ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲಿ ಪೊಲೀಸರ ಮೇಲೆ ಹೂ ಮಳೆಗೆರೆದ ಸಾರ್ವಜನಿಕರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಏಪ್ರಿಲ್ 21: ಕೊರೊನಾ ವೈರಸ್ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಪೊಲೀಸ್ ಪಥಸಂಚಲಕ್ಕೆ ಚನ್ನಪಟ್ಟಣದ ಸಾರ್ವಜನಿಕರು ಹೂ ಮಳೆಗೆರೆದಿದ್ದಾರೆ. ಕೊರೊನಾ ವೈರಸ್ ಭೀತಿ ನಡುವೆಯೂ ಜೀವದ ಹಂಗು ತೊರೆದು ದುಡಿಯುತ್ತಿರುವ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

Recommended Video

ರಾಮನಗರದ ಸಭೆಯಲ್ಲಿ ಕುಮಾರಸ್ವಾಮಿಯವರು ತೆಗೆದುಕೊಂಡ ತೀರ್ಮಾನವೇನು ? | Kumarswamy | Ramnagara | DC | SP

ಚನ್ನಪಟ್ಟಣ ನಗರದಲ್ಲಿ ಲಾಕ್ ಡೌನ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ ಪೊಲೀಸರು ವಿನೂತನ ಪ್ರಯೋಗ ಮಾಡಿದ್ದಾರೆ. ಡಿವೈಎಸ್ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

Flower Rain From People To Corona Awareness Police In Channapattana


ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಮನೆಯಿಂದ ಅನಗತ್ಯವಾಗಿ ಯಾರು ಹೊರ ಬರಬೇಡಿ ಎಂದು ಮನವಿ ಮಾಡಿದರು. ಇತ್ತ ಪೊಲೀಸರ ನಡೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಪೊಲೀಸರು ರೂಟ್ ಮಾರ್ಚ್ ಮಾಡುತ್ತ ಸಾಗುತ್ತಿದ್ದ ರಸ್ತೆಗಳಲ್ಲಿ ಸಾರ್ವಜನಿಕರು ಹೂ ಎರಚುವುದರ ಮೂಲಕ ಪೊಲೀಸರ ಕರ್ತವ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದು ಕಂಡುಬಂದಿದೆ.
Flower Rain From People To Corona Awareness Police In Channapattana

ಇನ್ನು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಕಾರ್ಯಕರ್ತರ ಜತೆಗೆ ಸೇರಿ ಪೊಲೀಸರ ಮೇಲೆ ಹೂ ಎರಚುತ್ತ, ಪೊಲೀಸರ ಜಾಗೃತಿಗೆ ಅಭಿನಂದಿಸಿದರು.

English summary
Police march held led by DYSP Om Prakash and raised awareness of coronavirus among the public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X