ಅಪ್ಪು ಸಾವಿನಿಂದ ಮನನೊಂದು ಆತಹತ್ಯೆಗೆ ಶರಣಾದ ಅಭಿಮಾನಿಯಿಂದ ನೇತ್ರದಾನ
ರಾಮನಗರ, ನವೆಂಬರ್, 4: ಮೇರು ಚಿತ್ರನಟ ಪುನೀತ್ ರಾಜ್ಕುಮಾರ್ ಸಾವಿನಿಂಧ ಮನನೊಂದು ಅತ್ಮಹತ್ಯೆಗೆ ಶರಣಾದ ಅಭಿಮಾನಿಯೊಬ್ಬ ಬಳಿಕ ಪುನೀತ್ ಅವರಂತೆಯೇ ತಾನೂ ಸಹ ನೇತ್ರದಾನ ಮಾಡುವ ಮೂಲಕ ಅಪ್ಪುವಿನಂತೆ ಆದರ್ಶವನ್ನು ಮೆರೆದಿದ್ದಾನೆ.
ಪುನೀತ್ ರಾಜ್ಕುಮಾರ್ ನಿಧನದಿಂದ ಮನನೊಂದಿದ್ದ ಅಭಿಮಾನಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಪಟ್ಟಣದ ಎಲೇಕೇರಿ ಬಡಾವಣೆಯಲ್ಲಿ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ ಸವಿತಾ ಸಮಾಜದ ಗೌರವಾಧ್ಯಕ್ಷ ದಿವಂಗತ ಎಲೇಕೇರಿ ಕೃಷ್ಣಪ್ಪನವರ ಮಗ ವೆಂಕಟೇಶ್(ಡಾಲಿವೆಂಕಿ) (25) ಮೃತ ಅಪ್ಪು ಅಭಿಮಾನಿ ಆಗಿದ್ದಾರೆ. ಪವರ್ ಸ್ಟಾರ್ ನಟಿಸಿದ ಚಿತ್ರ ಎಂದ್ರೆ ಸಾಕು ಮೊದಲ ದಿನವೇ ಚಿತ್ರ ಮಂದಿರಕ್ಕೆ ಹೋಗಿ ನೋಡುತ್ತಿದ್ದ ಎನ್ನಲಾಗಿದೆ.

ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ ವೆಂಕಟೇಶ್, ಅಪ್ಪು ನಿಧನದಿಂದ ಮನವೊಂದು ಕಳೆದ ಮೂರು ದಿನಗಳಿಂದ ಊಟ ಬಿಟ್ಟಿದ್ದನು ಎನ್ನಲಾಗಿದ್ದು. ಅಪ್ಪು ಸಮಾಧಿ ನೋಡಲೇಬೇಕೆಂಬ ಆಶಯ ಹೊಂದಿದ್ದ. ಮೃತ ವೆಂಕಟೇಶ ತನ್ನ ಸ್ನೇಹಿತರ ಬಳಿ ಅಪ್ಪು ಸಮಾಧಿಗೆ ಹೋಗಬೇಕು ಎಂಬ ತನ್ನ ಆಸೆಯನ್ನೂ ವ್ಯಕ್ತಪಡಿಸಿದ್ದ.
ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಯಗಿರುವ ವೆಂಕಟೇಶ್ ತನ್ನ ಕೈ ಮೇಲೆ ಪುನೀತ್ ಹೆಸರನ್ನು ಬರೆಸಿಕೊಂಡಿದ್ದ. ಜೊತೆಗೆ ಪುನೀತ್ಅವರ ಹುಟ್ಟುಹಬ್ಬದ ವೇಳೆ ಅವರು ಎಲ್ಲಿದ್ದರೂ ಭೇಟಿ ಮಾಡಿ ಶುಭಾಶಯ ಕೋರುತ್ತಿದ್ದರು. ಪುನೀತ್ ನಿಧನದಿಂದ ಮಾನಸಿಕವಾಗಿ ಮನನೊಂದು ಖಿನ್ನತಗೆಗೂ ಒಳಗಾಗಿದ್ದ. ರಾತ್ರಿ ಮಲಗಿ ಬೆಳಗಾಗುವುದರೊಳಗೆ ನೇಣಿನ ಶರಣಾಗಿದ್ದಾನೆ.
ಅಪ್ಪು ಅಭಿಮಾನಿಯ ಆತ್ಮಹತ್ಯೆಯ ಬಗ್ಗೆ ಯಾರಿಗೂ ಮಾಹಿತಿ ನೀಡದೆ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ ಆತನ ಸ್ನೇಹಿತರ ಮೂಲಕ ಯುವಕ ಆತ್ಮಹತ್ಯೆ ಮಾಡಿಕೊಂಡಿರು ಬಗ್ಗೆ ಮಾಹಿತಿ ಪಡೆದ ಪೋಲಿಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಪೋಷಕರಿಗೆ ಶವ ಹಸ್ತಾಂತರ ಮಾಡಿದ್ದಾರೆ.

ಪುನೀತ್ರಂತೆ ತಾನು ನೇತ್ರದಾನ ಮಾಡಿದ ಅಭಿಮಾನಿ :
ಸಾವಿನ ಬಳಿಕ ನೇತ್ರ ದಾನ ಮಾಡಿ ನಾಲ್ಕು ಮಂದಿಗೆ ದೃಷ್ಠಿ ನೀಡಿರುವ ಅಪ್ಪು ಅವರ ದಾರಿಯಲ್ಲೇ ಅಭಿಮಾನಿ ವೆಂಕಟೇಶ್ ಕುಟುಂಬದವರು ಮಗನ ಕಣ್ಣನ್ನು ದಾನ ಮಾಡಿ ಮಗನ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಮೂಲಕ ದುಃಖದಲ್ಲೂ ಆದರ್ಶ ಮೆರಿದ್ದಿದ್ದಾರೆ.
ಆತ್ಮಹತ್ಯೆ ದಾರಿಯಲ್ಲ:
ಪನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ಹಲವು ಅಭಿಮಾನಿಗಳು ಆತ್ಮಹತ್ಯೆ ಶರಣಾಗುದ್ದು, ಇನ್ನೂ ಅಭಿಮಾನಿಗಳ ಅತ್ಮಹತ್ಯೆ ಘಟನೆಗಳು ವರದಿಯಾಗುತ್ತಿದ್ದು ಖಂಡನೀಯವಾಗಿದ್ದೆ.
''ಪುನೀತ್ ಮೇಲೆ ಅಭಿಮಾನ ಹೊಂದಿರವ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡು ನಿಮ್ಮ ಕುಟುಂಬವನ್ನು ಸಂಕಷ್ಟಕ್ಕೆ ದೂಡಬೇಡಿ. ಇದರಿಂದ ಪುನೀತ್ ಕಳೆದುಕೊಂಡಿರುವ ನಮಗೂ ಸಹ ಹೆಚ್ಚಿನ ದುಃಖ ಆಗುತ್ತದೆ. ಪುನೀತ್ ಅವರ ಪತ್ನಿ ಅಶ್ವಿನಿ ಅವರೂ ಸಹ ಅಭಿಮಾನಿಗಳ ಸಾವಿನಿಂದ ಬಹಳ ನೊಂದುಕೊಂಡಿದ್ದಾರೆ. ಆದ್ದರಿಂದ ಅಭಿಮಾನಿಗಳಿಗೆ ಕಾಲುಮುಗಿದು ಕೇಳುತ್ತೇನೆ. ಆತ್ಮಹತ್ಯೆಯ ನಿರ್ಧಾರ ಮಾಡಬೇಡಿ" ಎಂದು ಪುನೀತ್ ರಾಜ್ಕುಮಾರ್ ಸಹೋದರ ರಾಘವೇಂದ್ರ ರಾಜ್ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications