ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಆಪ್ತರಿಗೆ ಇಡಿ ಸಮನ್ಸ್; ದೆಹಲಿಗೆ ವಿಚಾರಣೆಗೆ ಬರಲು ಸೂಚನೆ

|
Google Oneindia Kannada News

ರಾಮನಗರ, ಸೆಪ್ಟೆಂಬರ್ 30 : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ, ರಾಮನಗರ ಕಾಂಗ್ರೆಸ್ ನಾಯಕನಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ದೆಹಲಿಗೆ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ.

ರಾಮನಗರ ಕಾಂಗ್ರೆಸ್ ಮುಖಂಡದ ಇಕ್ಬಾಲ್ ಹುಸೇನ್‌ಗೆ ಇಡಿ ಸಮನ್ಸ್ ನೀಡಿದ್ದು, ಗುರುವಾರ ವಿಚಾರಣೆಗೆ ಬರಬೇಕು ಎಂದು ಸೂಚಿಸಿದೆ. ಇಕ್ಬಾಲ್ ಹುಸೇನ್ ಡಿ. ಕೆ. ಶಿವಕುಮಾರ್‌ ಆಪ್ತರು.

ನಟಿಯರಿಗೆ ಸಂಕಷ್ಟ; ರಾಗಿಣಿ, ಸಂಜನಾ 5 ದಿನ ಇಡಿ ಕಸ್ಟಡಿಗೆನಟಿಯರಿಗೆ ಸಂಕಷ್ಟ; ರಾಗಿಣಿ, ಸಂಜನಾ 5 ದಿನ ಇಡಿ ಕಸ್ಟಡಿಗೆ

ಇಕ್ಬಾಲ್ ಹುಸೇನ್ ಆದಾಯದ ಮೂಲಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡಿದೆ. ಬ್ಯಾಂಕ್ ವಿವರ, ಕಾರ್ಖಾನೆ, ವ್ಯವಹಾರದ ಕುರಿತು ಮಾಹಿತಿಯನ್ನು ಇಡಿ ಕೇಳಿದೆ.

ಕಣ್ವ ಗ್ರೂಪ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ ಕಣ್ವ ಗ್ರೂಪ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ED Issues Summons To Ramanagara Congress Leader Iqbal Hussain

ಗ್ರಾನೈಟ್ ಉದ್ಯಮಿಯಾಗಿರುವ ಇಕ್ಬಾಲ್ ಹುಸೇನ್, ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಹೌದು. ಡಿ. ಕೆ. ಶಿವಕುಮಾರ್ ಕುಟುಂಬಕ್ಕೆ ಆಪ್ತರಾಗಿದ್ದಾರೆ.

ಡಿಎಂಕೆ ಸಂಸದ ಜಗತ್ ರಕ್ಷಕನ್ ಆಸ್ತಿ ಜಪ್ತಿ ಮಾಡಿದ ಇಡಿ ಡಿಎಂಕೆ ಸಂಸದ ಜಗತ್ ರಕ್ಷಕನ್ ಆಸ್ತಿ ಜಪ್ತಿ ಮಾಡಿದ ಇಡಿ

2018ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 69,990 ಮತಗಳನ್ನು ಪಡೆದು ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು.

ರಾಮನಗರ, ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದ್ದ ಎಚ್. ಡಿ. ಕುಮಾರಸ್ವಾಮಿ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.

Recommended Video

Namma Metro ಸಿಬ್ಬಂದಿಗಳಿಗೆ ಕೊರೊನ ಸೋಂಕು | Oneindia Kannada

ಡಿ. ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಯ ಆರೋಪದ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಇಕ್ಬಾಲ್ ಅವರನ್ನು ವಿಚಾರಣೆಗೆ ಕರೆದಿದೆಯೇ? ಎಂಬುದು ಇನ್ನೂ ತಿಳಿದು ಬರಬೇಕಿದೆ.

English summary
The Enforcement Directorate issued the summons to KPCC president D. K. Shivakumar close aide and Ramanagara Congress leader Iqbal Hussain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X