ರಾಮನಗರ; ಹೊತ್ತಿ ಉರಿದ ಬ್ಯಾಟರಿ ತಯಾರಿಕಾ ಕಾರ್ಖನೆ
ರಾಮನಗರ, ಜನವರಿ 05: ಆಕಸ್ಮಿಕವಾಗಿ ಬ್ಯಾಟರಿ ತಯಾರಿಕಾ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನವನ್ನು ನಡೆಸುತ್ತಿದ್ದಾರೆ.
ಮಂಗಳವಾರ ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ವಲಯದಲ್ಲಿರುವ ಶಕ್ತಿ ಬ್ಯಾಟರೀಸ್ ಕಾರ್ಖಾನೆ ಬೆಂಕಿಗಾಹುತಿಯಾಗಿದೆ. ತಯಾರಿಕಾ ಘಟಕದ ಥರ್ಮಕೋಲಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರ್ಖಾನೆಗೆ ಹಬ್ಬಿದೆ.
ಕಾರ್ಖಾನೆಯ ಒಳಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಕಾರ್ಮಿಕರು ತಕ್ಷಣವೇ ಹೊರಗೆ ಓಡಿ ಹೋಗಿದ್ದಾರೆ. ಇದರಿಂದಾಗಿ ಯಾರಿಗೂ ಅಪಾಯವಾಗಿಲ್ಲ.

ಕ್ಷಣ-ಕ್ಷಣಕ್ಕೂ ಬೆಂಕಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಶಕ್ತಿ ಬ್ಯಾಟರೀಸ್ ಕಂಪನಿಯ ಸುತ್ತಲೂ ದಟ್ಟವಾದ ಹೊಗೆ ಅವರಿಸಿದೆ. ಅಕ್ಕ ಪಕ್ಕದಲ್ಲಿ ಹಲವಾರು ಕಾರ್ಖಾನೆಗಳಿದ್ದು, ಅವುಗಳಿಗು ಬೆಂಕಿ ವ್ಯಾಪಿಸುವ ಆತಂಕ ಎದುರಾಗಿದೆ.
ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನವನ್ನು ಪಡುತ್ತಿದ್ದಾರೆ. ಕತ್ತಲೆ ಮತ್ತು ದಟ್ಟವಾದ ಹೊಗೆ ಕಾರ್ಯಚರಣೆಗೆ ಅಡ್ಡಿ ಮಾಡಿದೆ. ಕಾರ್ಖಾನೆಯ ಸ್ಥಿತಿ ಕಂಡು ಮಾಲೀಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications