಯನ್ನು ನೀಡಿದ್ದಾರೆ. ಜೆಡಿಎಸ್ ಮುಖಂಡರೊಬ್ಬರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಡಿಕೆಶಿ ಬೂಟು ನೆಕ್ಕಿದ್ದರು ಎನ್ನುವ ಗಂಭೀರ ಹೇಳಿಕೆಯನ್ನು ನೀಡಿದ್ದಾರೆ.

ಜೆಡಿಎಸ್ ಮುಖಂಡ, ಶಾಸಕ ಸಾ.ರಾ.ಮಹೇಶ್
"ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ಚನ್ನಪಟ್ಟಣದಲ್ಲಿ 'ಸರ್ವಪಕ್ಷ ಸದಸ್ಯ' @CPYogeeshwara ಬೆಂಬಲಿತ ಅಭ್ಯರ್ಥಿಗಳು ಹೇಳಹೆಸರಿಲ್ಲದೇ ಸೋತಿದ್ದಾರೆ. 80% ಜೆಡಿಎಸ್ ಗೆದ್ದಿದೆ.ದಿನೇ ದಿನೇ ಚನ್ನಪಟ್ಟಣ ಕ್ಷೇತ್ರ ದೂರವಾಗುತ್ತಿರುವುದು ನೋಡಲಾಗದೇ ಕ್ಷೇತ್ರ ಕಳೆದುಹೋಗಿರುವ ನೋವು ತಡೆಯಲಾಗದೇ ಯೋಗೇಶ್ವರ್ ಗೆ ಮತಿ ಭ್ರಮಣೆಯಾಗಿದೆ. ಅದಕ್ಕೇ ಈ ಉರಿ ಮಾತು" ಎಂದು ಜೆಡಿಎಸ್ ಮುಖಂಡ, ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

ಜೆಡಿಎಸ್ ಮುಖಂಡ ಟಿ.ಎ.ಶರವಣ ವ್ಯಂಗ್ಯ
"ಅವನೊಬ್ಬ ಬಚ್ಚಾ... ಯೋಗೇಶ್ವರ್ ಕುರಿತ ಕುಮಾರಸ್ವಾಮಿ ಅಕ್ಷರಶಃ ನಿಜ. ಯೋಗೇಶ್ವರ್ ರಾಜಕೀಯ ಪ್ರಬುದ್ಧನಲ್ಲ. ಆತನ ಮನಸ್ಸು ಮಂಗನಂತೆ ಚಂಚಲ. ಹೀಗಾಗಿಯೇ ಊರಲ್ಲಿರುವ ಪಕ್ಷಗಳನ್ನೆಲ್ಲ ಸುತ್ತಿ ಬಂದಿದ್ದಾನೆ. ಈಗ ಬಿಜೆಪಿಯಲ್ಲಿ ಕುಳಿತು ಸಿದ್ಧಾಂತದ ಮಾತಾಡುತ್ತಾನೆ. ಆತನ ಬಾಯಲ್ಲಿ ಸಿದ್ಧಾಂತ ಕೇಳಿ ನಗಲಾರದವರೂ ನಕ್ಕರೆ ಆಶ್ಚರ್ಯವಿಲ್ಲ" ಎಂದು ಜೆಡಿಎಸ್ ಮುಖಂಡ ಟಿ.ಎ.ಶರವಣ ವ್ಯಂಗ್ಯವಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಬೂಟನ್ನು ಯೋಗೇಶ್ವರ್ ನೆಕ್ಕಿದ್ದ
"ಇಸ್ಪೀಟ್ ಆಡಿದ ಅನುಭವ ಇದ್ದವರಿಗೇ ಅಲ್ಲವೇ ಜೋಕರ್ನ ಮಹತ್ವ ಗೊತ್ತು? ಹಾಗಾಗಿಯೇ ನಿಮ್ಮ ನಾಲಿಗೆ ಮೇಲೆ ಜೋಕರ್ಗಳು ನಲಿದಾಡುತ್ತಾರೆ. ಹಿಂದೊಮ್ಮೆ, ಕುಮಾರಸ್ವಾಮಿಯವರನ್ನು ರಾಜಕೀಯವಾಗಿ ಮಣಿಸಲು, ಡಿ.ಕೆ.ಶಿವಕುಮಾರ್ ಅವರ ಬೂಟನ್ನು ಯೋಗೇಶ್ವರ್ ನೆಕ್ಕಿದ್ದ"ಎಂದು ಜೆಡಿಎಸ್ ಮುಖಂಡ ಬೋಜೇಗೌಡ ಟೀಕಿಸಿದ್ದಾರೆ.
Recommended Video

ಡಿಸಿಎಂ ಡಾ.ಅಶ್ವಥ್ ನಾರಾಯಣ ಹೇಳಿಕೆ
"ಕುಮಾರಸ್ವಾಮಿಯವರ ವಿರುದ್ದ ಯೋಗೇಶ್ವರ್ ನೀಡುತ್ತಿರುವ ಹೇಳಿಕೆ ಸರಿಯಾಗಿದೆ, ಇದರಲ್ಲಿ ತಪ್ಪೇನು ಇಲ್ಲ. ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ದ ಯೋಗೇಶ್ವರ್ ಅಭ್ಯರ್ಥಿ ಮತ್ತು ಚುನಾವಣೆಯಲ್ಲಿ ಅವರನ್ನು ಸೋಲಿಸುತ್ತಾರೆ"ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications