ಕೊರೊನಾ ಭೀತಿಗೆ ದೇವರ ಮೊರೆ: ಕನಕಪುರದಲ್ಲಿ ಸಾಮಾಜಿಕ ಅಂತರವಿಲ್ಲ
ರಾಮನಗರ, ಮೇ 14: ಕೊರೊನಾ ವೈರಸ್ ಭೀತಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಕಟ್ಟುನಿಟ್ಟಿನ ಆದೇಶವಿದ್ದರೂ, ಗ್ರಾಮಸ್ಥರು ಸಾಮೂಹಿಕವಾಗಿ ಒಂದೇ ಕಡೆ ಸೇರಿ ದೇವರ ಮೊರೆ ಹೋಗಿದ್ದಾರೆ. ಇದರಿಂದಾಗಿ ಲಾಕ್ ಡೌನ್ ಉಲ್ಲಂಘನೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಡಿ ಗ್ರಾಮ ಕೊಳಗೊಂಡನಹಳ್ಳಿಯಲ್ಲಿ ನಡೆದಿದೆ.
Recommended Video
ದೇಶದಲ್ಲೇ ಕೊರೊನಾ ಹಾಟ್ ಸ್ಪಾಟ್ ಮೊದಲ ಸ್ಥಾನದಲ್ಲಿರುವ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಗ್ರಾಮವೇ ಕೊಳಗೊಂಡನಹಳ್ಳಿ. ಗ್ರಾಮದ ಜನರು ತಮ್ಮ ಗ್ರಾಮಕ್ಕೆ ಕೊರೊನಾ ಮಹಾಮಾರಿ ಬರದಿರಲಿ ಎಂದು ಇಡೀ ರಾತ್ರಿ ಮೆರವಣಿಗೆ ಮತ್ತು ಗ್ರಾಮದ ಎಲ್ಲಾ ಬೀದಿಗಳಲ್ಲಿ ಪಂಜು ಹಿಡಿದು ದೇವರ ಪೂಜೆ ಮಾಡಿದ್ದಾರೆ.
ಬೆಳಿಗ್ಗೆ ಗ್ರಾಮದ ಮಹಿಳೆಯರೆಲ್ಲ ತಂಬಿಟ್ಟಿನ ಆರತಿ ತಲೆಯ ಮೇಲೆ ಹೊತ್ತು ಪ್ರದಕ್ಷಿಣೆ ಹಾಕಿ ಸಾಮೂಹಿಕವಾಗಿ ಒಂದೆಡೆ ಸೇರಿ ದೇವರಿಗೆ ಪೂಜೆ ಸಲ್ಲಿಸಿ ನಮ್ಮ ಗ್ರಾಮ ಕೊರೊನಾ ಭೀತಿಯಿಲ್ಲದೇ ಕ್ಷೇಮವಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಕೊಳಗೊಂಡನಹಳ್ಳಿ ಜನರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಸಾಮಾಜಿಕ ಅಂತರವಿಲ್ಲದೇ ಸಾಮೂಹಿಕವಾಗಿ ಒಂದು ಕಡೆ ಸೇರಿ ಪೂಜೆ ಮಾಡಿದ ಕಾರಣ ಕೊರೊನಾ ಸೋಂಕು ಹರಡುವ ಭೀತಿಯಿಂದ ಅಕ್ಕ ಪಕ್ಕದ ಗ್ರಾಮಗಳಲ್ಲಿ ಇದೀಗ ಒಂದು ತರದ ಭಯದ ವಾತಾವರಣ ಮನೆ ಮಾಡಿದೆ.
ಒಂದು ಮೂಲದ ಪ್ರಕಾರ ಸ್ಥಳೀಯ ಗ್ರಾಮ ಪಂಚಾಯತಿ ಪಿಡಿಒ ಅನುಮತಿ ಪಡೆದು ಜಾತ್ರೆ ನಡೆಸಿರುವ ಬಗ್ಗೆ ಮಾತು ಕೇಳಿ ಬರುತ್ತಿವೆ. ಅಲ್ಲದೇ ಪೊಲೀಸರಿಗೂ ಈ ಬಗ್ಗೆ ಮಾಹಿತಿ ಇದ್ದರೂ ಸುಮ್ಮನಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕೂಡಲೇ ಜಿಲ್ಲಾಡಳಿತ ಸೂಕ್ತ ತನಿಖೆ ನಡೆಸಿ ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

ಇಲ್ಲಿಯವರಗೆ ಹಸಿರು ವಲಯದಲ್ಲಿದ್ದ ರಾಮನಗರ ಜಿಲ್ಲೆಗೆ ಇದೀಗ ಕೊಳಗೊಂಡನಹಳ್ಳಿ ಜನರು ಸಾಮೂಹಿಕವಾಗಿ ಸೇರಿ ಹಬ್ಬ ಆಚರಿಸಿದ ಕಾರಣ ಕೊರೊನಾ ಮಹಾಮಾರಿ ವಕ್ಕರಿಸಿಬಿಡುತ್ತಾ ಎಂಬ ಆತಂಕ ಜನರನ್ನು ಕಾಡುತ್ತಿದೆ.
More than thousand people gathered for a village temple fair at Kolagindahalli, Ramanagara district violating Lockdown norms .. No Masks No Social distancing ... @CMofKarnataka @DKShivakumar @police_rmn @CEORAMANAGARA pic.twitter.com/XRqDNzKKKM
— yasir mushtaq (@path2shah) May 15, 2020
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications