Get Updates
Get notified of breaking news, exclusive insights, and must-see stories!

ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ: ಕೈದಿಗಳ ಬಳಿ ಮೊಬೈಲ್, ಸಿಗರೇಟ್, ಗಾಂಜಾ, ತಂಬಾಕು ಪತ್ತೆ

ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ಜೈಲಿನ ಕೈದಿಗಳ ಬಳಿ ವಿವಿಧ ನಿಷೇಧಿತ ವಸ್ತುಗಳಿಗಾಗಿ ತಪಾಸಣೆ ಕಾರ್ಯವನ್ನು ಮುಂದುವರೆಸಿದ್ದಾರೆ.

ರಾಮನಗರ, ಮಾರ್ಚ್‌, 19: ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ಜೈಲಿನ ಕೈದಿಗಳ ಬಳಿ ವಿವಿಧ ನಿಷೇಧಿತ ವಸ್ತುಗಳಿಗಾಗಿ ತಪಾಸಣೆ ಕಾರ್ಯವನ್ನು ಮುಂದುವರೆಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಯಿರುವ ಪೊಲೀಸರ ತಂಡ ಇಂದು ಬೆಳಗ್ಗೆ ಸುಮಾರು 6 ಗಂಟೆಯಿಂದ ಸತತವಾಗಿ ತಪಾಸಣೆ ನಡೆಸಿದ್ದಾರೆ.

‌ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳ ಬಳಿ ಮೊಬೈಲ್, ಗುಟ್ಕಾ, ಬೀಡಿ, ಸಿಗರೇಟ್, ಸಿಮ್ ಕಾರ್ಡ್, ಹಣ, ಚಾಕು ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳು ಇಲ್ಲಿನ ಸಿಬ್ಬಂದಿಗಳ ಸಹಕಾರದಿಂದ ಜೈಲಿನ ಒಳಗೆ ಬಳಕೆಯಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಆದೇಶದ ಮೇರೆಗೆ ಕಾರಾಗೃಹದ ಮೇಲೆ ಪೊಲೀಸರು ದಾಳಿ‌ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Early morning police raid on Ramanagara district jail: mobiles, drugs items found

ಒಂದು ವರ್ಷದಿಂದ ಸತತ ದಾಳಿ

ಕಳೆದ ಒಂದು ವರ್ಷದಿಂದ ಸತತವಾಗಿ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದು, ಪ್ರತಿ ಬಾರಿ ದಾಳಿ ನಡೆಸಿದ ಸಮಯದಲ್ಲೂ ಕೈದಿಗಳ ಬಳಿ ಮೊಬೈಲ್, ಸಿಗರೇಟ್, ಗಾಂಜಾ, ತಂಬಾಕು ಪದಾರ್ಥಗಳು ಪತ್ತಯಾಗಿವೆ. ನಿರ್ಬಂಧಿತ ವಸ್ತುಗಳು ಜೈಲು ಸಿಬ್ಬಂದಿಗಳ ಸಹಕಾರದಿಂದಲೇ ಜೈಲಿನ ಒಳಗೆ ಪ್ರವೇಶ ಮಾಡುತ್ತಿವೆ ಎನ್ನುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದೆ.

ಕೊಲೆ ಆರೋಪಿಯ ಹುಟ್ಟುಹಬ್ಬ ಆಚರಣೆ

ಕೊಲೆ ಕೇಸ್ ಒಂದರಲ್ಲಿ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದ ಆರೋಪಿ ತನ್ನ ಸಂಗಡಿಗರೊಂದಿಗೆ ಜೈಲ್ ಕೊಠಡಿಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು, ಸಂಭ್ರಮಾಚರಣೆಯ ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಫೋಟೊ ಪೋಸ್ಟ್ ಮಾಡಿಕೊಂಡಿದ್ದ. ಆಗ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಪೊಲೀಸರು ಈ ಜೈಲಿನ ಮೇಲೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಎರಡು ಮೊಬೈಲ್ ಹಾಗೂ ಮೂರು ಸಿಮ್ ಕಾರ್ಡ್‌ಗಳು ಪತ್ತೆಯಾಗಿದ್ದವು.

Early morning police raid on Ramanagara district jail: mobiles, drugs items found

ಆರೋಪಿಗಳ ವಿವರ ಇಲ್ಲಿದೆ

ಕೊಲೆ ಪ್ರಯತ್ನ ಕೇಸ್‌ನಲ್ಲಿ ಜೈಲಿನಲ್ಲಿರುವ ಮಹೇಶ್ ಗೌಡ, ಸೈಯ್ಯದ್ ಮಲ್ಲಿಕ್, ಸುಬ್ಬಯಾರ್, ದಿಲೀಪ್, ಯಶ್ವಂತ್, ಯೋಗೇಶ್ ಹಾಗೂ ಪೋಕ್ಸೋ ಪ್ರಕರಣದ ಆರೋಪಿ ಗಿರೀಶ್, 302 ಕೇಸ್‌ನಲ್ಲಿರುವ ಆರೋಪಿ ಚಂದ್ರು ಅವರನ್ನ ವಿಚಾರಣೆ ನಡೆಸಲಾಗಿದೆ. ಕೋರ್ಟ್‌ನಲ್ಲಿ ಅನುಮತಿ ಕೋರಿ ಈ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದರು.

ಕಾರಾಗೃಹಗಳು ಅಪರಾಧ ಎಸಗಿದ ವ್ಯಕ್ತಿಗಳ ಮನಃ ಪರಿವರ್ತನೆಯ ತಾಣಗಳಾಗಬೇಕು. ಆದರೆ ಹಣದಾಸೆ ಬಿದ್ದ ಜೈಲು ಸಿಬ್ಬಂದಿಗಳ ಅಕ್ರಮ ಸಹಕಾರದಿಂದ ಅಪರಾಧಿಗಳ ಮೋಜು ಮಸ್ತಿಯ ತಾಣಗಳಾಗುತ್ತಿವೆ ಎಂಬ ಆರೋಪಗಳು ಪದೇ ಪದೇ ಕೇಳಿಬತುತ್ತಿವೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಪದೇ ಪದೇ ದಾಳಿ ನಡೆಸುತ್ತಿದ್ದಾರೆ. ಪ್ರತಿ ಬಾರಿಯ ದಾಳಿ ಸಮಯದಲ್ಲೂ ಜೈಲಿನನಲ್ಲಿನ ಕರ್ಮಕಾಂಡಗಳು ಬಯಲಾಗುತ್ತಲೇ ಇವೆ.

ಜೈಲಿನಲ್ಲಿನ ಕರ್ಮಕಾಂಡಗಳ ಬಯಲು

ಈ ಹಿಂದೆಯೂ ಸಹ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ನಿರ್ಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಿತ್ತು. ರಾಮನಗರ ಎಸ್ಪಿ ಎಸ್.ಗಿರೀಶ್ ನೇತೃತ್ವದಲ್ಲಿ ಡಿವೈಎಸ್ಪಿ, ಸಿಪಿವೈ, ಪಿಎಸ್ಐಗಳು ಸೇರಿದಂತೆ 30ಕ್ಕೂ ಹೆಚ್ಚು ಪೊಲೀಸರ ತಂಡ ಜಿಲ್ಲಾ ಕಾರಾಗೃಹದ ಮೂಲೆ ಮೂಲೆಗಳನ್ನು ತಪಾಸಣೆ ನಡೆಸಿ, ವಿಚಾರಣಾಧೀನ ಕೈದಿಗಳಿಂದ ಹಣ, ಬೀಡಿ, ಸಿಗರೇಟ್, ಗುಟ್ಕಾ, ಬ್ಲೇಡ್, ಚಾಕು ಸೇರಿದಂತೆ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದರು.

ಕಾರಾಗೃಹದಲ್ಲಿ ಅಕ್ರಮಗಳು ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು, ಕಾರಾಗೃಹದಲ್ಲಿ 54 ಸಾವಿರ ಹಣ, 5 ಮೊಬೈಲ್ ಫೋನ್, 6 ಸಿಮ್ ಕಾರ್ಡುಗಳು, 70ಕ್ಕೂ ಹೆಚ್ಚು ಸಿಗರೇಟ್ ಮತ್ತು ಬೀಡಿ ಪ್ಯಾಕೇಟ್ ಗಳು, ಗುಟ್ಕಾ ಪ್ಯಾಕೇಟ್, ಬ್ಲೇಡ್, ಚಾಕು, ಸೀಜರ್ ಹಾಗೂ ಇತರೆ ವಸ್ತುಗಳು ಸಹ ಪರಿಶೀಲನೆ ವೇಳೆ ಸಿಕ್ಕಿದ್ದವು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+