ಬೆಳ್ಳಂಬೆಳಿಗ್ಗೆ ಸಾಸಲಪುರ ಗ್ರಾಮಕ್ಕೆ ನುಗ್ಗಿ ದಾಂಧಲೆ ನಡೆಸಿದ ಒಂಟಿಸಲಗ
ರಾಮನಗರ, ಮಾರ್ಚ್ 06: ಬೆಳ್ಳಂಬೆಳಿಗ್ಗೆ ಒಂಟಿ ಸಲಗ ಗ್ರಾಮಕ್ಕೆ ನುಗ್ಗಿ ಆನೆ, ಹಸು, ಎಮ್ಮೆ, ಬೈಕ್ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿರುವ ಘಟನೆ ತಾಲೂಕಿನ ಸಾತನೂರು ಸಮೀಪದ ಸಾಸಲಪುರ ಮತ್ತು ಹಲಸಿನಮರದದೊಡ್ಡಿ ಗ್ರಾಮಗಳಲ್ಲಿ ನಡೆದಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗವೊಂದು ಬೆಳಿಗ್ಗೆ 8 ಗಂಟೆಗೆ ಮೊದಲು ಸಾಸಲಪುರ ಗ್ರಾಮಕ್ಕೆ ನುಗ್ಗಿ ಮರೀಗೌಡ ಎಂಬುವರಿಗೆ ಸೇರಿದ ಎರಡು ಸೀಮೆ ಹಸುಗಳ ಮೇಲೆ ದಾಳಿಮಾಡಿ ಕಾಲಿನಿಂದ ತುಳಿದು ಎರಡು ಹಸುಗಳನ್ನು ಕೊಂದಿದೆ.
ನಂತರ ಪಕ್ಕದ ಗ್ರಾಮ ಹಲಸಿನಮರದೊಡ್ಡಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಕೆಂಪೇಗೌಡ ಎಂಬುವವರಿಗೆ ಸೇರಿದ ಎಮ್ಮೆಯನ್ನು ತಿವಿದು ಕೊಂದಿದೆ, ಜೊತೆಗೆ ಗ್ರಾಮದ ಇತರೆ ನಾಟಿ ಹಸುಗಳ ಮೇಲೆಯು ಹಲ್ಲೆ ನಡೆಸಿ ಗಾಯಗೊಳಿಸಿದೆ. ಅಲ್ಲದೇ ಮಲ್ಲೇಗೌಡನ ದೊಡ್ಡಿಯಲ್ಲಿ ಬೈಕ್ ಯೊಂದನ್ನು ತುಳಿದು ಧ್ವಂಸಗೊಳಿಸಿದೆ.

ಕಾಡಾನೆಯ ದಾಳಿಯಿಂದ ಜನರಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು, ನಂತರ ಗ್ರಾಮಸ್ಥರು ಪಟಾಕಿ ಸಿಡಿಸಿ ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟು ಕಾಡಿಗೆ ಆನೆಯನ್ನು ಓಡಿಸಿದ್ದಾರೆ. ಪಟಾಕಿ ಶಬ್ಧ ಹಾಗೂ ಜನರ ಕಿರುಚಾಟಕ್ಕೆ ಬೆದರಿದ ಒಂಟಿ ಸಲಗ ಕಬ್ಬಾಳು ಅರಣ್ಯ ವಲಯದ ಹಲಸಿನಮರದೊಡ್ಡಿ ಅರಣ್ಯದೊಳಗೆ ತೆರಳಿದೆ.

ಕಾಡಾನೆ ದಾಳಿಗೆ ತುತ್ತಾದ ಗ್ರಾಮಗಳಿಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಒಂಟಿ ಸಲಗದ ದಾಳಿಯಿಂದ ಎರಡು ಹಸು, ಒಂದು ಎಮ್ಮೆ ಬಲಿಯಾದ ಸ್ಥಳ ಪರಿಶೀಲನೆ ನಡೆಸಿದ್ದು, ಹಸು ಕಳೆದುಕೊಂಡವರಿಗೆ ಹಾಗೂ ಆಸ್ತಿ ನಷ್ಟಗೊಂಡವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications