ಬೆಂಗಳೂರು ಹೊರವಲಯದಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ
ರಾಮನಗರ, ಜನವರಿ 29: ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತರುಳು ಗ್ರಾಮದ ಬಳಿ ಈ ಘಟನೆ ನಡೆದಿದೆ.
ಶುಕ್ರವಾರ ತರಳು ಹಾಗೂ ಗುಳೈಕ್ ಗ್ರಾಮಗಳ ನಡುವಿನ ಕಗ್ಗಲಿಪುರ-ಬನ್ನೇರಘಟ್ಟ ಮುಖ್ಯ ರಸ್ತೆಯಲ್ಲಿನ ಅಗರಬತ್ತಿ ಕಾರ್ಖಾನೆಯಲ್ಲಿ ಸುಮಾರು 12 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿ ಕಾರ್ಖಾನೆ ತುಂಬಾ ಹಬ್ಬಿದೆ.
ಲಸಿಕೆಗಳು ಸುರಕ್ಷಿತ: ಬೆಂಕಿ ಅವಘಡದ ಬಳಿಕ ಅದಾರ್ ಸ್ಪಷ್ಟನೆ
ಬೆಂಕಿ ಮತ್ತು ಹೊಗೆಯನ್ನು ನೋಡಿದ ಕಾರ್ಖಾನೆಯಲ್ಲಿದ್ದ ಎಲ್ಲಾ ಸಿಬ್ಬಂದಿಗಳು ತಕ್ಷಣ ಹೊರ ಬಂದಿದ್ದಾರೆ. ನೋಡ ನೋಡುತ್ತಲೇ ಬೆಂಕಿ ಇಡೀ ಕಾರ್ಖಾನೆಯನ್ನೆ ಆವರಿಸಿ ಸುತ್ತಮತ್ತಲೂ ದಟ್ಟ ಹೊಗೆ ಆವರಿಸಿತ್ತು.
ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅನಾಹುತ: 10 ಶಿಶುಗಳ ಸಜೀವ ದಹನ
ಬೆಂಕಿ ಅವಘಡಕ್ಕೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ಶಂಕಿಸಲಾಗಿದೆ. ಕಾರ್ಖಾನಯಲ್ಲಿ ಅಗರಬತ್ತಿ ತಯಾರಿಕೆ ಕಚ್ಚಾ ಸಾಮಾಗ್ರಿಗಳನ್ನು ಸಂಗ್ರಹ ಮಾಡಲಾಗಿತ್ತು. ಯಂತ್ರಗಳಿಗೂ ಹಾನಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ರಾಮನಗರ; ಹೊತ್ತಿ ಉರಿದ ಬ್ಯಾಟರಿ ತಯಾರಿಕಾ ಕಾರ್ಖನೆ
ಅಗ್ನಿ ದುರಂತ ಸಂಭವಿಸಿದ ವಿಷಯ ತಿಳಿಯುತ್ತಿದಂತೆ 5 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಸಂಪೂರ್ಣ ಕಾರ್ಖಾನೆ ಸುಟ್ಟ ಕರಕಲಾಗಿದೆ.
ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಮಿಕರು ಹೊರಗೋಡಿ ಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.