ಕಾಂಗ್ರೆಸ್ ಬಿಟ್ಟ ಜೇಡ್ರಳ್ಳಿ ಕೃಷ್ಣಪ್ಪ ಅಂತೂ ಜೆಡಿಎಸ್ ಸೇರಿದ್ರಪ್ಪಾ
Recommended Video

ಮಾಗಡಿ (ರಾಮನಗರ), ಮಾರ್ಚ್ 26: "ಜೆಡಿಎಸ್ ಸೇರ್ತೀನಿ, ಇಲ್ಲ ರೀ ನಾನು ಬರೀ ಅದೊಂದು ದಿನ ಹೋಗಿದ್ದೆ ಅಷ್ಟೇ" ಎಂದು ಎರಡು ದಿನ ಸುದ್ದಿಯಲ್ಲಿದ್ದ ಜೇಡ್ರಳ್ಳಿ ಕೃಷ್ಣಪ್ಪ ಭಾನುವಾರ ಮಾಗಡಿಯಲ್ಲಿ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಅಂತೂ ಜೆಡಿಎಸ್ ಗೆ ಸೇರ್ಪಡೆ ಆಗಿದ್ದಾರೆ.
ಕೆಂಪೇಗೌಡ ಪ್ರಾಧಿಕಾರದ ನಿರ್ದೇಶಕರಾಗಿದ್ದ ಎಚ್.ಎಂ.ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಸಾಮಾಜಿಕ ಜಾಲತಾಣದ ಮೂಲಕ, "ನಾನು ಜೆಡಿಎಸ್ ಸೇರಿಲ್ಲ. ಕೇವಲ ವದಂತಿ ಅಷ್ಟೆ. ಕಾರ್ಯಕರ್ತರ ಸಭೆ ನಡೆಸಿ, ಅವರ ಅಭಿಪ್ರಾಯ ಪಡೆದ ನಂತರ ನನ್ನ ನಿರ್ಧಾರ ತಿಳಿಸುತ್ತೇನೆ" ಎಂದು ಹೇಳಿದ್ದರು.
ಚಿತ್ರಗಳು : ವಿಕಾಸ ಪರ್ವ ಯಾತ್ರೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ
ಆದರೆ, ಭಾನುವಾರ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರಿಂದ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಕೈ ಪಾಳಯದಿಂದ ಜೆಡಿಎಸ್ ಅಂಗಳಕ್ಕೆ ಜಿಗಿದಿದ್ದಾರೆ.

ನಾನು ಈಗಾಗಲೇ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಹಲವಾರು ಜನೋಪಯೋಗಿ ಕಾರ್ಯಗಳನ್ನು ಮಾಡುತ್ತಿದ್ದೇನೆ. ನನ್ನ ಸಾಮಾಜಿಕ ಕಳಕಳಿಯನ್ನು ಕಂಡು ಪಕ್ಷಕ್ಕೆ ಆಹ್ವಾನ ನೀಡಿದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು ಎಂದು ಹೇಳಿದರು.
ಮಾಗಡಿ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತೇನೆ. ಪಕ್ಷ ಸಂಘಟನೆ ಮಾಡಿ, ಜೆಡಿಎಸ್ ಅಭ್ಯರ್ಥಿ ಎ.ಮಂಜು ಪರ ಕೆಲಸ ಮಾಡಿ, ಗೆಲುವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.












Click it and Unblock the Notifications